ಇಂದಿರಾ ಕ್ಯಾಂಟೀನ್ನಲ್ಲಿ ಮುದ್ದೆ ವಿತರಣೆ ಯಾವಾಗಿನಿಂದ ಗೊತ್ತಾ?
ಬೆಂಗಳೂರು, ಡಿಸೆಂಬರ್ 8: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಲ್ಲಾ ವಾರ್ಡ್ಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಲ್ಲಿ ಸಂಕ್ರಾಂತಿ ಹಬ್ಬದ ನಂತರ ಅದರ ಮೆನುವಿನಲ್ಲಿ ರಾಗಿ ಮುದ್ದೆ ಮತ್ತು ರೊಟ್ಟಿಯನ್ನು ನೀಡಲಾಗುತ್ತದೆ ಎಂದು ಟಿವಿ 9 ವರದಿ ಮಾಡಿದೆ.
ರಾಗಿ ಮುದ್ದೆ ಕ್ಯಾಂಟೀನ್ನ ಊಟ ಮತ್ತು ರಾತ್ರಿಯ ಮೆನುವಿನ ಭಾಗವಾಗಿರುತ್ತದೆ. ಕ್ಯಾಂಟೀನ್ಗಳಲ್ಲಿ ಹೊಸ ಮೆನು ನೀಡಲು ಮತ್ತು ನಿರ್ವಹಣೆ ಕೊರತೆಯಿಂದ ತೊಂದರೆಗೊಳಗಾಗಿರುವ ನಗರದಲ್ಲಿ ಕ್ಯಾಂಟೀನ್ಗಳನ್ನು ನವೀಕರಿಸಲು ಪಾಲಿಕೆ ಟೆಂಡರ್ಗಳನ್ನು ನೀಡುವ ಸಾಧ್ಯತೆಯಿದೆ.

ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಬಂದ್:
ಮೈಸೂರಿನ ಬನ್ನಿಮಂಟಪ ಮತ್ತು ಉದಯಗಿರಿಯಲ್ಲಿರುವ ಎರಡು ಇಂದಿರಾ ಕ್ಯಾಂಟೀನ್ಗಳು ನಿರ್ವಹಣೆ ಕೊರತೆಯಿಂದ ಮುಚ್ಚಲ್ಪಟ್ಟಿವೆ. ಎರಡೂ ಕ್ಯಾಂಟೀನ್ಗಳು ಮುಚ್ಚಿ ತಿಂಗಳುಗಳೇ ಕಳೆದಿವೆ.
''ಕಳೆದ ಆರರಿಂದ ಏಳು ತಿಂಗಳಿಂದ ಕ್ಯಾಂಟೀನ್ ಮುಚ್ಚಲಾಗಿದೆ. ಕ್ಯಾಂಟೀನ್ಗಳನ್ನು ಹೊಸ ಗುತ್ತಿಗೆದಾರರು ವಹಿಸಿಕೊಂಡ ನಂತರ ಜನರಿಗೆ ಆಹಾರ ನೀಡುವುದನ್ನು ನಿಲ್ಲಿಸಿದರು. 8 ಸಾವಿರ ಸಂಬಳಕ್ಕೆ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದೆ. ತಿಂಗಳಾನುಗಟ್ಟಲೆ ಸಂಬಳ ಕೊಡದ ಕಾರಣ ಕೆಲಸ ನಿಲ್ಲಿಸಿದೆ. ನನಗೆ ಇನ್ನೂ 30,000 ರೂಪಾಯಿ ಬಾಕಿ ವೇತನ ಬಂದಿಲ್ಲ ಎಂದು ಇಂದಿರಾ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದ ದೇವೆರಮ್ಮ ತಿಳಿಸಿದರು.
2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಕಾರ್ಮಿಕ ವರ್ಗಕ್ಕೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. 2018 ರಲ್ಲಿ ಸರ್ಕಾರ ಬದಲಾದ ನಂತರ ಕ್ಯಾಂಟೀನ್ಗಳು ಕಾರ್ಯಾಚರಣೆ ಮತ್ತು ಹಣಕಾಸಿನ ಸಮಸ್ಯೆಗಳನ್ನು ಎದುರಿಸಲಾರಂಭಿಸಿದವು. ಸಿದ್ದರಾಮಯ್ಯ ಸರ್ಕಾರ ಪ್ರಾರಂಭಿಸಿದ 175 ಕ್ಯಾಂಟೀನ್ಗಳಲ್ಲಿ 163 ಮಾತ್ರ ಇನ್ನೂ ಕಾರ್ಯನಿರ್ವಹಿಸುತ್ತಿವೆ ಎಂದು ವರದಿಗಳು ತಿಳಿಸಿವೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications