ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 28: ಮಹದಾಯಿ ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡಿ ಅದರ ಬದಲು ರಾಜಕೀಯ ಮಾಡಬೇಡಿ ಎಂದು ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವಾರದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಪರಿಶೀಲನೆಗೆ ಬರಲಿದ್ದಾರೆ, ಅವರ ಜೊತೆ ಸಭೆ ನಡೆಸಿದ ಬಳಿಕ ಗೋವಾ ಎನ್‌ಜಿಟಿಗೆ ಹೋಗುವ ವಿಚಾರ ಅಥವಾ ಮುಂದಿನ ಹೋರಾಟದ ಬಗ್ಗೆ ಸಿದ್ಧತೆ ಮಾಡಲಾಗುತ್ತದೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಹೇಳಿದರು.

ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ

ಗೋವಾದ ಜೀವನದಿಯಾಗಿರುವ ಮಾಂಡೋವಿ-ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಮೂರು ದಶಕಗಳಿಗೂ ಅಧಿಕ ವರ್ಷಗಳಿಂದ ಇದೆ, ಮಹದಾಯಿ ಯೋಜನೆ ಕಾಲಾನುಕ್ರಮದಲ್ಲಿ ನಡೆದ ಬೆಳವಣಿಗೆಗಳತ್ತ ಅವಲೋಕನ ಮಾಡಲಾಗಿದೆ.

DKS appeals dont do politics in Mahadayi row

ಕಳಸಾ ಬಂಡೂರಿ ನಾಲೆ ಕಾಮಗಾರಿಗೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತರು ಮುಷ್ಕರ ನಿರತರಾಗಿ ವರ್ಷ ಕಳೆದಿದೆ. ಸರ್ಕಾರಗಳು ಬದಲಾದರೂ ಕುಡಿಯುವ ನೀರಿಗಾಗಿ ಹೋರಾಟ ನಿಂತಿಲ್ಲ.

ಮಹದಾಯಿ ನ್ಯಾಯಾಧಿಕರಣದ ಅಂತಿಮ ತೀರ್ಪು ಮಂಗಳವಾರ ಪ್ರಕಟವಾಗಿದೆ. ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಇದು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಜಲ ವಿವಾದ. ನ್ಯಾಯಮೂರ್ತಿ ಜೆ.ಎಂ.ಪಾಂಚಾಲ್ ನೇತೃತ್ವದ ನ್ಯಾಯಾಧಿಕರಣ ಅಂತಿಮ ತೀರ್ಪನ್ನು ಪ್ರಕಟಿಸಿದೆ.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ? ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

ಕರ್ನಾಟಕಕ್ಕೆ 13.42, ಗೋವಾ ರಾಜ್ಯಕ್ಕೆ 24 ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರನ್ನು ನ್ಯಾಯಾಧೀಕರಣ ಹಂಚಿಕೆ ಮಾಡಿದೆ.ಆದರೆ, ಕರ್ನಾಟಕಕ್ಕೆ ಇನ್ನೂ 7 ಟಿಎಂಸಿ ನೀರು ಸಿಗಬೇಕಿತ್ತು ಎಂಬ ಬೇಡಿಕೆ ಇದೆ.

English summary
Water resources minister D.K.Shivakumar has appealed to political parties and farmer leaders shouldn't be played politics over Mahadayi row.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X