ಇಂದಿರಾ ಕ್ಯಾಂಟೀನ್ನಲ್ಲಿ ಮುದ್ದೆ ವಿತರಣೆ ಯಾವಾಗಿನಿಂದ ಗೊತ್ತಾ?
ಬೆಂಗಳೂರು, ಡಿಸೆಂಬರ್ 8: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಲ್ಲಾ ವಾರ್ಡ್ಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಲ್ಲಿ ಸಂಕ್ರಾಂತಿ ಹಬ್ಬದ ನಂತರ ಅದರ ಮೆನುವಿನಲ್ಲಿ ರಾಗಿ ಮುದ್ದೆ ಮತ್ತು ರೊಟ್ಟಿಯನ್ನು ನೀಡಲಾಗುತ್ತದೆ ಎಂದು ಟಿವಿ 9 ವರದಿ ಮಾಡಿದೆ.
ರಾಗಿ ಮುದ್ದೆ ಕ್ಯಾಂಟೀನ್ನ ಊಟ ಮತ್ತು ರಾತ್ರಿಯ ಮೆನುವಿನ ಭಾಗವಾಗಿರುತ್ತದೆ. ಕ್ಯಾಂಟೀನ್ಗಳಲ್ಲಿ ಹೊಸ ಮೆನು ನೀಡಲು ಮತ್ತು ನಿರ್ವಹಣೆ ಕೊರತೆಯಿಂದ ತೊಂದರೆಗೊಳಗಾಗಿರುವ ನಗರದಲ್ಲಿ ಕ್ಯಾಂಟೀನ್ಗಳನ್ನು ನವೀಕರಿಸಲು ಪಾಲಿಕೆ ಟೆಂಡರ್ಗಳನ್ನು ನೀಡುವ ಸಾಧ್ಯತೆಯಿದೆ.

ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಬಂದ್:
ಮೈಸೂರಿನ ಬನ್ನಿಮಂಟಪ ಮತ್ತು ಉದಯಗಿರಿಯಲ್ಲಿರುವ ಎರಡು ಇಂದಿರಾ ಕ್ಯಾಂಟೀನ್ಗಳು ನಿರ್ವಹಣೆ ಕೊರತೆಯಿಂದ ಮುಚ್ಚಲ್ಪಟ್ಟಿವೆ. ಎರಡೂ ಕ್ಯಾಂಟೀನ್ಗಳು ಮುಚ್ಚಿ ತಿಂಗಳುಗಳೇ ಕಳೆದಿವೆ.
''ಕಳೆದ ಆರರಿಂದ ಏಳು ತಿಂಗಳಿಂದ ಕ್ಯಾಂಟೀನ್ ಮುಚ್ಚಲಾಗಿದೆ. ಕ್ಯಾಂಟೀನ್ಗಳನ್ನು ಹೊಸ ಗುತ್ತಿಗೆದಾರರು ವಹಿಸಿಕೊಂಡ ನಂತರ ಜನರಿಗೆ ಆಹಾರ ನೀಡುವುದನ್ನು ನಿಲ್ಲಿಸಿದರು. 8 ಸಾವಿರ ಸಂಬಳಕ್ಕೆ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದೆ. ತಿಂಗಳಾನುಗಟ್ಟಲೆ ಸಂಬಳ ಕೊಡದ ಕಾರಣ ಕೆಲಸ ನಿಲ್ಲಿಸಿದೆ. ನನಗೆ ಇನ್ನೂ 30,000 ರೂಪಾಯಿ ಬಾಕಿ ವೇತನ ಬಂದಿಲ್ಲ ಎಂದು ಇಂದಿರಾ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದ ದೇವೆರಮ್ಮ ತಿಳಿಸಿದರು.
2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಕಾರ್ಮಿಕ ವರ್ಗಕ್ಕೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. 2018 ರಲ್ಲಿ ಸರ್ಕಾರ ಬದಲಾದ ನಂತರ ಕ್ಯಾಂಟೀನ್ಗಳು ಕಾರ್ಯಾಚರಣೆ ಮತ್ತು ಹಣಕಾಸಿನ ಸಮಸ್ಯೆಗಳನ್ನು ಎದುರಿಸಲಾರಂಭಿಸಿದವು. ಸಿದ್ದರಾಮಯ್ಯ ಸರ್ಕಾರ ಪ್ರಾರಂಭಿಸಿದ 175 ಕ್ಯಾಂಟೀನ್ಗಳಲ್ಲಿ 163 ಮಾತ್ರ ಇನ್ನೂ ಕಾರ್ಯನಿರ್ವಹಿಸುತ್ತಿವೆ ಎಂದು ವರದಿಗಳು ತಿಳಿಸಿವೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications