Get Updates
Get notified of breaking news, exclusive insights, and must-see stories!

ಪದ್ಮನಾಭನಗರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ ಖಚಿತ: ಆರ್ ಅಶೋಕ್ ವಿರುದ್ಧ ಡಿಕೆಶಿ ರಣತಂತ್ರ

ಕನಕಪುರದಲ್ಲಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿತ್ತು. ತಮ್ಮ ವಿರುದ್ಧದ ರಾಜಕೀಯ ತಂತ್ರಕ್ಕೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಕೂಡ ನಿರ್ಧಾರ ಮಾ‍ಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಆರ್ ಅಶೋಕ್ ವಿರುದ್ಧ ಡಿಕೆ ಸುರೇಶ್ ನಾಮಪತ್ರ ಸಲ್ಲಿಸುತ್ತಾರೆ ಎಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತಷ್ಟು ರಂಗೇರಿದೆ . ಕುತೂಹಲಕಾರಿ ವಿಚಾರ ಎಂದರೆ, ಕಾಂಗ್ರೆಸ್ ಈಗಾಲೇ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ರಘುನಾಥ್ ನಾಯ್ಡು ಅವರಿಗೆ ಟಿಕೆಟ್ ಘೋಷಣೆ ನೀಡಿದೆ, ಹೊಸ ಬೆಳವಣಿಗೆಯಲ್ಲಿ ಡಿಕೆ ಸುರೇಶ್ ಕೂಡ ಉಮೇದುವಾರಿಕೆ ಸಲ್ಲಿಸುವುದರಿಂದ ಕೊನೆಗೆ ಕಣದಲ್ಲಿ ಯಾರು ಉಳಿಯುತ್ತಾರೆ ಎನ್ನುವುದು ಕುತೂಹಲಕಾರಿಯಾಗಿದೆ.

DK Suresh Will File Nomination from Padmanabhanagar Constituency says DK Shivakumar

ಡಿಕೆ ಸುರೇಶ್ ನಾಮಪತ್ರ ಸಲ್ಲಿಸುವ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, "ಬಿಜೆಪಿ, ಜೆಡಿಎಸ್‌ನವರು ಚೆಸ್ ಆಡುತ್ತಿದ್ದಾರೆ ನಾವೂ ಆಡುತ್ತಿದ್ದೇವೆ" ಎಂದು ಹೇಳಿದರು. ಕನಕಪುರದಲ್ಲಿ ತಮ್ಮ ವಿರುದ್ಧವೇ ತೊಡೆ ತಟ್ಟಲು ಬಂದಿರುವ ಆರ್ ಅಶೋಕ ಅವರನ್ನು ಮಣಿಸಲು ಡಿಕೆ ಶಿವಕುಮಾರ್ ಈ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಡಿಕೆ ಸುರೇಶ್ ಪದ್ಮನಾಭನಗರ ಮತಕ್ಷೇತ್ರದಿಂದ ಸ್ಪರ್ಧಿಸುವುದರಿಂದ ಆರ್ ಅಶೋಕ ತಮ್ಮ ತವರು ಕ್ಷೇತ್ರದ ಕಡೆ ಹೆಚ್ಚಿನ ಗಮನ ನೀಡುವಂತೆ ಮಾಡಲು ರಣತಂತ್ರ ರೂಪಿಸಿದ್ದಾರೆ.

ಅಂತಿಮವಾಗಿ ಕಣದಲ್ಲಿ ಉಳಿಯುವುದು ಯಾರು?

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂದು ಪದ್ಮನಾಭನಗರ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ಮತ್ತು ರಘುನಾಥ ನಾಯ್ಡು ಕೂಡ ನಾಮಪತ್ರ ಸಲ್ಲಿಸುತ್ತಾರೆ. ನಾನೂ ಕೂಡ ನಾಮಪತ್ರ ಸಲ್ಲಿಸುವ ವೇಳೆ ಜೊತೆಯಲ್ಲಿ ಇರುತ್ತೇನೆ, ರಘುನಾಥ ನಾಯ್ಡು ಇಲ್ಲಿ ಗೆಲ್ಲುವ ವಾತಾವರಣ ಇದೆ. ಇಬ್ಬರು ನಾಮಪತ್ರ ಸಲ್ಲಿಸಿದ್ದರೂ ಅಂತಿಮವಾಗಿ ಯಾರು ಕಣದಲ್ಲಿ ಉಳಿಯುತ್ತಾರೆ ಎನ್ನುವುದು ಹೈಕಮಾಂಡ್ ನಿರ್ಧಾರದ ಬಳಿಕ ತಿಳಿಯಲಿದೆ.

ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ಚುನಾವಣೆಯ ಜವಾಬ್ದಾರಿಯನ್ನು ಡಿಕೆ ಸುರೇಶ್ ನೋಡಿಕೊಳ್ಳುತ್ತಿದ್ದರು, ಕನಕಪುರ ಸಹೋದರರ ಭದ್ರಕೋಟೆಯಾಗಿರುವುದರಿಂದ ಇಬ್ಬರೂ ಸೋಲಿಲ್ಲದ ಸರದಾರರಾಗಿದ್ದಾರೆ. ಡಿಕೆಶಿ ಹೆಚ್ಚಿನ ಪ್ರಚಾರಕ್ಕೆ ಹೋಗದಿದ್ದರೂ ಸುಲಭವಾಗಿ ಗೆಲುವು ಸಾಧಿಸುತ್ತಿದ್ದರು. ಆದರೆ, ಈ ಬಾರಿ ಕನಕಪುರದಲ್ಲಿ ಆರ್ ಅಶೋಕ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಸಂಚಲನ ಸೃಷ್ಟಿಸಿದೆ. ಅಲ್ಲದೆ ಬಿಜೆಪಿ ವರುಣಾದಲ್ಲಿ ಸಿದ್ದರಾಮಯ್ಯ ಎದುರಾಗಿ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ.

ಖರ್ಗೆ, ರಾಹುಲ್ ಗಾಂಧಿ ಸೂಚನೆ ನಂತರ ತೀರ್ಮಾನ

ಪದ್ಮನಾಭನಗರ ಮತಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ವಿಚಾರವಾಗಿ ಮಾತನಾಡಿರುವ ಸಂಸದ ಡಿಕೆ ಸುರೇಶ್, ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಸೂಚನೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು. ಸ್ವತಃ ರಘುನಾಥ ನಾಯ್ಡು ಅವರೇ ನನಗೆ ಆಹ್ವಾನ ನೀಡಿದ್ದಾರೆ. ಆರ್ ಅಶೋಕ್ ಅವರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ, ಕಾಂಗ್ರೆಸ್‌ ಕಾರ್ಯಕರ್ತರ ನಿರ್ಧಾರವೇ ನನಗೆ ಮುಖ್ಯವಾಗುತ್ತದೆ ಎಂದು ಅವರು ಹೇಳಿದರು. ಡಿಕೆ ಶಿವಕುಮಾರ್ ಹೊಸ ರಾಜಕೀಯ ದಾಳ ಉರುಳಿಸಿದ್ದು, ಆರ್ ಅಶೋಕ್ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದುನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+