ಬೇರೆ ರಾಜ್ಯದಲ್ಲಿರುವ ಕನ್ನಡಿಗರನ್ನು ಕರೆತನ್ನಿ- ಡಿಕೆ ಶಿವಕುಮಾರ್ ಮನವಿ

ಬೆಂಗಳೂರು, ಮೇ 9: ಬೇರೆ ರಾಜ್ಯದಲ್ಲಿರುವ ಕನ್ನಡಿಗನ್ನು ಕರೆತನ್ನಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Recommended Video

      ಜಮೀರ್ ಅಹಮ್ಮದ್ ಅವರನ್ನು ಹಾಡಿ ಹೊಗಳಿದ ಸಿದ್ದರಾಮಯ್ಯ | Siddaramaiah | Oneindia Kannada

      ''ನಮ್ಮ ಕನ್ನಡದ ಅಣ್ಣ ತಮ್ಮಂದಿರು ಬೇರೆ ರಾಜ್ಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಾವಿರಾರು ಜನರು ಅಲ್ಲಿಂದ ವಾಪಸ್ ಬರಲು ಅರ್ಜಿ ಹಾಕಿದ್ದಾರೆ. ಯಾವ ಅಧಿಕಾರಿಗಳು ಕೂಡ ಅವರನ್ನು ಕರೆತರಲು ಆಸಕ್ತಿ ತೋರಿಲ್ಲ. ಅವರನ್ನು ತಾಯಿ ನಾಡಿಗೆ ಕರೆದುಕೊಂಡು ಬರಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ'' ಎಂದಿದ್ದಾರೆ.

      DK Shivakumar Requested Yediyurappa To Bring Back Kannadigas From Other States

      ಹೊರ ರಾಷ್ಟ್ರದಲ್ಲಿ ಇದ್ದ ಕನ್ನಡಿಗರನ್ನು ಈಗಾಗಲೇ ವಿಮಾನಗಳ ಮೂಲಕ ಕರೆತರುವ ಪ್ರಯತ್ನ ನಡೆದಿದೆ. ಅದೇ ರೀತಿ ಬೇರೆ ರಾಜ್ಯದಲ್ಲಿರುವವರನ್ನು ಕರೆದುಕೊಂಡು ಬನ್ನಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

      ಈ ಕೆಲಸಕ್ಕೆ ಕಾಂಗ್ರೆಸ್‌ ಪಕ್ಷ ನಿಮಗೆ ಸಂಪೂರ್ಣ ಸಹಕಾರ ನೀಡುತ್ತದೆ. ದಯಮಾಡಿ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತನ್ನಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

      ಯಡಿಯೂರಪ್ಪ ಅವರ ಸರ್ಕಾರ ಕೊರೊನಾ ವಿಚಾರದಲ್ಲಿ ನಮ್ಮ ಮನವಿ, ಸಲಹೆಗಳಿಗೆ ಸ್ಪಂದಿಸುತ್ತಿರುವುಕ್ಕೆ ಅಭಿನಂದನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+