ಜು.6ರಿಂದ ಕಾವೇರಿ ಕೊಳ್ಳದ ಮುಖಂಡರ ಸಭೆ: ಡಿಕೆ ಶಿವಕುಮಾರ್
Recommended Video
ಬೆಂಗಳೂರು, ಜುಲೈ 2: ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಸಿಗಬೇಕಾದ ನ್ಯಾಯದ ಕುರಿತು ನಾವು ವಾದ ಮಂಡಿಸುತ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ದೆಹಲಿಯಲ್ಲಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಮತ್ತು ರಾಜ್ಯದ ರೈತರ ಅನುಕೂಲ ನೋಡಿಕೊಂಡು ಕ್ರಮ ಕೈಗೊಳ್ಳುತ್ತೇವೆ, ಜುಲೈ 5ರ ನಂತರ ಕಾವೇರಿ ಕೊಳ್ಳದ ಪ್ರದೇಶಗಳ ಶಾಸಕ, ಸಚಿವರ ಜತೆಗೆ ಮಾತುಕತೆ ನಡೆಸಲಾಗುತ್ತದೆ. ಜುಲೈ 6ರಿಂದ 10ರೊಳಗೆ ಕಾವೇರಿಕೊಳ್ಳದ ಮುಖಂಡರ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾವೇರಿ ಮಂಡಳಿ ಮೊದಲ ಸಭೆ: ಕರ್ನಾಟಕ ಏನು ಹೇಳುತ್ತೆ?
ಕರ್ನಾಟಕದ ವಿರೋಧದ ಮಧ್ಯೆಯೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರಥಮ ಸಭೆ ನವದೆಹಲಿಯಲ್ಲಿ ನಡೆಯುತ್ತಿದೆ. ಜೂನ್ ತಿಂಗಳಲ್ಲಿ ಕಾವೇರಿ ನೀರಿನ ಪ್ರಮಾಣ ಎಷ್ಟಿತ್ತು, ಈಗ ಎಷ್ಟಿದೆ, ಎಷ್ಟು ನೀರು ಹಂಚಿಕೆ ಮಾಡಲಾಗಿದೆ ಎನ್ನುವ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.
9 ಸದಸ್ಯರಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಕೇಂದ್ರ ಸರ್ಕಾರದ ಐವರು ಪ್ರತಿನಿಧಿ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿಯ ಒಂದೊಂದು ಪ್ರತಿನಿಧಿಗಳಿದ್ದರು.