ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಡ್ಜಾ, ಬರ್ಗರ್ ಬದಲು ದೇಸೀ ಆಹಾರ ತಿನ್ನಿ: ವೆಂಕಯ್ಯ ನಾಯ್ಡು

By Manjunatha
|
Google Oneindia Kannada News

ಬೆಂಗಳೂರು, ಜೂನ್ 28: ವಿದೇಶಿ ಆಹಾರಗಳಾದ ಪಿಡ್ಜಾ, ಬರ್ಗರ್ ತಿಂದು ಆರೋಗ್ಯ ಹಾಳು ಮಾಡಿಕೊಳ್ಳುವ ಬದಲಿಗೆ ದೇಸೀ ಆಹಾರ ತಿನ್ನಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ಘಟಕ ಉದ್ಘಾಟನೆಗೆ ಆಗಮಿಸಿದ್ದ ಅವರು ಕಾರ್ಯಕ್ರಮದಲ್ಲಿ ಮಾತಾನಡಿದರು.

ಹಾಸನ : ಹಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ 171 ಕೋಟಿ ಯೋಜನೆಹಾಸನ : ಹಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ 171 ಕೋಟಿ ಯೋಜನೆ

ಕನ್ನಡ, ಇಂಗ್ಲಿಷ್, ತೆಲುಗು, ಹಿಂದಿ ಭಾಷೆಗಳಲ್ಲಿ ಮಾತನಾಡಿದ ಅವರು, ಆರೋಗ್ಯದ ಮಹತ್ವ ಹಾಗೂ ಅದನ್ನು ಕಾಪಾಡಿಕೊಳ್ಳುವುದು ಏಕೆ ಅವಶ್ಯ ಎಂಬುದರ ಬಗ್ಗೆ ತಿಳಿಹೇಳಿದರು.

Do not eat western food : Venkaiah Naidu

ಆಹಾರಕ್ಕೂ ಸಂಸ್ಕೃತಿಗೂ ನಂಟಿದೆ ಎಂದ ಅವರು, ಕರ್ನಾಟಕದಲ್ಲಿ ರಾಗಿ ಮುದ್ದೆ, ಕೋಳಿ ಸಾರು, ಇಡ್ಲಿ, ಬಿಸಿಬೇಳೆಬಾತ್, ರವಾ ಇಡ್ಲಿ ಹೀಗೆ ಹಲವು ರುಚಿಕರ ದೇಸೀ ಆಹಾರಗಳು ಲಭ್ಯವಿವೆ, ಇವು ನಾಲಗೆಗೆ ರುಚಿ ಆರೋಗ್ಯಕ್ಕೆ ಹಿತ ಎಂದರು.

ವಿಶ್ವ ತೊನ್ನು ದಿನ: ಭಯಬೇಡ, ತೊನ್ನು ಸಾಂಕ್ರಾಮಿಕ ರೋಗವಲ್ಲ ವಿಶ್ವ ತೊನ್ನು ದಿನ: ಭಯಬೇಡ, ತೊನ್ನು ಸಾಂಕ್ರಾಮಿಕ ರೋಗವಲ್ಲ

ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಇನ್ನಷ್ಟು ಉಲ್ಬಣಿಸುವ ಸಾಧ್ಯತೆ ಇದೆ ಎಂದ ಅವರು, 2016ರಲ್ಲಿ 5 ಲಕ್ಷ ಜನ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ. 2020ರಲ್ಲಿ ಈ ಸಂಖ್ಯೆ 17.30 ಲಕ್ಷ ಜನ ಸಾವುಯ ಭಯವಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲ, ಮುಖ್ಯಮಂತ್ರಿ ಕುಮಾರಸ್ವಾಮಿ, ಉನ್ನತ ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.

English summary
Vice president Venkaiah Naidu said, do not eat western food like Pizza, burger. instead of eat Desi food. it will give you health. Cm Kumaraswamy, governor Vajubhai Vala, minister DK Shivakumar participated in program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X