ನಮ್ಮ ತ್ಯಾಗಕ್ಕೆ ಜೆಡಿಎಸ್ ಓಗೊಡಲಿ: ಡಿಕೆಶಿ ಮನವಿ
ಬೆಂಗಳೂರು, ಮೇ 26: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಜೆಡಿಎಸ್ಗೆ ಮನವಿ ಮಾಡಿದ್ದೇವೆ. ನಾವು ಮಾಡಿದ ತ್ಯಾಗಕ್ಕೆ ಓಗೊಟ್ಟು ಅವರು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಆರ್ಆರ್ನಗರ ಅಭ್ಯರ್ಥಿ ವಿಚಾರವಾಗಿ ನಾವು ಜೆಡಿಎಸ್ನವರಿಗೆ ಬಹಳ ಗೌರವದಿಂದ ಹೇಳಿದ್ದೇವೆ. ಬಿಜೆಪಿಯನ್ನು ದೂರ ಇಡಲು ಇದೊಂದು ಉತ್ತಮ ಅವಕಾಶವಾಗಿದೆ. ನಾವು ಬಹಳ ಉದಾರದಿಂದ ದೊಡ್ಡ ತ್ಯಾಗದಿಂದ ಜೆಡಿಎಸ್ಗೆ ಸಹಾಯ ಮಾಡಿದ್ದೇವೆ. ಹಾಗಾಗಿ ನಮ್ಮ ಅಭ್ಯರ್ಥಿ ಗೆಲುವಿಗೆ ಸಹಾಯಮಾಡಿ ಎಂದು ಕೇಳಿಕೊಂಡಿದ್ದೇವೆ ಎಂದರು.
ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಜೆಡಿಎಸ್ಗೆ ಮನವಿ ಮಾಡಿದ್ದೆವು ಆದರೆ ಅಭ್ಯರ್ಥಿಗಳನ್ನು ಹಾಕಿರುವುದರಿಂದ ಹಿಂತೆಗೆದುಕೊಳ್ಳಲು ಕಷ್ಟ ಎಂದಿದ್ದಾರೆ. ಆದರೂ ಕಾಂಗ್ರೆಸ್ ಮಾಡಿದ ಈ ದೊಡ್ಡ ತ್ಯಾಗಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಾಲಹಳ್ಳಿ ಅಪಾರ್ಟ್ಮೆಂಟ್ವೊಂದರಲ್ಲಿ 10 ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಮೇ 28ರಂದು ಈ ಕ್ಷೇತ್ರದ ಚುನಾವಣೆ ನಡೆಯಲಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications