ಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಜುಲೈ.23: ಕೊರೊನಾವೈರಸ್ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಲೆಕ್ಕ ಕೊಡಿ ಅಭಿಯಾನವನ್ನು ಆರಂಭಿಸಿದೆ.
Recommended Video
ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸರ್ಕಾರವು ವೆಂಟಿಲೇಟರ್ ಖರೀದಿಯಲ್ಲಿ ನಡೆಸಿರುವ ಅವ್ಯವಹಾರದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಿದರು.
ಸರ್ಕಾರವು ಕೊರೊನಾವೈರಸ್ ಸೋಂಕು ನಿರ್ವಹಣೆಗೆ ಖರೀದಿಸಿದ ಉಪಕರಣಗಳ ಒಟ್ಟು ಮೊತ್ತ 4167 ಕೋಟಿ ರೂಪಾಯಿ ಆಗಿದ್ದು, ಈ ಪೈಕಿ 2000 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ಉಭಯ ನಾಯಕರು ಆರೋಪಿಸಿದ್ದಾರೆ. ಇಂದು ನಡೆದ ಕಾಂಗ್ರೆಸ್ ನಾಯಕರ ಜಂಟಿ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು ಇಲ್ಲಿವೆ ನೋಡಿ.

ಸಿದ್ದರಾಮಯ್ಯ, ಡಿಕೆಶಿ ಸುದ್ದಿಗೋಷ್ಠಿಯ ಪ್ರಮುಖಾಂಶ:
- ಕೊವಿಡ್-19 ಉಪಕರಣ ಖರೀದಿಗೆ ಖರ್ಚು ಮಾಡಿದ್ದು 324 ಕೋಟಿ ಅಲ್ಲ 4167 ಕೋಟಿ ರೂ.
- ಆರೋಗ್ಯ ಇಲಾಖೆಗೆ ಮೀಸಲಿರಿಸಿದ 1527 ಕೋಟಿಗಿಂತ ಎರಡು ಪಟ್ಟು ಹಣ ಖರ್ಚು
- ಕೊವಿಡ್ ಉಪಕರಣ ಖರೀದಿಗಾಗಿ ಈವರೆಗೂ 3322 ಕೋಟಿ ರೂ. ಖರ್ಚು
- ಕರ್ನಾಟಕದಲ್ಲಿ ಮಾರ್ಚ್.22ರಂದು ಒಂದು ವೆಂಟಿಲೇಟರ್ ಗೆ 5.60ಲಕ್ಷ, ಇನ್ನೊಂದು ಬಾರಿ ಒಂದು ವೆಂಟಿಲೇಟರ್ 12.36 ಲಕ್ಷ, ಮೂರನೇ ಬಾರಿ ಒಂದು ವೆಂಟಿಲೇಟರ್ ಖರೀದಿಗೆ 18.23 ಲಕ್ಷ ರೂಪಾಯಿ ನೀಡಿರುವ ಬಗ್ಗೆ ಆರೋಪ
- 331 ರೂಪಾಯಿ ಮೌಲ್ಯದ ಪಿಪಿಇ ಕಿಟ್ ಗಳಿಗೆ 2317 ರೂಪಾಯಿ ನೀಡಿ ಖರೀದಿ
- ಮೇಕ್ ಇನ್ ಇಂಡಿಯಾ ಭಾಷಣ ಮಾಡುವವರೇ ಚೀನಾದಿಂದ 3 ಲಕ್ಷ ಪಿಪಿಇ ಕಿಟ್ ಖರೀದಿಸಿದ್ದಾರೆ
- ಚೀನಾದಿಂದ 3 ಲಕ್ಷ ಪಿಪಿಇ ಕಿಟ್ ಖರೀದಿಸಲು 94.22 ಕೋಟಿ ರೂಪಾಯಿ ಪಾವತಿ
- 60 ರೂಪಾಯಿ ಮಾಸ್ಕ್ ಗೆ 150 ರೂಪಾಯಿ ಪಾವತಿಸಿ ಖರೀದಿ
- 1 ರಿಂದ 2 ಸಾವಿರ ರೂಪಾಯಿ ಮೌಲ್ಯದ ಸ್ಕ್ಯಾನರ್ ಗಳ ಖರೀದಿಗೆ 5945 ರೂಪಾಯಿ ಖರ್ಚು
- 80 ರಿಂದ 100 ರೂಪಾಯಿ ಮೌಲ್ಯದ 500 ಎಂಎಲ್ ಸ್ಯಾನಿಟೈಸರ್ ಗೆ 250 ರಿಂದ 600 ರೂಪಾಯಿ ಪಾವತಿ
- ಕೇರಳ ಪಾವತಿಸಿದ ಹಣಕ್ಕಿಂತ 2 ಲಕ್ಷ ರೂಪಾಯಿ ಹೆಚ್ಚಿನ ಹಣಕ್ಕೆ 300 ಆಕ್ಸಿಮೀಟರ್ ಡಿವೈಸ್ ಖರೀದಿ. ಒಂದು ಆಕ್ಸಿಮೀಟರ್ ಗೆ 4.30 ಲಕ್ಷ ರೂಪಾಯಿ ಪಾವತಿ.
- 2000 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ
- ಫುಡ್ ಕಿಟ್ ವಿತರಣೆಯಲ್ಲೂ ಬಿಜೆಪಿ ಸರ್ಕಾರದಿಂದ ಅವ್ಯವಹಾರ
- ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಿ ಎಂದು ಡಿಕೆಶಿ ಕೆಂಡಾಮಂಡಲ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications