ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಗನ ಪರಿಸ್ಥಿತಿಗೆ ಕಣ್ಣೀರು ಹಾಕಿದ ಡಿಕೆಶಿ ತಾಯಿ ಗೌರಮ್ಮ

|
Google Oneindia Kannada News

Recommended Video

ಬಿಜೆಪಿಯವರಿಗೆ ಡಿಕೆಶಿ ತಾಯಿ ಹಾಕಿದ ಶಾಪ ಏನು ಗೊತ್ತಾ..? | DK Shivakumar | Oneindia Kannada

ಬೆಂಗಳೂರು, ಸೆಪ್ಟೆಂಬರ್ 02: ಮಗನಿಗೆ ಬಂದೊದಗಿರುವ ಪರಿಸ್ಥಿತಿ ನೋಡಿ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಕಣ್ಣೀರು ಸುರಿಸಿದ್ದಾರೆ.

ಇಂದು ಡಿ.ಕೆ.ಶಿವಕುಮಾರ್ ಅವರ ತಂದೆಯವರಿಗೆ ಎಡೆ ಇಡುವ ಕಾರ್ಯ ಮಾಡಲು ದೊಡ್ಡ ಆಲಹಳ್ಳಿಗೆ ಬಂದಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಗನ ಕಷ್ಟಕ್ಕೆ ಕಣ್ಣೀರು ಸುರಿಸಿದರು.

ವಿಚಾರಣೆಗೆ ತೆರಳುವ ಮುನ್ನಾ ಭಾವುಕರಾದ ಗಟ್ಟಿ ಗುಂಡಿಗೆಯ ಡಿಕೆ.ಶಿವಕುಮಾರ್ವಿಚಾರಣೆಗೆ ತೆರಳುವ ಮುನ್ನಾ ಭಾವುಕರಾದ ಗಟ್ಟಿ ಗುಂಡಿಗೆಯ ಡಿಕೆ.ಶಿವಕುಮಾರ್

'ನನ್ನ ಮಗನ ಏಳಿಗೆಯನ್ನು ನೊಡಲಾರದೆ ಬಿಜೆಪಿಯವರು ಅವನ ಮೇಲೆ ತಂತ್ರ ಮಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗುವುದಿಲ್ಲ' ಎಂದು ಡಿಕೆಶಿ ತಾಯಿ ಗೌರಮ್ಮ ಹೇಳಿದರು.

Dk Shivakumars Mother Gowramma Gets Emotional

ಡಿ.ಕೆ.ಶಿವಕುಮಾರ್ ಅವರ ತಂದೆ ಸಮಾಧಿಗೆ ಎಡೆ ಇಡುವ ಕಾರ್ಯವನ್ನು ಡಿಕೆ ಶಿವಕುಮಾರ್ ಪುತ್ರ ನಡೆಸಿಕೊಟ್ಟರು. ಪ್ರತಿವರ್ಷ ಡಿಕೆ.ಶಿವಕುಮಾರ್ ಮತ್ತು ಅವರ ಸಹೋದರರು ಈ ಕಾರ್ಯ ನಡೆಸಿಕೊಡುತ್ತಿದ್ದರು.

ಇಂದು ಬೆಳಿಗ್ಗೆ ಡಿ.ಕೆ.ಶಿವಕುಮಾರ್ ಅವರೂ ಸಹ ಭಾವುಕರಾಗಿ ಮಾತನಾಡಿದರು. ತಂದೆಯವರ ಸಮಾಧಿಗೆ ಎಡೆ ಇಡಲು ಆಗುತ್ತಿಲ್ಲವೆಂದು ಮಾಧ್ಯಮಗಳ ಮುಂದೆಯೇ ಗದ್ಗದಿತರಾದರು.

ಮೂರನೇ ದಿನ ಇಡಿಯಿಂದ ಡಿ.ಕೆ.ಶಿವಕುಮಾರ್ ವಿಚಾರಣೆಮೂರನೇ ದಿನ ಇಡಿಯಿಂದ ಡಿ.ಕೆ.ಶಿವಕುಮಾರ್ ವಿಚಾರಣೆ

ಗೌರಮ್ಮ ಅವರ ಹೆಸರಿನಲ್ಲಿ ಇರುವ ಆಸ್ತಿ ಸಹ ಡಿಕೆ.ಶಿವಕುಮಾರ್ ಅವರ ಬೇನಾಮಿ ಆಸ್ತಿ ಎಂದು ಇಡಿ, ಐಟಿಗಳು ಪ್ರಕರಣ ದಾಖಲಿಸಿಕೊಂಡಿವೆ. ಇದರ ಬಗ್ಗೆ ಬೇಸರದಿಂದ ಮಾತನಾಡಿದ್ದ ಡಿಕೆಶಿ, ಮಗ, ತಾಯಿಯನ್ನು ನಂಬಬಾರದಾ ಅಥವಾ ತಾಯಿ ಮಗನನ್ನು ನಂಬಬಾರದಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದರು.

English summary
DK Shivakumar's mother Gowramma gets emotional while talking abuout his son with media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X