ಮಗನ ಪರಿಸ್ಥಿತಿಗೆ ಕಣ್ಣೀರು ಹಾಕಿದ ಡಿಕೆಶಿ ತಾಯಿ ಗೌರಮ್ಮ
Recommended Video
ಬೆಂಗಳೂರು, ಸೆಪ್ಟೆಂಬರ್ 02: ಮಗನಿಗೆ ಬಂದೊದಗಿರುವ ಪರಿಸ್ಥಿತಿ ನೋಡಿ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಕಣ್ಣೀರು ಸುರಿಸಿದ್ದಾರೆ.
ಇಂದು ಡಿ.ಕೆ.ಶಿವಕುಮಾರ್ ಅವರ ತಂದೆಯವರಿಗೆ ಎಡೆ ಇಡುವ ಕಾರ್ಯ ಮಾಡಲು ದೊಡ್ಡ ಆಲಹಳ್ಳಿಗೆ ಬಂದಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಗನ ಕಷ್ಟಕ್ಕೆ ಕಣ್ಣೀರು ಸುರಿಸಿದರು.
'ನನ್ನ ಮಗನ ಏಳಿಗೆಯನ್ನು ನೊಡಲಾರದೆ ಬಿಜೆಪಿಯವರು ಅವನ ಮೇಲೆ ತಂತ್ರ ಮಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗುವುದಿಲ್ಲ' ಎಂದು ಡಿಕೆಶಿ ತಾಯಿ ಗೌರಮ್ಮ ಹೇಳಿದರು.

ಡಿ.ಕೆ.ಶಿವಕುಮಾರ್ ಅವರ ತಂದೆ ಸಮಾಧಿಗೆ ಎಡೆ ಇಡುವ ಕಾರ್ಯವನ್ನು ಡಿಕೆ ಶಿವಕುಮಾರ್ ಪುತ್ರ ನಡೆಸಿಕೊಟ್ಟರು. ಪ್ರತಿವರ್ಷ ಡಿಕೆ.ಶಿವಕುಮಾರ್ ಮತ್ತು ಅವರ ಸಹೋದರರು ಈ ಕಾರ್ಯ ನಡೆಸಿಕೊಡುತ್ತಿದ್ದರು.
ಇಂದು ಬೆಳಿಗ್ಗೆ ಡಿ.ಕೆ.ಶಿವಕುಮಾರ್ ಅವರೂ ಸಹ ಭಾವುಕರಾಗಿ ಮಾತನಾಡಿದರು. ತಂದೆಯವರ ಸಮಾಧಿಗೆ ಎಡೆ ಇಡಲು ಆಗುತ್ತಿಲ್ಲವೆಂದು ಮಾಧ್ಯಮಗಳ ಮುಂದೆಯೇ ಗದ್ಗದಿತರಾದರು.
ಗೌರಮ್ಮ ಅವರ ಹೆಸರಿನಲ್ಲಿ ಇರುವ ಆಸ್ತಿ ಸಹ ಡಿಕೆ.ಶಿವಕುಮಾರ್ ಅವರ ಬೇನಾಮಿ ಆಸ್ತಿ ಎಂದು ಇಡಿ, ಐಟಿಗಳು ಪ್ರಕರಣ ದಾಖಲಿಸಿಕೊಂಡಿವೆ. ಇದರ ಬಗ್ಗೆ ಬೇಸರದಿಂದ ಮಾತನಾಡಿದ್ದ ಡಿಕೆಶಿ, ಮಗ, ತಾಯಿಯನ್ನು ನಂಬಬಾರದಾ ಅಥವಾ ತಾಯಿ ಮಗನನ್ನು ನಂಬಬಾರದಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications