ಶಾಂತಿನಗರದಲ್ಲಿ ಚಲಿಸುತ್ತಿದ್ದ ಬಸ್ನಿಂದ ಬಿದ್ದು ವೈದ್ಯ ಸಾವು
ಬೆಂಗಳೂರು, ಫೆಬ್ರವರಿ 28: ಶಾಂತಿನಗರ ಬಸ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ಬಸ್ನಿಂದ ಇಳಿಯಲು ಹೋಗಿ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬಸ್ ಚಾಲಕನನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿ ಡಾ. ಅಂದನೂರು ಚಿಂತನ್ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಬೋಧಕರಾಗಿ ಕೆಲಸದಲ್ಲಿದ್ದರು. ಇವರು ಮೂಲತಃ ದಾವಣಗೆರೆಯವರಾಗಿದ್ದು ಎಂಡಿ ವ್ಯಾಸಂಗ ಮಾಡಲು ಯೋಜಿಸಿದ್ದರೆಂದು ತಿಳಿದುಬಂದಿದೆ.
ಗರದ ಶಾಂತಿನಗರ ಬಸ್ ನಿಲ್ದಾಣದಲ್ಲಿ ಚಲಿಸುತ್ತಿರುವ ಬಿಎಂಟಿಸಿ ಬಸ್ನಿಂದ ಏಕಾಏಕಿ ಇಳಿಯಲು ಮುಂದಾದ 26 ವರ್ಷದ ಎಂಬಿಬಿಎಸ್ ವೈದ್ಯ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ 2.45 ರ ಸುಮಾರಿಗೆ ಚಿಂತನ್ ಶಿವಾಜಿನಗರಕ್ಕೆ ತೆರಳುತ್ತಿದ್ದ ಬಸ್ ಹತ್ತಿದಾಗ ಈ ಘಟನೆ ಸಂಭವಿಸಿದೆ ಅವರು ಮೆಜೆಸ್ಟಿಕ್ಗೆ ಟಿಕೆಟ್ ಕೇಳಿದಾಗ, ಕಂಡಕ್ಟರ್ ಈ ಬಸ್ ಮೆಜೆಸ್ಟಿಕ್ ಗೆ ತೆರಳಲ್ಲ ಎಂದಿದ್ದಾರೆ. ಆಗ ಚಲಿಸುತ್ತಿದ್ದ ಬಸ್ಸಿನಿಂದ ಚಿಂತನ್ ಕೆಳಗಿಳಿಯಲು ಪ್ರಯತ್ನಿಸಿದ್ದಾರೆ. ಆದರೆ ಆಯತಪ್ಪಿ ಜಾರಿ ಬಿದ್ದಿದ್ದಾರೆ. ಆದರೆ ಚಾಲಕ ಪ್ರಯಾಣಿಕ ಬಿದ್ದಿದ್ದನ್ನು ಗಮನಿಸದೆ ಬಸ್ ಚಲಾಯಿಸಿದ್ದರಿಂದ ಬಸ್ಸಿನ ಹಿಂಭಾಗದ ಚಕ್ರ ಚಿಂತನ್ ಅವರ ತಲೆ ಮೇಲೆ ಉರುಳಿ ಹೋಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದರು" .
ಘಟನೆ ಕುರಿತಂತೆ ಪ್ರತ್ಯಕ್ಷದರ್ಶಿಯಾಗಿದ್ದ ವಿಲ್ಸನ್ ಗಾರ್ಡನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ವೇಳೆ ನಿಯಮ ಬಾಹಿರವಾಗಿ ಬಸ್ಸಿನ ಶೋರ್ ತೆರೆದ ಕಾರಣ ಚಾಲಕ ಕಗ್ಗಲಿಪುರ ನಿವಾಸಿ ತಾಯಣ್ಣ ಬಿ. ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.
ಘಟನೆ ನಡೆದ ನಂತರ ಪ್ರಯಾಣಿಕರು ಕಿರುಚಿಕೊಂಡಿದ್ದಾರೆ. ಆಗ ಬಸ್ ನಿಲ್ಲಿಸಿದ ಚಾಲಕ ಚಿಂತನ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾನೆ. ಆದರೆ ಚಕ್ರ ಚಿಂತನ್ ತಲೆ ಮೇಲೆ ಹರಿದ ಪರಿಣಾಮ ಅವರಾಗಲೇ ಸಾವನ್ನಪ್ಪಿರುವುದು ಗೊತ್ತಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications