ಮತಗಟ್ಟೆಯಲ್ಲಿ ವೈದ್ಯರಿಂದ 'ಹೃದಯ' ಸ್ಪರ್ಷಿ ಕಾರ್ಯ: ಗೋಲ್ಡನ್ ಕ್ಷಣಗಳಲ್ಲಿ ಉಳಿಯಿತು ಜೀವ
ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಲೋಕಸಭೆಗೆ ಚುನಾವಣೆ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ವ್ಯಕ್ತಿಯೊಬ್ಬರು ಜೀವ ಉಳಿದಿದೆ.
ಹೌದು, ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಬಳಲುತ್ತಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದಾರೆ. ಕಾರಣ ಸಾವಿನಂಚಿನಲ್ಲಿದ್ದ ಮಹಿಳೆಯ ಜೀವ ಉಳಿದಿದೆ.

ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮತದಾರರು ಆಗಮಿಸಿದ್ದರು. ಈ ವೇಳೆ ಆ ಮಹಿಳೆ ಮತ್ತು ವೈದ್ಯರು ಸಹ ಮತದಾನಕ್ಕೆಂದು ಆಗಮಿಸಿದ್ದರು. ಮತದಾನ ಮಾಡಲು ಎಲ್ಲರಂತೆ 50 ವರ್ಷದ ಆಸುಪಾಸು ವಯಸ್ಸಿನ ಮಹಿಳೆ ತಾಳ್ಮೆಯಿಂದ ಕಾಯುತ್ತಿದ್ದರು.
ತಾವೇ ತಂದಿದ್ದ ಕ್ಯಾನಿನಲ್ಲಿ ನೀರು ಕುಡಿಯಲು ಮುಂದಾದರು. ಈ ವೇಳೆ ತ್ರಾಣವಿಲ್ಲದೇ ಅಸ್ವಸ್ಥರಾಗಿ ಕುಸಿದರು. ಈ ವೇಳೆ ಅದೇ ಮಗಗಟ್ಟೆಯಲ್ಲಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗ್ಗೆ 9 ಗಂಟೆ ಘಟನೆ: ಜೀವ ಉಳಿಸಿದ ವೈದ್ಯ
ಇಂದು ಬೆಳಗ್ಗೆ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕುಸಿದು ಬೀಳುತ್ತಿದ್ದ ಮಹಿಳೆಯನ್ನು ಅಲ್ಲಿಯೇ ನಿಂತಿದ್ದವರು ಕೈ ಹಿಡಿದು ಆಸರೆಯಾದರು. ಈ ವೇಳೆ ವೈದ್ಯ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು, ಮಹಿಳೆಯ ನಾಡಿ ಮಿಡಿತ ಪರಿಶೀಲಿಸಿದ್ದಾರೆ. ಈ ವೇಳೆ ನಾಡಿಮಿಡಿ ತೀರಾ ಕಡಿಮೆ ಆಗಿದೆ. ಕಣ್ಣುಗಳನ್ನು ಮೇಲಕ್ಕೆ ಮಾಡಿ ಕುಸಿದ ಮಹಿಳೆಯು ಯಾರಿಗೂ ಸ್ಪಂದಿಸಲಿಲ್ಲ.
ಆ ಮಹಿಳೆಗೆ ಉಸಿರುಗಟ್ಟುವ ಸ್ಥಿತಿಯಲ್ಲಿದ್ದದ್ದು ಕಂಡು ನಾನು ತಕ್ಷಣವೇ ಅವರಿಗೆ CPR (ಹೃದಯ ಶ್ವಾಸಕೋಶದ ಪುನರುಜ್ಜೀವನ) ಮಾಡಿದೆ. ಕೂಡಲೇ ಅವರ ದೇಹ ಸ್ಪಂದಿಸಿದ್ದು, ಅವರ ಆರೋಗ್ಯ ಮರಳಿ ಯಥಾಸ್ಥಿತಿಗೆ ಮರಳಿತು ಎಂದು ವೈದ್ಯರು ಮಾಹಿತಿ ನೀಡಿದರು.
ಮಹಿಳೆಗೆ ಕುಸಿಯುತ್ತಿದ್ದಂತೆ ಮತಗಟ್ಟೆಯಲ್ಲಿ ನಿಯೋಜನೆಗೊಂಡಿದ್ದ ಚುನಾವಣಾ ಕರ್ತವ್ಯದಲ್ಲಿದ್ದವರು ಸಹಾಯಕ್ಕೆ ಧಾವಿಸಿದರು. ಮಹಿಳೆಗೆ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್ ಅನ್ನು ಕರೆಯಲಾಯಿತು. ಐದೇ ನಿಮಿಷದಲ್ಲಿ ಬಂದ ಆಂಬುಲೆನ್ಸ್ನಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇಂತಹ ಸಂದರ್ಭದಲ್ಲಿ ಒಂದೊಂದು ಕ್ಷಣ ಕ್ಷಣವು ಬಹಳ ಮುಖ್ಯವಾಗುತ್ತದೆ. ಅನಾರೋಗ್ಯ ಘಟನೆಯಿಂದಾಗಿ ಅವರು ಮತದಾನ ಮಾಡಲಾಗಲಿಲ್ಲ. ಈ ಕುರಿತ ವಿಡಿಯೋವನ್ನು TNIE ವರದಿಗಾರರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
ಮತದಾನ ಮಾಡಿ ವೃದ್ಧೆ ಸಾವು
ಇನ್ನೂ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಲಳ್ಳಿ ಗ್ರಾಮದಲ್ಲಿ ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ವೃದ್ಧ ಮಹಿಳೆಯೊಬ್ಬರು ಮತದಾನ ಮಾಡಿದ ಬಳಿಕ ಮೃತಪಟ್ಟಿದ್ದಾರೆ. 80 ವರ್ಷದ ವೃದ್ಧ ಮಹಿಳೆಯೊಬ್ಬರು ಹತ್ತಿರದ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಮನೆಗೆ ವಾಪಾಸಾದರು. ನಂತರ ಕೆಲವೇ ಕ್ಷಣಗಳಲ್ಲಿ ಅವರು ನಿಧನರಾದರು ಎಂದು ತಿಳಿದು ಬಂದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications