ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್‌ ಅಂತ್ಯಕ್ರಿಯೆಗೆ ತಕರಾರು

|
Google Oneindia Kannada News

ಬೆಂಗಳೂರು, ನವೆಂಬರ್ 25: ಅಂಬರೀಶ್‌ ಅವರ ಅಂತಿಮಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬಾರದು ಎಂದು ವಕೀಲರೊಬ್ಬರು ತಕರಾರು ತೆಗೆದಿದ್ದಾರೆ.

ಅಂಬರೀಶ್‌ ಅವರ ಅಂತಿಮ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ಮಾಡಬಾರದು ಎಂದು ವಕೀಲ ಪಿ.ಆರ್.ದೇಸಾಯಿ ಅವರು ಇಂದು ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರಿಗೆ ಪಿಐಎಲ್‌ ಸಲ್ಲಿಸಿದ್ದಾರೆ.

LIVE: ಮಂಡ್ಯಕ್ಕೆ ತಲುಪಿದ 'ಮಂಡ್ಯದ ಗಂಡು' ಅಂಬರೀಶ್‌ ಪಾರ್ಥಿವ ಶರೀರLIVE: ಮಂಡ್ಯಕ್ಕೆ ತಲುಪಿದ 'ಮಂಡ್ಯದ ಗಂಡು' ಅಂಬರೀಶ್‌ ಪಾರ್ಥಿವ ಶರೀರ

ಕಂಠೀರವ ಸ್ಟುಡಿಯೋ ಇರುವುದು ಸಿನಿತಾರೆಗಳ ಅಂತಿಮ ಸಂಸ್ಕಾರಕ್ಕಲ್ಲ ಸಿನಿಮಾ ಕಾರ್ಯಕ್ಕಾಗಿ ಆ ಸ್ಟುಡಿಯೋ ಇದೆ ಅದನ್ನು ಅದೇ ಕಾರಣಕ್ಕೇ ಬಳಸಬೇಕು ಎಂದು ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೇಳಿದ್ದಾರೆ.

Do not let Ambareesh final cremation in Kanteerawa: PIL filed

ಹೀಗೆ ನಟ-ನಟಿಯರ ಅಂತಿಮ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ಮಾಡುತ್ತಾ ಹೋದರೆ ಕೊನೆಗೆ ಅದು ರುದ್ರಭೂಮಿ ಆಗಿ ಬಿಡುತ್ತದೆ ಎಂದು ವಕೀಲರು ತಮ್ಮ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಅಂಬಿಗೂ ಮಂಡ್ಯದ ಸರ್ ಎಂವಿ ಕ್ರೀಡಾಂಗಣಕ್ಕೂ ಎಂಥ ನಂಟು ಗೊತ್ತಾ?ಅಂಬಿಗೂ ಮಂಡ್ಯದ ಸರ್ ಎಂವಿ ಕ್ರೀಡಾಂಗಣಕ್ಕೂ ಎಂಥ ನಂಟು ಗೊತ್ತಾ?

ಭಾನುವಾರವಾದ ಇಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬಗ್ಗೆ ವಕೀಲರಿಗೆ ಮೌಖಿಕವಾಗಿ ಸೂಚನೆ ನೀಡಿದ ಹೈಕೋರ್ಟ್‌ ನ್ಯಾಯಮೂರ್ತಿ ಅವರು, ಈ ಅರ್ಜಿಯು ಇತರೆ ಸಾಮಾನ್ಯ ಅರ್ಜಿಗಳಂತೆ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.

ಮಾಜಿ ಸಚಿವ ಎಂ.ಎಚ್.ಅಂಬರೀಶ್ ರಾಜಕೀಯ ಜೀವನದ ನೋಟಮಾಜಿ ಸಚಿವ ಎಂ.ಎಚ್.ಅಂಬರೀಶ್ ರಾಜಕೀಯ ಜೀವನದ ನೋಟ

ನಾಳೆ ಅಂಬರೀಶ್ ಅವರ ಅಂತಿಮ ಸಂಸ್ಕಾರ ಮುಗಿದ ನಂತರವೇ ಪಿಐಎಲ್‌ ವಿಚಾರಣೆಗೆ ಬರಲಿದೆ.

English summary
A PIL filled to Karnataka high court objecting Ambareesh final cremation in Kanteerava studio. High court judge said that PIL will come to trial as other PILs. That means Ambareesh final cremation will happen in kanteerava studio only.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X