ಕೊವಿಡ್ 19 ಚಿಕಿತ್ಸೆ ಒತ್ತಡ, ಮಾನಸಿಕ ತಜ್ಞರ ಮೊರೆ ಹೋದ ವೈದ್ಯರು
ಬೆಂಗಳೂರು, ನವೆಂಬರ್ 20: ಕೊವಿಡ್ 19 ಚಿಕಿತ್ಸೆಯ ಒತ್ತಡ ಸಹಿಸಿಕೊಳ್ಳಲಾಗದೆ ಹಲವು ವೈದ್ಯರು ಮಾನಸಿಕ ತಜ್ಞರ ಮೊರೆ ಹೋಗುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮನೋವೈದ್ಯಕೀಯ ಸಹಾಯವಾಣಿಗೆ ಕರೆ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಮನೆಯಲ್ಲಿರುವ ಹಿರಿಯ ವಯಸ್ಕರು, ಪೋಷಕರು ಹಾಗೂ ತಮ್ಮ ಮಕ್ಕಳಿಗೆ ತಮ್ಮಿಂದ ಎಲ್ಲಿ ಅಪಾಯ ಸಂಭವಿಸುತ್ತದೆಯೋ ಎಂಬ ಭಯವನ್ನು ಸಾಕಷ್ಟು ವೈದ್ಯರು ವ್ಯಕ್ತಪಡಿಸಿದ್ದಾರೆ.
ಸೋಂಕು ತಗುಲಿದ ಕೂಡಲೇ ವೈದ್ಯರು ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಇದರಿಂದ ಆರ್ಥಿಕ ಸಂಕಷ್ಟ, ಸಾಮಾಜಿಕ ಕಳಂಕವನ್ನೂ ಎದುರಿಸಬೇಕಾಗುತ್ತದೆ. ಸಾಕಷ್ಟು ವೈದ್ಯರು ಹೃದಯ ಸಂಬಂಧ ಸಮಸ್ಯೆ, ಮಧುಮೇಹ ಹಾಗೂ ಅಧಿಕ ರಕ್ತದೊತ್ತಡಿಂದ ಬಳಲುತ್ತಿದ್ದಾರೆ. ಇಂತಹವರಿಗೆ ಆಪ್ತಸಲಹೆಗಳು ಅತ್ಯಗತ್ಯವಿರುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ವೈದ್ಯರು (ಐಎಂಎ-ಕೆ), ಇಂಡಿಯನ್ ಸೈಕಿಯಾಟ್ರಿಕ್ ಸೊಸೈಟಿ, ಕರ್ನಾಟಕ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಸಹಯೋಗದೊಂದಿಗೆ ಈ ಸಹಾಯವಾಣಿಯನ್ನು ತೆರೆಯಲಾಗಿದ್ದು, ಸಹಾಯವಾಣಿಗೆ ಪ್ರತೀನಿತ್ಯ 10-15 ಮಂದಿ ವೈದ್ಯರು ಕರೆ ಮಾಡಿ ಸಲಹೆ ಹಾಗೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತೀವ್ರ ಒತ್ತಡದಲ್ಲಿರುವ ವೈದ್ಯರಿಗೆ ಸಹಾಯವಾಗುವ ಸಲುವಾಗಿ ಈ ಸಹಾಯವಾಣಿಯನ್ನು ಕಳೆದ ತಿಂಗಳು ಆರಂಭಿಸಲಾಗಿತ್ತು. ಇದುವರೆಗೂ ಈ ಸಹಾಯವಾಣಿಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ ಎಂದು ಐಎಂಎ-ಕೆ ಸೈಕಿಯಾಟ್ರಿ ಸೆಲ್ನ ಅಧ್ಯಕ್ಷ ಡಾ.ಕೆ.ಎಸ್.ಕಾರಂತ್ ಅವರು ಹೇಳಿದ್ದಾರೆ.
ಕೇಂದ್ರೀಕೃತ ಸಹಾಯವಾಣಿ ಅಡಿಯಲ್ಲಿ 10 ದೂರವಾಣಿ ಸಂಖ್ಯೆಗಳಿವೆ, ಒತ್ತಡಕ್ಕೊಳಗಾಗಿರುವ ವೈದ್ಯರು ಹಾಗೂ ಅವರ ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡಿ ಸಲಹೆ ಹಾಗೂ ಚಿಕಿತ್ಸೆಗಳನ್ನು ಪಡೆದುಕೊಳ್ಳುತ್ತಿದ್ದಾರೆ
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications