ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವತಿಗೆ 5 ಬಾರಿ ಇಂಜೆಕ್ಷನ್ ಚುಚ್ಚಿದ ವೈದ್ಯ & ನರ್ಸ್- ಮುಂದೇನಾಯ್ತು?
ಬೆಂಗಳೂರು, ನವೆಂಬರ್, 08: ಸಾಮಾನ್ಯವಾಗಿ ವೈದ್ಯರು ಕುಡುಕರಿಗೆ ಮದ್ಯಪಾನ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ ಅಂತಾ ಸಲಹೆ ನೀಡುವುದನ್ನು ನೋಡಿದ್ದೇವೆ. ಆದರೆ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ವಿಚಿತ್ರ ಎಂಬಂತೆ ಈ ನಿಯಕ್ಕೆ ತದ್ವಿರುದ್ಧವಾಗಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ವೈದ್ಯ & ನರ್ಸ್ ಕುಡಿದ ಮತ್ತಿನಲ್ಲೇ 4-5 ಬಾರಿ ಇಂಜೆಕ್ಷನ್ ನೀಡಿರುವ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಬಳಿ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಗಾದರೆ ಇಂಜೆಕ್ಷನ್ ಕೊಡಿಸಿಕೊಂಡ ಯುವತಿ ಬಳಿಕ ಮಾಡಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಕುಮಾರಸ್ವಾಮಿ ಲೇಔಟ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲೇ ವೈದ್ಯ ಮತ್ತು ನರ್ಸ್ ಯುವತಿ ಜೀವಕ್ಕೆ ಕುತ್ತು ತರುತ್ತಿದ್ದರು. ನವೆಂಬರ್ 3ರಂದು ಜ್ವರದಿಂದ ಬಳುತ್ತುದ್ದ ಯುವಯಿ ಆಸ್ಪತ್ರೆಗೆ ಭೇಟಿ ನೀಡಿದ್ದಾಳೆ.
ಈ ವೇಳೆ ಕುಡಿದ ಮತ್ತಿನಲ್ಲಿದ್ದ ವೈದ್ಯ ಪ್ರದೀಪ್ ಮತ್ತು ನರ್ಸ್ ಮಹೇಂದ್ರ ಯುವತಿಯ ಕೈಹಿಡಿದು ಒಂದು ಇಂಜೆಕ್ಷನ್ ನೀಡಿದ್ದಾರೆ. ಬಳಿಕ ವೈದ್ಯ ಪ್ರದೀಪ್ ಕರೆದು ಯುವತಿಗೆ ಮತ್ತೊಂದು ಇಂಜೆಕ್ಷನ್ ನೀಡುತ್ತಾನೆ.
ಅಷ್ಟೇ ಅಲ್ಲದೆ, ಮುಂದುವರೆದು 4 ರಿಂದ 5 ಬಾರಿ ಇಂಜೆಕ್ಷನ್ ನೀಡಿದ್ದಾರೆ. ಮೈ ಕೈಗೆ ನಾಲ್ಕೈದು ಇಂಜೆಕ್ಷನ್ ಹಾಕಿದ್ದರಿಂದ ಯುವತಿ ಗಾಬರಿಗೊಂಡಿದ್ದಾರೆ. ತಕ್ಷಣ ಕುಡಿದು ಬಂದಿದ್ದೀರಾ ಅಂತಾ ಯುವತಿ ಪ್ರಶ್ನಿಸಿದ್ದಕ್ಕೆ ವೈದ್ಯ ಅಲ್ಲಿಂದ ಪರಾರಿ ಆಗಿದ್ದಾನೆ.
ಇದೇ ವೇಳೆ ಕುಡಿದು ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪ ಸಹ ಕೇಳಿಬಂದಿದೆ. ಬಳಿಕ ನರ್ಸ್ ಮಹೇಂದ್ರನನ್ನು ಯುವತಿಯ ಪೋಷಕರು ತರಾಟೆಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ ಎಂದು ತಿಳಿದುಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications