ಸಾಮಾನ್ಯ ನೆಗಡಿಯಿದ್ದರೂ ಕೊವಿಡ್ ಪರೀಕ್ಷೆ ಮಾಡಿಸಿ: ವೈದ್ಯರ ಸಲಹೆ
ಬೆಂಗಳೂರು, ಸೆಪ್ಟೆಂಬರ್ 16: ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ವಾತಾವರಣವೂ ತಂಪಾಗಿದೆ. ಜ್ವರ, ಕೆಮ್ಮು, ಶೀತ ಪ್ರಕರಣಗಳು ಹೆಚ್ಚುತ್ತಿವೆ.
ವಾತಾವರಣಕ್ಕೆ ಹೀಗಾಗಿದೆ, ಸಾಮಾನ್ಯ ನೆಗಡಿಯಷ್ಟೇ ಎಂದು ನಿರ್ಲಕ್ಷ್ಯ ಮಾಡಬೇಡಿ, ನೆಗಡಿ, ಗಂಟಲಲ್ಲಿ ಕೆರೆತ ಇವು ಕೊವಿಡ್ 19 ಲಕ್ಷಣಗಳಾಗಿರಬಹುದು. ಹೀಗಾಗಿ ಕೆಲವು ವೈದ್ಯರು ಸಂಬಂಧಿತ ಪರೀಕ್ಷೆಗಳನ್ನು ಮಾಡಿಸುವಂತೆ ಹೇಳುತ್ತಿದ್ದಾರೆ. ಇನ್ನೂ ಕೆಲವರು ಹಲವು ದಿನಗಳ ವರೆಗೆ ರೋಗಿಯ ಮೇಲೆ ನಿಗಾ ಇಡುವಂತೆ ಹೇಳಿದ್ದಾರೆ.
ರೋಗದ ಲಕ್ಷಣಗಳಿರುವ ಕಾರಣ ಕೆಲವು ಮಂದಿಗೆ ಗೊಂದಲಗಳು ಉಂಟಾಗುತ್ತಿವೆ ಹೀಗಾಗಿ ವರದಿ ಬರುವವರೆಗೂ ಐಸೊಲೇಷನ್ನಲ್ಲಿ ಇರುವ ನಿರ್ಧಾರ ಮಾಡಿದ್ದಾರೆ.

ಕೆಮ್ಮು, ಜ್ವರವಿದ್ದರೆ ಬೇರೆಯವರಿಂದ ದೂರವಿರಿ
ರೋಗಿಗಳಿಗೆ ಕೆಮ್ಮು, ಜ್ವರ, ಮೂಗು ಸೋರುತ್ತಿದ್ದರೆ ತಮ್ಮನ್ನು ಮೊದಲ ದಿನದಿಂದಲೇ ಬೇರೆಯವರಿಂದ ಪ್ರತ್ಯೇಕಿಸಿಕೊಳ್ಳಬೇಕು.
ಸಾಕಷ್ಟು ಮಂದಿ ಶೀತವುಳ್ಳವರು ನಾವು ಮನೆಯಿಂದ ಹೊರಗಡೆಯೇ ಹೋಗಿಲ್ಲ, ವಾತಾವರಣದಿಂದ ಶೀತ ಬಂದಿದೆ ಎಂದು ಹೇಳುತ್ತಿದ್ದಾರೆ.
ಸಮುದಾಯ ಸೋಂಕಾಗಿ ಪರಿವರ್ತನೆ
ಕೊರೊನಾ ಸೋಂಕು ಈಗ ಸಮುದಾಯ ಸೋಂಕಾಗಿ ಪರಿವರ್ತನೆಗೊಳ್ಳುವ ಹಂತದಲ್ಲಿದೆ. ಪೋಷಕರು ಮನೆಯಿಂದ ಹೊರಗಡೆ ಹೋದರೆ ಅವರು ಮಕ್ಕಳಿಗೆ ಸೋಂಕು ಹರಡಿಸುವ ಎಲ್ಲಾ ಸಾಧ್ಯತೆ ಇರುತ್ತದೆ.
ನಿಮಗೆ ಜ್ವರ, ಕಫ, ಶೀತವಿದ್ದರೆ ಮೊದಲು ವೈದ್ಯರನ್ನು ಭೇಟಿಯಾಗುವುದು ಒಳಿತು. ಮೊದಲೇ ಚಿಕಿತ್ಸೆ ಲಭ್ಯವಾದರೆ ಬೇಗ ಗುಣಮುಖರಾಗಬಲ್ಲದು.

ಪರೀಕ್ಷೆ ಮಾಡಿಸಿಕೊಳ್ಳಿ
ಇನ್ಫ್ಲುಯೆನ್ಝಾ(ಶೀತಜ್ವರ)ವಿದ್ದರೂ ಕೂಡ ಪರೀಕ್ಷೆ ಮಾಡಿಸಿಕೊಳ್ಳಬೇಕು. 2-3 ದಿನಗಳ ಕಾಲ ರೋಗದ ಲಕ್ಷಣಗಳು ಮುಂದುವರೆದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ.
Recommended Video

ಟ್ರಾವೆಲ್ ಹಿಸ್ಟರಿ
ಫೀವರ್ ಕ್ಲಿನಿಕ್ಗಳಲ್ಲಿ ವೈದ್ಯರು ನಿಮ್ಮ ಟ್ರಾವೆಲ್ ಹಿಸ್ಟರಿ, ಜನರ ಸಂಪರ್ಕದ ಕುರಿತು ಮಾಹಿತಿ ಕೇಳುತ್ತಾರೆ.ಗಂಟಲು ನೋವು, ಮೈಕೈನೋವು, ತಲೆನೋವು, ಸಣ್ಣ ಪ್ರಮಾಣದ ಜ್ವರವು ಕೊವಿಡ್ 19 ಲಕ್ಷಣವಾಗಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications