Nandini Milk: ನಂದಿನಿಗಾಗಿ ಮೆಟ್ರೋ ನಿಲ್ದಾಣಗಳಲ್ಲಿ ಜಾಗ ಕೊಡಿ: ಡಿಕೆ ಸುರೇಶ್...Bengaluru Metro
ಬೆಂಗಳೂರು, ಜುಲೈ 19: ಬೆಂಗಳೂರು ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬೇರೆ ರಾಜ್ಯಗಳ ಹಾಲಿನ ಮಳಿಗೆ ಸ್ಥಾಪನೆ ವಿಚಾರ ಸಂಚಲನ ಮೂಡಿಸಿತ್ತು. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಜಾಲವನ್ನು ವಿಸ್ತರಣೆ ಮಾಡುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಅವರಿಗೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಮನವಿ ಸಲ್ಲಿಸಿ ಆಗ್ರಹಿಸಿದರು.
ಶನಿವಾರ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ (BMRCL) ವ್ಯವಸ್ಥಾಪಕ ನಿರ್ದೇಶಕರನ್ನು ಡಿಕೆ ಸುರೇಶ್ ಅವರು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದರು. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಜಾಲವನ್ನು ವಿಸ್ತರಿಸುವ ದೃಷ್ಟಿಯಿಂದ ಮೆಟ್ರೋ ನಿಲ್ದಾಣಗಳ ಮುಂಭಾಗದಲ್ಲಿ, ಇಲಾಖೆಗೆ ಸೇರಿದ ಖಾಲಿ ತೆರೆದ ಸ್ಥಳಗಳಲ್ಲಿ ನಂದಿನಿ ಪಾರ್ಲರ್ ನಿರ್ಮಿಸಬೇಕು. ಉತ್ಪನ್ನಗಳ ಮಾರಾಟ ಮಾಡಲು ಸ್ಥಳ ಮಂಜೂರಾತಿ ಕೋರಿ, ಮನವಿ ಸಲ್ಲಿಸಿದ್ದರ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಮ್ಮ ಮೆಟ್ರೋದಲ್ಲಿ 'ನಂದಿನಿ'ಗೆ ಆದ್ಯತೆ
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF) ನಂದಿನಿ ಮಳಿಗೆ ತೆರೆಯುವಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕೆ ಬೇರೆ ರಾಜ್ಯಗಳ ಅಮೂಲ್ ಇಲ್ಲಿಗೆ ಬರುವಂತಾಯಿತು ಎಂದೆಲ್ಲ ರಾಜ್ಯ ಸರ್ಕಾರ ಮತ್ತು ನಮ್ಮ ಮೆಟ್ರೋ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಈ ನೆಲದ ರೈತರಿಗೆ, ಇಲ್ಲಿ ಉತ್ಪಾದನೆಗೆ ಉತ್ತೇಜನ ಸಿಗಬೇಕು ಎಂದು ಆಗ್ರಹಿಸಿದ್ದರು. ಬಳಿಕ ಕೆಎಂಎಫ್ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಅರ್ಜಿ ಸಲ್ಲಿಸಿಲ್ಲ ಎಂದು ತಿಳಿಸಿದ್ದ ಡಿಕೆ ಶಿವಕುಮಾರ್ ಅವರು, ಕೂಡಲೇ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರು. ಬಳಿಕ ಹತ್ತರಲ್ಲಿ ಎಂಟು ಮಳಿಗೆ ನಂದಿನಿ ಇರಲಿವೆ ಎಂದು ಸ್ಪಷ್ಟಪಡಿಸಿದ್ದರು.
ಇದೀಗ ನಂದಿನಿ ಮಳಿಗೆ, ನಂದಿನಿ ಹಾಲಿನ ಉತ್ಪನ್ನಗಳ ಮಾರಾಟಕ್ಕೆ, ಸ್ಥಳೀಯ ಉತ್ಪನ್ನಗಳ ಪ್ರೋತ್ಸಾಹ ಹಾಗೂ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಡಿಕೆ ಸುರೇಶ್ ಅವರು ಮೆಟ್ರೋ ನಿಲ್ದಾಣಗಳ ಮುಂದೆ ಖಾಲಿ ಇರುವ ಜಾಗಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಆದಷ್ಟು ಶೀಘ್ರವೇ ಈ ಬಗ್ಗೆ ತಿರ್ಮಾನ ಕೈಗೊಳ್ಳಲಾಗುವುದು ಎಂದು BMRCL ಎಂಡಿ ಸಕಾರಾತ್ಮಕ ಭರವಸೆ ನೀಡಿದ್ದಾರೆ.
ನಂದಿನಿ ಬ್ರ್ಯಾಂಡ್ನ 20 ಮಳಿಗೆ
ಗುಜರಾತ್ ಮೂಲದ ಭಾರತೀಯ ಡೈರಿ ಸಹಕಾರಿ ಸಂಸ್ಥೆಯಾದ ಅಮೂಲ್ 10 ಮಳಿಗೆ ತೆರೆಯಲು ಒಪ್ಪಿದ್ದರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿಯ 20 ಮಳಿಗೆ ತೆರೆಯಲು BMRCL ಕಳೆದ ತಿಂಗಳು ಒಪ್ಪಿಗೆ ನೀಡಿದೆ. ಶೀಘ್ರವೇ ಅವುಗಳು ಆರಂಭಗೊಳ್ಳುವ ನಿರೀಕ್ಷೆ ಇದೆ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications