ಕೇರಳದಂತೆ ಬೆಂಗಳೂರಲ್ಲೂ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಬೇಕೆ?
ಬೆಂಗಳೂರು, ಜನವರಿ 13: ಬೆಂಗಳೂರಲ್ಲೂ ಅಕ್ರಮ ಕಟ್ಟಡಗಳನ್ನು ನೆಲಸಮಯಗೊಳಿಸಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.
ಕೊಚ್ಚಿಯಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಕೇರಳ ಸರ್ಕಾರವು ನಾಲ್ಕು ಅಕ್ರಮ ಕಟ್ಟಡಗಳನ್ನು ಧರೆಗುರುಳಿಸಿದೆ. ಕೇರಳ ಮಾದರಿಯಲ್ಲಿ ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳ ವಿರುದ್ಧವೂ ಕೂಡ ಕಾರ್ಯಾಚರಣೆ ನಡೆಸಬೇಕೆ ಎನ್ನುವ ಪ್ರಶ್ನೆಯನ್ನು ಸಾರ್ವಜನಿಕರ ಮುಂದಿಡಲಾಗಿತ್ತು.
ಅದಕ್ಕೆ ಬಹುತೇಕ ಮಂದಿ ಹೌದು ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳನ್ನು ಕೂಡ ನೆಲಸಮಗೊಳಿಸಿ ಎನ್ನುವ ಅಭಿಪ್ರಾಯವನ್ನು ನೀಡಿದ್ದಾರೆ.
ಈಗಾಗಲೇ ಎರಡು ವರ್ಷಗಳ ಹಿಂದೆ ರಾಜಕಾಲುವೆ, ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದರು.ಆದರೆ ಈಗ ಅದು ಅರ್ಧಕ್ಕೆ ನಿಂತುಬಿಟ್ಟಿದೆ.
ಅಕ್ರಮವಾಗಿ ಕಟ್ಟಡ ಕಟ್ಟಿದ್ದರೆ ದಂಡ ವಸೂಲಿ ಮಾಡಿ, ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅನುಮತಿ ಸಿಗದ ಹಾಗೆ ನೋಡಿಕೊಳ್ಳಿ, ಈಗಿರುವ ಕಟ್ಟಡಗಳಿಂದ ಹಣ ವಸೂಲಿ ಮಾಡಿ, ಅದನ್ನು ಬಿಟ್ಟು ಕಟ್ಟಿದ ಕಟ್ಟಡವನ್ನು ಬೀಳಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಕೆರೆ ಕಟ್ಟೆಗಳ ಜಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ಬೇಡ
ಕೆರೆ ಕಟ್ಟೆಗಳನ್ನು ಮುಚ್ಚಿ, ಒತ್ತುವರಿ ಮಾಡಿ ಕಟ್ಟಿರುವ ಅಪಾರ್ಟ್ಮೆಂಟ್ಗಳು ಬೆಂಗಳೂರಲ್ಲಿ ತುಂಬಾ ಇವೆ. ವೃಷಭಾವತಿ ನದಿ ದಂಡೆಯನ್ನೂ ಬಿಡದೆ ಅಪಾರ್ಟ್ಮೆಂಟ್ ನಿರ್ಮಿಸಿದ್ದಾರೆ ಎಂದು ಓದುಗರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯದಲ್ಲಿ ಭ್ರಷ್ಟಾಚಾರ ಬೆರೆತುಹೋಗಿದೆ
ಯಾರೇ ಅಧಿಕಾರಕ್ಕೆ ಬಂದರೂ ಕೂಡ ಅಕ್ರಮ-ಸಕ್ರಮ ಮಾಡುತ್ತಾರೆ ವಿನಃ ದೊಡ್ಡ ಕುಳಗಳ ಕೂದಲು ಅಲ್ಲಾಡಿಸಲೂ ಕೂಡ ಯಾರಿಗೂ ಸಾಧ್ಯಾಗುತ್ತಿಲ್ಲ. ಯಾಕೆಂದರೆ ಇಲ್ಲಿಯ ರಾಜಕೀಯದ ರಕ್ತದಲ್ಲಿ ಭಷ್ಟಾಚಾರ ಬೆರೆತುಹೋಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 19 ಲಕ್ಷ ಕಟ್ಟಡವಿದೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಸುಪಾಸು ಹತ್ತೊಂಬತ್ತು ಲಕ್ಷ ಕಟ್ಟಡ ಇದೆ. ಅದರಲ್ಲಿ ಬಿಬಿಎಂಪಿ ಅನುಮತಿ ಪಡೆಯದೆ ಬಿ ಖಾತಾ ಇರುವ ಮೂರು ಲಕ್ಷ ಕಟ್ಟಡಗಳು ಹಾಗೂ ಕೃಷಿ ಜಮೀನಿನಲ್ಲೂ ಕಟ್ಟಡವಿದೆ. ಒಟ್ಟು ಮೂರು ಲಕ್ಷ ಅದನ್ನು ಅನಧಿಕೃತ ಎಂದೂ ಪರಿಗಣಿಸಲಾಗಿದೆ. ರಾಜಕಾಲುವೆ ವ್ಯಾಪ್ತಿಯಲ್ಲಿ 2,626 ಅನಧಿಕೃತ ಕಟ್ಟಡವಿದೆ. ಒಟ್ಟು ಹತ್ತು ಕೆರೆಯಲ್ಲಿ ಭೂ ಒತ್ತುವರಿಯ ಸಂಪೂರ್ಣ ಚಿತ್ರಣ ಸಿಕ್ಕಿದ್ದು ಆರು ಕೆರೆಯ ಒತ್ತುವರಿ ಬಿಡಿಸಿ ಪೆನ್ಸಿಂಗ್ ಹಾಕಲಾಗಿದೆ.

ಕೊಚ್ಚಿಯಲ್ಲಿ ನಾಲ್ಕು ಬಹುಮಹಡಿ ಕಟ್ಟಡ ನೆಲಸಮ
ಕಡಲ ತೀರ ನಿಯಂತ್ರಣ ವಲಯ ಉಲ್ಲಂಘಿಸಿ ಕೇರಳದ ಕೊಚ್ಚಿಯ ಮರಡ್ನಲ್ಲಿ ನಿರ್ಮಿಸಿದ್ದ ಬಹುಮಹಡಿಯ ನಾಲ್ಕು ಕಟ್ಟಡಗಳ ನೆಲಸಮ ಕಾರ್ಯಾಚರಣೆ ಭಾನುವಾರ ಪೂರ್ಣಗೊಂಡಿದೆ.
ಶನಿವಾರ ಎರಡು ಹಾಗೂ ಭಾನುವಾರ ಎರಡು ಕಟ್ಟಡಗಳನ್ನ ನೆಲಸಮಗೊಳಸಿಲಾಗಿತ್ತು. ಸಿಆರ್ಜೆಡ್ ಮಾನದಂಡಗಳನ್ನು ಉಲ್ಲಂಘಿಸಿ ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳನ್ನು ಧ್ವಂಸಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿ ಎಂಟು ತಿಂಗಳ ಬಳಿಕ ಕಾರ್ಯಾಚರಣೆ ನಡೆಸಲಾಯಿತು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications