Namma Metro: ಇಂದು ಹೆಬ್ಬಾಳ 45 ಎಕರೆ ಜಾಗ ಹಸ್ತಾಂತರ ಫೈನಲ್ ಆಗುತ್ತಾ?
ಬೆಂಗಳೂರು, ಮೇ 05: ಬೆಂಗಳೂರು ನಮ್ಮ ಮೆಟ್ರೋ ರೈಲು ನಿಗಮಕ್ಕೆ ಅಗತ್ಯವಾಗಿ ಬೇಕಾಗಿರುವ ಹತ್ತಾರು ಎಕರೆ ಜಾಗದ ಕುರಿತು ಮಹತ್ವದ ಸಭೆ ಇಂದು ನಡೆಯಲಿದೆ. ಮೆಟ್ರೋ ನಿಲ್ದಾಣಗಳು ಅಭಿವೃದ್ಧಿ ಸೇರಿದಂತೆ ಬಹುಮಾದರಿ ಸಾರಿಗೆ ಕೇಂದ್ರ ಆಗಲಿರುವ ಹೆಬ್ಬಾಳದ ಜಾಗ ಈ ಬಾರಿಯ ಸಭೆ ಬಳಿಕವಾದರೂ BMRCL ಗೆ ನೀಡಲು ಅನುಮತಿ ದೊರೆಯುತ್ತಾ? ಎಂದು ಕಾದು ನೋಡಬೇಕಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸಭೆ ನಮ್ಮ ಮೆಟ್ರೋಗೆ ನಿರ್ಣಾಯಕ ಅಂತಲೂ ಹೇಳಬಹುದು.
ಈ ಹಿಂದೆ ಸಾಕಷ್ಟು ಸಭೆಗಳು ಹೆಬ್ಬಾಳದಲ್ಲಿನ 45 ಎಕರೆ ಜಾಗದ ಕುರಿತು ನಡೆದಿವೆ. ಇತ್ತೀಚೆಗೆ ಮೂಲಸೌಕರ್ಯ ಹಾಗೂ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಆದರೆ ಮಹತ್ವದ ಯಾವ ನಿರ್ಧಾರಗಳನ್ನು ಕೈಗೊಳ್ಳಲಾಗಿಲ್ಲ. ಇಂದಲ್ಲ ನಾಳೆ ಈ ಭೂಮಿ ಹಸ್ತಾಂತರ ಆಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಕಾಯುತ್ತಿದೆ.

ಈ 45 ಎಕರೆ ಭೂಮಿಯ ಭವಿಷ್ಯದ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಉನ್ನತ ಮಟ್ಟದ ಸಭೆ ಜರುಗಲಿದೆ. ಕಳೆದ 08 ತಿಂಗಳಲ್ಲಿ ಇದು ಮೂರನೇ ಸಭೆಯಾಗಿದೆ. ಸಚಿವ ಎಂ.ಬಿ. ಪಾಟೀಲ್ ಹಾಗೂ ಕೈಗಾರಿಕೆ ಇಲಾಖೆ, ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
KIADB ಸುಪರ್ದಿಯಲ್ಲಿರುವ ಹೆಬ್ಬಾಳದ 45 ಎಕರೆ ಜಾಗದ ಕುರಿತು ಬಿಎಂಆರ್ಸಿಎಲ್ ಔಪಚಾರಿಕವಾಗಿ ಭೂಮಿ ನೀಡುವಂತೆ ಮನವಿ ಮಾಡಿಕೊಂಡಿತ್ತು. ಈ ಜಾಗವನ್ನು ಭೂಮಾಲೀಕರಿಂದ ಪಡೆದಿದ್ದು, ಅವರಿಗೆ ಪರಿಹಾರ ನೀಡುವ ಪ್ರಸ್ತಾಪ ಇದೆ. ಆ ಹಣ ಮೆಟ್ರೋ ನೀಡಲು ಅಂತಲೂ ಹಿಂದಿನ ಸಭೆಯಲ್ಲಿ ಮೌಖಿಕವಾಗಿ ಸಚಿವರು ಮಾತನಾಡಿದ್ದರು. ಆದರೆ ಪರಿಹಾರ ವಿತರಣೆಯಲ್ಲಿನ ಈಗಾಗಲೇ ನಡೆದ ವಿಳಂಬ ಹಾಗೂ ಲಿಖಿತ ಪ್ರತಿಕ್ರಿಯೆಗಳು ಸಿಗದ ಹಿನ್ನೆಲೆ ಕೋಟ್ಯಂತರ ರೂಪಾಯಿ ಹಣ ಒದಗಿಸುವುದು ಸರಿಯಲ್ಲ ಎಂದು ಸುಮ್ಮನಾಯಿತು.
ಅಲ್ಲದೇ ಹೆಬ್ಬಾಳದಿಂದ ಸರ್ಜಾಪುರ ವರೆಗೆ ನಮ್ಮ ಮೆಟ್ರೋ ಕೆಂಪು ಮಾರ್ಗ (Namma Metro Red Line Project) ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಭೂಮಿ ಅಗತ್ಯವಿದೆ. ಈ ಸಂಬಂಧ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಅವರು ಸಹ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
2026ಕ್ಕೆ ಭೂಮಿ ಹಸ್ತಾಂತರ ಆಗುತ್ತಾ?
ಸುಮಾರು ಎರಡು ದಶಕಗಳಿಂದ ಭೂಮಾಲೀಕರಿಗೆ ಪರಿಹಾರ ನೀಡುವಲ್ಲಿ KIADB ವಿಫಲವಾಗಿದೆ. ಇಂದಿನ ಮಾರುಕಟ್ಟೆ ಬೆಲೆಯನ್ನು ಭೂಮಾಲೀಕರು ಕೇಳುತ್ತಿದ್ದಾರೆ. ಇದರಿಂದಾಗಿ ಒಂದಷ್ಟು ಕಾನೂನು ತೊಡಕು ಉಂಟಾಗಿದೆ. ಈ ಪರಿಹಾರ ಹಣ ಕೊಡಲು ಬಿಎಂಆರ್ಸಿಎಲ್ ಸಹ ಸಿದ್ಧವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಲಿಖಿತ ಯಾವ ಒಪ್ಪಂದ, ಅನುಮತಿಗಳು ಆಗಿಲ್ಲ. ಹೀಗಾಗಿ 45 ಎಕರೆ ಭೂಮಿ ಹಸ್ತಾಂತರ ದಿನದಿಂದ ದಿನಕ್ಕೆ ವಿಳಂಬವಾಗುತ್ತಿದೆ.
ಸದ್ಯ ಈ ಜಾಗವನ್ನು ಖಾಸಗಿ ಡೆವಲಪರ್ಗೆ ನೀಡಲಾಗಿದ್ದು, 2026 ಮಾರ್ಚ್ಗೆ ಭೂಮಿ ಒಪ್ಪಂದ ಪೂರ್ಣಗೊಳ್ಳಲಿದೆ. ಭೂಮಿ ನೀಡಿದಲ್ಲಿ ಪ್ರತಿ ಎಕೆರೆಗೆ 12.10 ಕೋಟಿ ರೂ.ಗಳನ್ನು ಪಾವತಿಸಲು ನಮ್ಮ ಮೆಟ್ರೋ ಸಿದ್ಧವಾಘಿದೆ. ಈ ಮೂಲ ಕೊಟ್ಟು ಭೂಮಿಗೆ ಒಟ್ಟು 551.15 ಕೋಟಿ ರೂ.ಗಳ ಪರಿಹಾರ ನೀಡಬೇಕಾಗುತ್ತದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications