ಡಿ.ಕೆ. ಸುರೇಶ್ ಚನ್ನಪಟ್ಟಣದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುತ್ತಾರಾ?
ಡಿ.ಕೆ. ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲು ಕಂಡ ನಂತರ ಈ ಸಮಯದಲ್ಲಿ ದೊಡ್ಡ ಚರ್ಚೆಯು ಶುರುವಾಗಿದೆ. ಯಾಕಂದ್ರೆ ಡಿ.ಕೆ. ಸುರೇಶ್ ಅವರ ಅಣ್ಣ ಡಿ.ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಕೂಡ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸೋಲು ಕಂಡಿದ್ದಾರೆ. ಇದು ದೊಡ್ಡ ಆಘಾತ ನೀಡಿರುವ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭೆ ಚುನಾವಣೆಗೆ ಡಿ.ಕೆ. ಸುರೇಶ್ ಎಂಟ್ರಿ ಆಗಲಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ.
ಹೌದು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಶಾಸಕ ಆಗಿದ್ದರು. ಆದ್ರೆ ಈಗ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಬಿಟ್ಟು ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಹೀಗಿದ್ದಾಗ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಟ್ಟು ಕೊಡಬೇಕಾಗಿದೆ. ಅತ್ತ ಜೆಡಿಎಸ್ & ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಖಚಿತವಾಗಿದೆ. ಮತ್ತೊಂದು ಕಡೆ ಇತ್ತ ಡಿ.ಕೆ. ಸುರೇಶ್ ಇಲ್ಲಿಂದಲೇ ಸ್ಪರ್ಧಿಸಿ ಸೇಡು ತೀರಿಸಿಕೊಳ್ಳುತ್ತಾರಾ? ಎಂಬ ಪ್ರಶ್ನೆ ಮೂಡಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಸಂಚಲನ!
ಇದೇ ಕಾರಣಕ್ಕೆ ಇನ್ನು 6 ತಿಂಗಳ ಒಳಗೆ ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ನಡೆಯುತ್ತಿದೆ. ಮತ್ತೊಂದು ಕಡೆ ಬೆಂಗಳೂರು ಗ್ರಾಮಾಂತರದಲ್ಲಿ ಸೋತ ಸೇಡನ್ನ ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ತೀರಿಸಿಕೊಳ್ಳಲು ಡಿ.ಕೆ. ಸುರೇಶ್ ಸಿದ್ಧರಾಗಿದ್ದಾರೆ ಎಂಬ ಮಾತು ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಈವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಕುತೂಹಲ ಕೂಡ ಡಬಲ್ ಆಗಿದೆ. ಹೀಗೆ, ಚನ್ನಪಟ್ಟಣ ಕ್ಷೇತ್ರ ಮತ್ತೊಮ್ಮೆ ಕುತೂಹಲದ ಕೇಂದ್ರ ಬಿಂದುವಾಗಿದೆ.
ಸೋತ ಜಾಗದಲ್ಲಿಯೇ ಗೆಲುವು?
ಬೆಂಗಳೂರು, ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಿಸಿಲ್ಲ. ಈ ಪೈಕಿ ಬೆಂಗಳೂರು ನಗರದ ಮೇಲೆ ಡಿ.ಕೆ. ಶಿವಕುಮಾರ್ ಅವರು ಬಿಗಿ ಹಿಡಿತ ಹೊಂದಿದ್ದಾರೆ ಎಂಬ ಮಾತು ಇವೆ. ಇಷ್ಟೆಲ್ಲಾ ಹಿಡಿತ ಹೊಂದಿದ್ದರೂ, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಕೂಡ ಗೆದ್ದಿಲ್ಲ. ಹೀಗೆ ತಮ್ಮ ಸಹೋದರ ಡಿ.ಕೆ. ಸುರೇಶ್ ಸೋತಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಭಾರಿ ದೊಡ್ಡ ಹಿನ್ನಡೆ ತಂದಿದೆ. ಆದರೆ ಸೋತ ಜಾಗದಲ್ಲಿಯೇ ಗೆದ್ದು ಬೀಗಲು ಡಿ.ಕೆ. ಸುರೇಶ್ ಸಿದ್ಧವಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಕುಮಾರಸ್ವಾಮಿಗೆ ಕೃಷಿ ಸಚಿವ ಸ್ಥಾನ?
ಬಿಜೆಪಿ & ಎನ್ಡಿಎ ಒಕ್ಕೂಟದಲ್ಲಿ ಆಯ್ಕೆ ಆಗಿ ಬಂದಿರುವ ಸಂಸದರ ಹಿನ್ನೆಲೆ ಗಮನಿಸಿದರೆ ಇದೀಗ ಡಾ. ಸಿ.ಎನ್. ಮಂಜುನಾಥ್ ಆರೋಗ್ಯ ಸಚಿವರಾಗಲು ಸೂಕ್ತ ಅಂತಾ ಹೇಳಬಹುದು. ಯಾಕಂದ್ರೆ ಮೋದಿ ಸಂಪುಟದಲ್ಲಿ ಆರೋಗ್ಯ ಸಚಿವನ ಸ್ಥಾನ ನಿರ್ವಹಿಸಲು ವೈದ್ಯರ ಅಗತ್ಯತೆ ಇದೆ. ಈಗ ಈ ಅನಿವಾರ್ಯ ಸ್ಥಿತಿಯಲ್ಲಿ ಕನ್ನಡ ನಾಡಿನ ಸಂಸದ ಡಾ. ಸಿ.ಎನ್. ಮಂಜುನಾಥ್ ಆರೋಗ್ಯ ಸಚಿವರಾಗಿ ಕೆಲಸ ಮಾಡಲು ಎಲ್ಲಾ ರೀತಿಯಲ್ಲೂ ಸೂಕ್ತ ಎನ್ನಬಹುದು. ಹೀಗೆ ಪ್ರಧಾನಿ ಮೋದಿ ಅವರ ಮೊದಲ ಆಯ್ಕೆ ಕೂಡ ಡಾ. ಸಿ.ಎನ್. ಮಂಜುನಾಥ್ ಇರಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications