Get Updates
Get notified of breaking news, exclusive insights, and must-see stories!

ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ ಯೋಜನೆ: ಡಿಕೆ ಶಿವಕುಮಾರ್‌ ಮಹತ್ವದ ಮಾಹಿತಿ

ಕೆಂಪಾಪುರದಲ್ಲಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಮಾಧಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಗಡಿ ಪಟ್ಟಣದಲ್ಲಿ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ್ದಾರೆ. ಮಾಗಡಿಯಲ್ಲಿ ಕೆಂಪೇಗೌಡರು ನಿರ್ಮಿಸಿದ ಐತಿಹಾಸಿಕ ಕೋಟೆ, ಸೋಮೇಶ್ವರ ದೇವಾಲಯ, ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಐತಿಹಾಸಿಕ ಮಾಗಡಿ ಕೋಟೆಯ ಹಳೆಯ ವೈಭವವನ್ನು ಹಿಂದಿರುಗಿಸಲು, ಸಂರಕ್ಷಿಸಲು ಕೋಟೆಯ ಪುನರುಜ್ಜೀವನ ಕಾರ್ಯಕ್ಕಾಗಿ 103 ಕೋಟಿ ರೂಪಾಯಿ ಅನುದಾನವನ್ನು ಬೆಂಗಳೂರು ನಗರದಿಂದ ನೀಡಿದ್ದೇನೆ ಎಂದಿದ್ದಾರೆ.

ಬೆಂಗಳೂರಿನ ಸುಮನಹಳ್ಳಿಯಲ್ಲಿ 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಈ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಚರ್ಚಿಸಿದ್ದಾರೆ. ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ನಾವು ಬದ್ಧ. ಮಾಗಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ, ಕೆಂಪೇಗೌಡರ ಹೆಸರು ಶಾಶ್ವತವಾಗಿ ಉಳಿಸಲು ನಾವು ಬದ್ಧ ಎಂದು ಹೇಳಿದ್ದಾರೆ.

DK Shivakumar Plans Develop Kempegowda Memorial In Kempapura Karnataka

ಇಂದು ಮಾಗಡಿ ಪಟ್ಟಣದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಡಿಕೆ ಶಿವಕುಮಾರ್‌ ಈ ವಿಚಾರ ಹಂಚಿಕೊಂಡಿದ್ದಾರೆ.

ಮಾಗಡಿಯಲ್ಲಿ 100 ಹಾಸಿಗೆಗಳ ಆಸ್ಪತ್ರೆ

ನಮ್ಮ ಸರ್ಕಾರದ ವತಿಯಿಂದ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ. ಮಾಗಡಿಯಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವುದು ಹಲವು ದಿನಗಳ ಬೇಡಿಕೆಯಾಗಿತ್ತು. 41 ಕೋಟಿ ರೂ. ವೆಚ್ಚದಲ್ಲಿ, ಎರಡು ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ. ಸಾರಿಗೆ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರು ಬಸ್‌ ನಿಲ್ದಾಣ ಹಾಗೂ ಡಿಪೋ ನಿರ್ಮಾಣ ಮಾಡಿಕೊಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದಿದ್ದಾರೆ.

DK Shivakumar Plans Develop Kempegowda Memorial In Kempapura Karnataka

ಮಾಗಡಿಯ ಕೆರೆಗಳಿಗೆ ನೀರು ತುಂಬಿಸಲು 90 ಕೋಟಿ

20 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಗಡಿಯ ಗೌರಮ್ಮನ ಕೆರೆ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದೇವೆ. 1200 ಜನರಿಗೆ ಇ -ಸ್ವತ್ತು ವಿತರಿಸಲಾಗಿದೆ. ಇನ್ನುಳಿದವರಿಗೆ ಶೀಘ್ರದಲ್ಲೇ ವಿತರಿಸಲು ಸಿದ್ಧತೆ ನಡೆಸಲಾಗಿದೆ. 13 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಚನಬೆಲೆ ಬಳಿ ಹಲವು ಅಭಿವೃದ್ಧಿ ಕೆಲಸಗಳನ್ನು ಆರಂಭಿಸುತ್ತಿದ್ದು 90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಾಗಡಿಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಹೆಚ್‌ವಿಡಿಎಸ್‌ ಯೋಜನೆಯಡಿ ರೈತರಿಗೆ ವಿದ್ಯುತ್‌ ಪರಿವರ್ತಕಗಳನ್ನು ನೀಡಿರುವುದು ಒಂದು ದಾಖಲೆಯಾಗಿ ಉಳಿದಿದೆ. ರೈತರಿಗೆ ಟ್ರಾನ್ಸ್‌ಫಾರ್ಮರ್‌ ಒದಗಿಸುವ ಯೋಜನೆ ದೇಶದಲ್ಲಿ ಯಾವುದೇ ಲೋಕಸಭಾ ಕ್ಷೇತ್ರದಲ್ಲಿಯೂ ಮಾಡಲಾಗದ ಯೋಜನೆಯನ್ನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವು ಮಾಡಿದ್ದೇವೆ ಎಂದು ಸಂತೋಷವಾಗುತ್ತದೆ. ಮಾಗಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಸದಾ ಬದ್ಧರಾಗಿರುತ್ತೇವೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+