DK Shivakumar: ಕೊಟ್ಟ ಮಾತು ಉಳಿಸಿಕೊಳ್ಳಿ: ಹೈಕಮಾಂಡ್ ಭರವಸೆ ನೆನಪಿಸಿ ಡಿಕೆ ಶಿವಕುಮಾರ್ ಪೋಸ್ಟ್...
ಬೆಂಗಳೂರು, ನವೆಂಬರ್ 27: ಕರ್ನಾಟಕ ರಾಜ್ಯ ರಾಜಕಾರಣದತ್ತ ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಕಾಂಗ್ರೆಸ್ ಸರ್ಕಾರದ ಮುಂದಿನ ಉಳಿದ 2.5ವರ್ಷದ ಅವಧಿಗೆ ಸಿಎಂ ಯಾರು? ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಡಿರುವ ಪೋಸ್ಟ್ ಸಖತ್ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ಗೆ ತಮ್ಮ ಭರವಸೆ ನೆನಪಿಸಲು ಡಿಸಿಎಂ ಮುಂದಾಗಿದ್ದು, ಸ್ಪಷ್ಟವಾಗಿ ಕಾಣಿಸುತ್ತದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯ ಕುರ್ಚಿಗಾಗಿ ಸಂಘರ್ಷ ಗುಟ್ಟಾಗಿ ಉಳಿದಿಲ್ಲ. ಇವರ ಸಿಎಂ ಸ್ಥಾನದ ಪೈಪೋಟಿ ಹೈಕಮಾಂಡ್ಗೆ ತಲೆನೋವಾಗಿದೆ. ಅಧಿಕಾರ ಹಂಚಿಕೆ ವೇಳೆ 2.5 ವರ್ಷ ಸಿದ್ದರಾಮಯ್ಯ ಸಿಎಂ, ನಂತರದ 2.5 ವರ್ಷ ಡಿಕೆ ಶಿವಕುಮಾರ್ ಅವರು ಸಿಎಂ ಆಗಿರಲಿದ್ದಾರೆ ಎಂಬ ಮಾತು ಸರ್ಕಾರ ಅಧಿಕಾರಕ್ಕೆ ಬಂದಾಗಿ ಕೇಳಿ ಬಂದಿತ್ತು. ಹೀಗೆಂದು ಹೇಳಿಯೇ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಹುದ್ದೆ ನೀಡಲಾಗಿತ್ತು ಎನ್ನಲಾಗಿದೆ.

ಆದರೆ ಈಗ ಸಿದ್ದರಾಮಯ್ಯ ಅವರು ತಾವೇ ಐದು ವರ್ಷ ಪೂರ್ಣಾವಧಿ ಸಿಎಂ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತಲೂ ತಿಳಿಸಿದ್ದರು. ಇದು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿದ್ದೆಗಡಿಸಿದೆ. ಅವರ ಬೆಂಬಲಿಗರನ್ನು ದೆಹಲಿಗೆ ದೌಡಾಯಿಸುವಂತೆ ಮಾಡಿದೆ. ಇದೆಲ್ಲ ಬೆಳವಣಿಗೆ ಮಧ್ಯೆ ಡಿಕೆಶಿ ಅವರು ಹೈಕಮಾಂಡ್ ತಾನು ಕೊಟ್ಟಿದ್ದ ಭರವಸೆ, ಮಾತು ಉಳಿಸಿಕೊಳ್ಳಬೇಕೆಂದು ನೆನಪಿಸಿ ಪೋಸ್ಟ ಮಾಡಿದ್ದಾರೆ.
"ಪದ ಶಕ್ತಿಯೇ ವಿಶ್ವ ಶಕ್ತಿ'
ಡಿಕೆ ಶಿವಕುಮಾರ್ ಅವರು ಗುರುವಾರ ಬೆಳಗ್ಗೆ, ""ಪದ ಶಕ್ತಿಯೇ ವಿಶ್ವ ಶಕ್ತಿ', "ಜಗತ್ತಿನ ಅತಿದೊಡ್ಡ ಶಕ್ತಿ ಎಂದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಅಥವಾ ನಾನು ಸೇರಿದಂತೆ ಬೇರೆ ಯಾರೇ ಆಗಿರಲಿ, ಎಲ್ಲರೂ ಹೇಳಿದಂತೆ ನಡೆಯಬೇಕು. ಪದ ಶಕ್ತಿಯೇ ವಿಶ್ವ ಶಕ್ತಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸಭೆ ಬಳಿಕ ದೆಹಲಿಯಲ್ಲಿ ನಡೆದ ಮಹತ್ವ ಚರ್ಚೆಗಳು, ಸಭೆಯಲ್ಲಿ ನೀಡಿದ್ದ ಭರವಸೆಯನ್ನು ವರಿಷ್ಠರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ. ಈ ವಿಚಾರದಲ್ಲಿ ಈ ಸಲ ತಾವು ಮನವೊಲಿಕೆ ಬಗ್ಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ಡಿಕೆ ಶಿವಕುಮಾರ್ ರವಾನಿಸಿದಂತೆ ಕಾಣುಸಿತ್ತಿದೆ.
-
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ಮಾಗಡಿ ಜನರಿಗೆ ಕಾವೇರಿ, ಹೇಮಾವತಿ, ಎತ್ತಿನಹೊಳೆ ನೀರು: ಸಿಹಿಸುದ್ದಿ ಕೊಟ್ಟ ಡಿ.ಕೆ.ಶಿವಕುಮಾರ್ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್ -
ಮಾರ್ಚ್ 3ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಡಿಕೆಶಿ ನನ್ನದು ಹಾಲು-ಜೇನಿನಂತಹ ಸಂಬಂಧ, ಹುಳಿ ಹಿಂಡಲು ಬರಬೇಡಿ: ಅಶೋಕ್-ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್ -
ಹೋರಾಟಗಳ ಮೂಲಕ ಪಾಠ ಕಲಿತು ಬಂದವನು ನಾನು: ಡಿಸಿಎಂ ಡಿ.ಕೆ. ಶಿವಕುಮಾರ್ | DK Shivakumar -
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ವಿಚಾರ, ಕೇಂದ್ರ ಸರ್ಕಾರಕ್ಕೆ ಡಿಸಿಎಂ ಮಹತ್ವದ ಮನವಿ | DK Shivakumar












Click it and Unblock the Notifications