Bengaluru Waste: ಕಸ ವಿಲೇವಾರಿಗೆ ಬಿಜೆಪಿ ನಾಯಕರಿಂದಲೇ ಅಡಚಣೆ, 'ಎಸ್ಮಾ' ಜಾರಿ ಎಚ್ಚರಿಕೆ ಕೊಟ್ಟ ಡಿಕೆ.ಶಿವಕುಮಾರ್
ಬೆಂಗಳೂರು: ಯಾರೇ ಆಗಲಿ ಕಸ ವಿಲೇವಾರಿಗೆ ಅಡ್ಡಪಡಿಸಿದರೆ ಎಸ್ಮಾ ಜಾರಿಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಡ್ಡಿಪಡಿಸುವವರು ಮನೆ ಮುಂದೆನೆ ಕಸ ವಿಲೆವಾರಿ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಬಿಜೆಪಿ ಶಾಸಕರಿಗೆ ಮತ್ತು ಮುಖಂಡರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಗೌರವದಿಂದ ಇದ್ದರೆ ಸರಿ. ಇಲ್ಲದಿದ್ದರೆ ಎಸ್ಮಾ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳತ್ತೇವೆ. ಕಸ ವಿಲೇವಾರಿಗೆ ಅಡ್ಡಪಡಿಸುವ ಬಿಜೆಪಿ ಶಾಸಕರುಗಳು ಹಾಗು ನಾಯಕರ ಮನೆ ಮುಂದೆನೆ ಕಸ ಹಾಕಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಏಕೆಂದರೆ ಈಗ ನಗರದ ಕಸ ವಿಲೇವಾರಿ ಬಿಕ್ಕಟ್ಟಿನ ಹಿಂದೆ ಕೆಲವು ಹಾಲಿ ಮತ್ತು ಮಾಜಿ ಬಿಜೆಪಿ ಶಾಸಕರುಗಳು ಕೈವಾಡವಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಡಿಕೆ.ಶಿವಕುಮಾರ್ ಈ ಹೇಳಿಕೆ ಹೆಚ್ಚು ಮಹತ್ವ ಪಡೆದಿದೆ. ತ್ಯಾಜ್ಯ ವಿಲೇವಾರಿ ಘಟಕದ ಸುತ್ತಲಿನ ಗ್ರಾಮಸ್ಥರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ, ಆದರೆ ಈ ರೀತಿ ಕಸ ವಿಲೇವಾರಿಗೆ ತೊಂದರೆ ನೀಡಿದರೆ, ಬೆದರಿಕೆ ಹಾಕುವ ಕೆಲಸ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳವುದಾಗಿ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ನಾಯಕರ ಮನೆ ಮುಂದೆ ಕಸ ಎಚ್ಚರಿಕೆ
ಕಸ ವಿಲೇವಾರಿಗೆ ತಡೆ ನೀಡಲು ಮುಂದಾದರೆ ವಿಪಕ್ಷ ನಾಯಕ ಆರ್.ಅಶೋಕ ಮತ್ತು ಬಿಜೆಪಿ ರಾಜ್ಯದ್ಯಕ್ಷ ವಿಜಯೇಂದ್ರ ಅಥವಾ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ನಿನ್ನೆ ಅರವಿಂದ್ ಲಿಂಬಾವಳಿ ಅವರು ಕಸ ಹಾಕು ತೊಂದರೆ ಮಾಡಿದ್ದರು, ಇಂದು ದೊಡ್ಡಬಳ್ಳಾಪುರ ಶಾಸಕರು ಅದೇ ಕೆಲಸ ಮಾಡಿದ್ದಾರೆ. ಆ ಕಸ ಇನ್ನೆಲ್ಲಿಗೋಬೇಕು? ಆರ್.ಅಶೋಕ್ ಮನೆಗೆ ಹೊಗಬೇಕಾ? ಇಲ್ಲಾ, ಬಿ.ವೈ. ವಿಜಯೇಂದ್ರ ಮನೆಗೆ ಹೊಗಬೇಕಾ ಅಥವಾ ಬಿಜೆಪಿ ಕಚೇರಿಗೆ ಮುಂದೆ ತಂದು ಸುರಿಯಬೇಕಾ ಎಂದು ಗುಡುಗಿದರು
ಮೊದಲಿಂದ ಕಸ ಎಲ್ಲೆಲ್ಲಿ ವಿಲೇವಾರಿ ಮಾಡಿಕೊಂಡು ಬರಲಾಗುತ್ತದೆಯೋ ಅದನ್ನೆ ಈಗಲೂ ಮಾಡಲಾಗುತ್ತಿದೆ. ಇವರ ಕ್ಷೇತ್ರಕ್ಕೆ ಪಂಡ್ ಬೇಕು ಎಂದು ಬ್ಲಾಕ್ ಮೇಲ್ ಮಾಡುವುದು ಸರಿಯಲ್ಲ. ನಾಳೆ ಬೆಳಗ್ಗೆ ನಾಯಕ ಎಸ್ಟಿ ಸೋಮಶೇಖರ ಹಾಗೂ ಸಚಿವ ಕೃಷ್ಣ ಬೈರೇಗೌಡ ಕ್ಷೇತ್ರಕ್ಕೆ ಹೋಗುತ್ತಿದ್ದೇನೆ. ಕಸ ವಿಲೇವಾರಿಗೆ ಎರಡು ಜಾಗನು ಖರೀದಿಸಿದ್ದೇವೆ. ಕಾನೂನು ಪ್ರಕಾರ ಟೆಂಡರ್ ಕರಿದಿದ್ದೇವೆ. ಕಾನೂನು ಅಡಚಣೆ ನಿವಾರಿಸಿಕೊಂಡು ಹೊಸ ಜಾಗದಲ್ಲಿ ಕಸ ವಿಲೇವಾರಿಗೆ ವ್ಯವಸ್ಥೆ ಮಾಡಲಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರವಿದ್ದಾಗ ಗುತ್ತಿಗೆದಾರರು 10 ಸಾವಿರ ಕೋಟಿ ರೂ, 20 ಮತ್ತು 30 ಸಾವಿರ ಕೋಟಿ ರೂಪಾಯಿ ಟೆಂಡರ್ ಕರಿದಿದ್ದರು. ಇದಕ್ಕೆಲ್ಲ ಬಿಜೆಪಿ ಸರ್ಕಾರನೇ ಕಾರಣ. ದುಡ್ಡು ಇಲ್ಲದಿದ್ದರೂ ಇಂತಹ ತಪ್ಪು ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಿಯಮಗಳ ಪ್ರಕಾರ, ಬಜೆಟ್ ನೋಡಿಕೊಂಡು ನೀಡುತ್ತದೆ. ಹೆದರಿಸುವವರು ಹೆದರಿಸಲಿ ಬಿಡಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications