ಅನರ್ಹ ಶಾಸಕರನ್ನು ತಬ್ಬಲಿ ಮಾಡಬೇಡಿ: ಡಿಕೆ ಶಿವಕುಮಾರ್ ವ್ಯಂಗ್ಯ
ಬೆಂಗಳೂರು, ಜುಲೈ 29: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಎಲ್ಲ ಶಾಸಕರನ್ನೂ ಅನರ್ಹಗೊಳಿಸಿದ ಮರುದಿನವಾದ ಸೋಮವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಸದನದ ಒಟ್ಟು ಬಲಾಬಲದ ಆಧಾರದಲ್ಲಿ ಬಹುಮತಕ್ಕೆ ಕಡಿಮೆ ಸಂಖ್ಯೆಯ ಶಾಸಕರನ್ನು ಹೊಂದಿದ್ದರೂ ಅತೃಪ್ತ ಶಾಸಕರ ಗೈರು ಮತ್ತು ಅನರ್ಹತೆಯ ಲಾಭ ಪಡೆದ ಬಿಜೆಪಿ ಸುಲಭವಾಗಿಯೇ ಬಹುಮತ ಸಾಬೀಪಡಿಸಿಕೊಂಡಿದೆ.
ಈ ಬಗ್ಗೆ ಯಡಿಯೂರಪ್ಪ ಅವರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ವ್ಯಂಗ್ಯದ ದಾಟಿಯಲ್ಲಿ ಸಲಹೆ ನೀಡಿದ್ದಾರೆ. ನಿಮ್ಮನ್ನೇ ನಂಬಿರುವ ಆ ಶಾಸಕರ ಕೈಬಿಡಬೇಡಿ ಎಂದಿದ್ದಾರೆ.
'ಯಡಿಯೂರಪ್ಪ ಅವರಿಗೆ ಒಂದು ಸಲಹೆ ಕೊಡಲು ಬಯಸುತ್ತೇನೆ. ನಿಮ್ಮನ್ನು ಸಿಎಂ ಮಾಡಿದ ಅನರ್ಹರನ್ನು ಕೈಬಿಡಬೇಡಿ. ಅವರನ್ನು ತಬ್ಬಲಿಗಳನ್ನಾಗಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ' ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, 'ಅನರ್ಹಗೊಂಡ ಶಾಸಕರಿಗೆ ಏನೇ ಕೊಡ್ತೀವಿ ಅಂದಿದ್ದೀರೋ ಅವುಗಳನ್ನು ಕೊಡಿ. ಅವರನ್ನು ಮಂತ್ರಿ ಮಾಡ್ತೀರೋ, ಏನು ಮಾಡ್ತೀರೋ ನೋಡಿ. ಅವರಿಗೂ ನಿಮ್ಮ ಜತೆಯೇ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿ' ಎಂದು ಲೇವಡಿ ಮಾಡಿದರು.
'ವಿಪ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದಿದ್ರಿ. ಈಗ ಅನರ್ಹ ಶಾಸಕರ ಕಥೆ ಏನಾಯ್ತು ನೋಡಿ. ವಿಪ್ಗೆ ಕವಡೆ ಕಾಡಿನ ಕಿಮ್ಮತ್ತಿಲ್ಲ ಎನ್ನುವುದನ್ನು ಪ್ರೂವ್ ಮಾಡಿ ಅವರಿಗೆ ಒಳ್ಳೊಳ್ಳೆ ಇಲಾಖೆಗಳನ್ನು ನೀಡಿ. ನಿಮ್ಮನ್ನು ಮುಖ್ಯಮಂತ್ರಿ ಮಾಡಿದ ಶಾಸಕರಿಗೆ ಸದನದಲ್ಲಿ ಕೃತಜ್ಞತೆ ಸಲ್ಲಿಸಿಲ್ಲ. ಈಗಲಾದರೂ ಅವರಿಗೆ ಕೃತಜ್ಞತೆ ಸಲ್ಲಿಸಿ. ಅವರನ್ನು ಮಂತ್ರಿಗಳನ್ನಾಗಿ ಮಾಡಿ ಎಂದು ಅವರ ಪರವಾಗಿ ಕೋರಿಕೊಳ್ಳುತ್ತೇನೆ' ಎಂದು ಹೇಳಿದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ











Click it and Unblock the Notifications