ದೊಡ್ಡಬಳ್ಳಾಪುರ: ಕ್ರಿಕೆಟ್ ವೈದಾನದಲ್ಲಿ ವಾಹನ ನಿಲುಗಡೆಗೆ ಅಡ್ಡಿಪಡಿಸಿದ ಇಬ್ಬರ ಹತ್ಯೆ!
ಕ್ರಿಕೆಟ್ ಸ್ಥಳದಲ್ಲಿ ವಾಹನ ನಿಲುಗಡೆಗೆ ಅಡ್ಡಿಪಡಿಸಿದ ಇಬ್ಬರನ್ನು ಹತ್ಯೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಬಳಿ ಶುಕ್ರವಾರ ನಡೆದಿದೆ.
ಬೆಂಗಳೂರು ಫೆಬ್ರವರಿ 18: ಕ್ರಿಕೆಟ್ ಮೈದಾನದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ ನಾಲ್ವರ ತಂಡ ಇಬ್ಬರು ಯುವಕರನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ಬಳಿ ಶುಕ್ರವಾರ ನಡೆದಿದೆ. ಮೃತರಿಬ್ಬರೂ ದೊಡ್ಡಬೆಳವಂಗಲ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ದೊಡ್ಡಬೆಳವಂಗಲದ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಇಂಜಿನಿಯರಿಂಗ್ ಪದವೀಧರ ಭರತ್ ಕುಮಾರ್ (23) ಮತ್ತು ಪದವಿ ಪೂರ್ವ ವಿದ್ಯಾರ್ಥಿ ಪ್ರತೀಕ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.

ಹತ್ಯೆಯಲ್ಲಿ ಹುಲಿಕುಂಟೆಯ ವಿನಯ್ ಮತ್ತು ಆತನ ಸ್ನೇಹಿತರ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ಪೊಲೀಸ್ ತಂಡಗಳು ಹಂತಕರ ಪತ್ತೆಗೆ ಪ್ರಯತ್ನಿಸುತ್ತಿವೆ ಎಂದು ಬೆಂಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಶುಕ್ರವಾರ ಸರ್ಕಾರಿ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದಾಗ ನಾಲ್ವರ ಗ್ಯಾಂಗ್ ಕಾರನ್ನು ಚಲಾಯಿಸಿಕೊಂಡು ಬಂದು ನಿಲ್ಲಿಸಿದ್ದರು. ಮೈದಾನದಲ್ಲಿದ್ದವರು ಕಾರು ನಿಲ್ಲಿಸದಂರೆ ಪ್ರತಿಭಟನೆ ನಡೆಸಿದಾಗ ವಾಗ್ವಾದ ನಡೆದು ಕಾರಿಗೆ ಹಾನಿಗೊಳಿಸಲಾಯಿತು. ನಂತರ ಕಾರಿನಲ್ಲಿ ಬಂದ ಗುಂಪು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದರು, ಆದರೆ ಕೆಲವೇ ನಿಮಿಷಗಳಲ್ಲಿ ವರದಿ ಸಲ್ಲಿಸದೆ ಅಲ್ಲಿಂದ ತೆರಳಿದರು.

ಇದೇ ವೇಳೆ ವಾಹನದ ಮೇಲೆ ದಾಳಿ ನಡೆಸಿ ಹಾನಿಗೊಳಿಸಿದ್ದ ಗ್ಯಾಂಗ್ ಪರಾರಿಯಾಗುತ್ತಿರುವುದನ್ನು ಗಮನಿಸಿದ ಪುರುಷರ ನಾಲ್ವರ ಗುಂಪು, ಪಂದ್ಯಾವಳಿಯ ಬ್ರ್ಯಾಂಡಿಂಗ್ ಹೊಂದಿರುವ ಟೀ-ಶರ್ಟ್ಗಳನ್ನು ಧರಿಸಿ ಇಬ್ಬರು ವ್ಯಕ್ತಿಗಳು ಬಸ್ ನಿಲ್ದಾಣದಲ್ಲಿ ಕಾಯುತ್ತಿರುವುದನ್ನು ಗಮನಿಸಿದರು. ಇಬ್ಬರು ಪರಾರಿಯಾಗುವ ಮೊದಲು ಯುವಕರ ಗುಂಪು ಕಾರು ನಿಲ್ಲಿಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications