ಇಂಜೆಕ್ಷನ್ ಕೊಟ್ಟು ತಾಯಿ, ತಂಗಿಯನ್ನು ಕೊಂದಿದ್ದ ವೈದ್ಯ ಅರೆಸ್ಟ್
ಬೆಂಗಳೂರು, ಡಿಸೆಂಬರ್ 5: ತಾಯಿ ಹಾಗೂ ತಂಗಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಆರ್ಆರ್ ನಗರದ ವೈದ್ಯ ಗೋವಿಂದ್ ಪ್ರಕಾಶ್ ನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಆರ್ ಆರ್ ನಗರ ಪೊಲೀಸರು ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಮೂಕಾಂಬಿಕಾ (75), ತಂಗಿ ಶ್ಯಾಮಲಾ (40)ಗೆ ಇಂಜೆಕ್ಷನ್ ಕೊಟ್ಟು ಹತ್ಯೆ ಮಾಡಿದ್ದಾನೆ. ನಂತರ ತಾನೂ ಚುಚ್ಚಿಕೊಂಡಿದ್ದಾನೆ.
ಗಾಯಾಳು ವೈದ್ಯನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಗೋವಿಂದ ಪ್ರಕಾಶ್ ಡೆತ್ನೋಟ್ ಬರೆದಿಟ್ಟಿದ್ದು, ಅನಾರೋಗ್ಯದ ಕಾರಣದಿಂದ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿಕೊಂಡು ಸಾಯುತ್ತಿರುವುದಾಗಿ ತಿಳಿಸಿದ್ದಾನೆ. ಈತ ಬಿಜಿಎಸ್ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಎನ್ನಲಾಗಿದೆ.

ತಾಯಿ ಬಿಪಿ ಮತ್ತು ಶುಗರ್ ನಿಂದ ಬಳಲುತ್ತಿದ್ದರು. ಇತ್ತ ತಂಗಿಗೆ ಮದುವೆ ಆಗಿಲ್ಲ ಎನ್ನುವ ಚಿಂತೆ ಗೋವಿಂದರಾಜುವನ್ನು ಕಾಡುತ್ತಿತ್ತು. ಒಬ್ಬಳೇ ತಂಗಿಗೆ ಮದುವೆ ಮಾಡಲಿಲ್ಲ ಎಂದು ಜಿಗುಪ್ಸೆಗೆ ಒಳಗಾಗಿದ್ದರಂತೆ. ಇತ್ತ ಪತ್ನಿಯನ್ನು ಕಳೆದುಕೊಂಡಿದ್ದ ಗೋವಿಂದರಾಜುವಿಗೆ ಮಕ್ಕಳಿರಲಿಲ್ಲ. ಆರ್.ಆರ್.ನಗರದಲ್ಲಿ ಆಸ್ಪತ್ರೆ ತೆರೆದು ಜೀವನ ನಡೆಸುತ್ತಿದ್ದರೂ, ನಿರೀಕ್ಷಿತ ಆದಾಯ ಬರುತ್ತಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿತ್ತು. ಇದೀಗ ಡಾ ಗೋವಿಂದ್ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications