ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ : ಆಕಾಂಕ್ಷಿಗಳಿಗೆ ಶಾಕ್ ಕೊಟ್ಟ ಟಿಬಿ ಜಯಚಂದ್ರ
ಬೆಂಗಳೂರು, ಮೇ 19: ಕರ್ನಾಟಕ ಸಿಎಂ ಆಯ್ಕೆ ಕಗ್ಗಂಟು ಪರಿಹಾರವಾಗುತ್ತಿದ್ದಂತೆ, ಡಿಸಿಎಂ ಸ್ಥಾನಕ್ಕೆ ಪೈಪೋಟಿ ಎದುರಾಗಿದೆ. ಡಿಕೆ ಶಿವಕುಮಾರ್ ಜೊತೆಗೆ ಡಿಸಿಎಂ ಆಗಲು ಹಲವು ಹಿರಿಯ ನಾಯಕರು ಲಾಬಿ ಮಾಡುತ್ತಿದ್ದಾರೆ. ಮಾಜಿ ಸಚಿವ, ಶಿರಾ ಶಾಸಕ ಟಿಬಿ ಜಯಚಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಸದ್ಯಕ್ಕೆ ಡಿಕೆ ಶಿವಕುಮಾರ್ ಒಬ್ಬರೇ ಉಪಮುಖ್ಯಮಂತ್ರಿ ಎಂದು ಹೇಳುವ ಮೂಲಕ ಡಿಸಿಎಂ ಹುದ್ದೆ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಸದ್ಯಕ್ಕೆ ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ ಎಂದ ಹೈಕಮಾಂಡ್ ನಿರ್ಧಾರ ಮಾಡಿದೆ. ಮೂರು ನಾಲ್ಕು ಡಿಸಿಎಂ ಹುದ್ದೆ ಸೃಷ್ಠಿಸುವ ಉದ್ದೇಶ ಸದ್ಯಕ್ಕೆ ಇಲ್ಲ" ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬೆನ್ನಲ್ಲೇ ಹಿರಿಯ ನಾಯಕರಾದ ಡಾ. ಜಿ. ಪರಮೇಶ್ವರ, ಎಂ ಬಿ ಪಾಟೀಲ್, ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಜಿ ಪರಮೇಶ್ವರ್ ಅವರಂತೂ ತನಗೆ ಡಿಸಿಎಂ ಸ್ಥಾನ ನೀಡದಿದ್ದರೆ, ಪಕ್ಷಕ್ಕೆ ಸಂಕಷ್ಟ ಎದುರಾಗಲಿದೆ ಎಂದು ಹೇಳಿದ್ದಾರೆ.
ಹಿರಿಯ ನಾಯಕ ಎಂಬಿ ಪಾಟೀಲ್ ತನಗೆ ಡಿಸಿಎಂ ಸ್ಥಾನ ಬೇಕು ಎಂದು ನೇರವಾಗಿ ಕೇಳದೇ ಇದ್ದರೂ, ಉತ್ತರ ಕರ್ನಾಟಕದಲ್ಲಿ 50 ಜನರನ್ನು ಗೆಲ್ಲಿಸುವಲ್ಲಿ ನನ್ನ ಪಾತ್ರ ಇದೆ. ಹೈ ಕಮಾಂಡ್ ನನಗೆ ಒಳ್ಳೆಯ ಹುದ್ದೆ ಕೊಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಮೀರ್ ಅಹ್ಮದ್ಗೆ ಡಿಸಿಎಂ ಸ್ಥಾನಕ್ಕೆ ಬೇಡಿಕೆ
ಇನ್ನು ಸಿದ್ದರಾಮಯ್ಯ ಆಪ್ತ ಶಾಸಕ ಜಮೀರ್ ಅಹ್ಮದ್ ಅವರಿಗೆ ಕೂಡ ಡಿಸಿಎಂ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಮುದಾಯ ಬೇಡಿಕೆ ಇಟ್ಟಿದೆ. ಜಮೀರ್ ಕೂಡ ಡಿಸಿಎಂ ಸ್ಥಾನ ಕೇಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಈ ಬಾರಿ 9 ಮುಸ್ಲಿಂ ಶಾಸಕರು ಇದ್ದು, ಡಿಸಿಎಂ ಮತ್ತು ಸಚಿವ ಸ್ಥಾನ ನೀಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷರು ಒತ್ತಾಯಿಸಿದ್ದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ, ಡಿಸಿಎಂ ಆದ ಬೆನ್ನಲ್ಲೇ ಹಲವು ಹಿರಿಯ ಶಾಸಕರು ದೆಹಲಿಯಲ್ಲಿ ಗೌಪ್ಯವಾಗಿ ಸಭೆ ನಡೆಸಿದ್ದರು. ಹಲವು ಜಾತಿಯ ಸ್ವಾಮೀಜಿಗಳು ಕೂಡ ತಮ್ಮ ಜಾತಿಯ ಶಾಸಕರಿಗೆ ಡಿಸಿಎಂ ಮಾಡಿ, ಸಚಿವ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟಿವೆ. ಲೋಕಸಭಾ ಚುನಾವಣೆ ಹತ್ತಿರ ಇರುವುದರಿಂದ ಈ ವಿಚಾರವನ್ನು ಹೈಕಮಾಂಡ್ ಸೂಕ್ಷ್ಮವಾಗಿ ನಿಭಾಯಿಸುವ ಆಲೋಚನೆಯಲ್ಲಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications