ದೊಡ್ಡಬಳ್ಳಾಪುರ: ಕ್ರಿಕೆಟ್ ವೈದಾನದಲ್ಲಿ ವಾಹನ ನಿಲುಗಡೆಗೆ ಅಡ್ಡಿಪಡಿಸಿದ ಇಬ್ಬರ ಹತ್ಯೆ!
ಕ್ರಿಕೆಟ್ ಸ್ಥಳದಲ್ಲಿ ವಾಹನ ನಿಲುಗಡೆಗೆ ಅಡ್ಡಿಪಡಿಸಿದ ಇಬ್ಬರನ್ನು ಹತ್ಯೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಬಳಿ ಶುಕ್ರವಾರ ನಡೆದಿದೆ.
ಬೆಂಗಳೂರು ಫೆಬ್ರವರಿ 18: ಕ್ರಿಕೆಟ್ ಮೈದಾನದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ ನಾಲ್ವರ ತಂಡ ಇಬ್ಬರು ಯುವಕರನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ಬಳಿ ಶುಕ್ರವಾರ ನಡೆದಿದೆ. ಮೃತರಿಬ್ಬರೂ ದೊಡ್ಡಬೆಳವಂಗಲ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ದೊಡ್ಡಬೆಳವಂಗಲದ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಇಂಜಿನಿಯರಿಂಗ್ ಪದವೀಧರ ಭರತ್ ಕುಮಾರ್ (23) ಮತ್ತು ಪದವಿ ಪೂರ್ವ ವಿದ್ಯಾರ್ಥಿ ಪ್ರತೀಕ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.

ಹತ್ಯೆಯಲ್ಲಿ ಹುಲಿಕುಂಟೆಯ ವಿನಯ್ ಮತ್ತು ಆತನ ಸ್ನೇಹಿತರ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ಪೊಲೀಸ್ ತಂಡಗಳು ಹಂತಕರ ಪತ್ತೆಗೆ ಪ್ರಯತ್ನಿಸುತ್ತಿವೆ ಎಂದು ಬೆಂಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಶುಕ್ರವಾರ ಸರ್ಕಾರಿ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದಾಗ ನಾಲ್ವರ ಗ್ಯಾಂಗ್ ಕಾರನ್ನು ಚಲಾಯಿಸಿಕೊಂಡು ಬಂದು ನಿಲ್ಲಿಸಿದ್ದರು. ಮೈದಾನದಲ್ಲಿದ್ದವರು ಕಾರು ನಿಲ್ಲಿಸದಂರೆ ಪ್ರತಿಭಟನೆ ನಡೆಸಿದಾಗ ವಾಗ್ವಾದ ನಡೆದು ಕಾರಿಗೆ ಹಾನಿಗೊಳಿಸಲಾಯಿತು. ನಂತರ ಕಾರಿನಲ್ಲಿ ಬಂದ ಗುಂಪು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದರು, ಆದರೆ ಕೆಲವೇ ನಿಮಿಷಗಳಲ್ಲಿ ವರದಿ ಸಲ್ಲಿಸದೆ ಅಲ್ಲಿಂದ ತೆರಳಿದರು.

ಇದೇ ವೇಳೆ ವಾಹನದ ಮೇಲೆ ದಾಳಿ ನಡೆಸಿ ಹಾನಿಗೊಳಿಸಿದ್ದ ಗ್ಯಾಂಗ್ ಪರಾರಿಯಾಗುತ್ತಿರುವುದನ್ನು ಗಮನಿಸಿದ ಪುರುಷರ ನಾಲ್ವರ ಗುಂಪು, ಪಂದ್ಯಾವಳಿಯ ಬ್ರ್ಯಾಂಡಿಂಗ್ ಹೊಂದಿರುವ ಟೀ-ಶರ್ಟ್ಗಳನ್ನು ಧರಿಸಿ ಇಬ್ಬರು ವ್ಯಕ್ತಿಗಳು ಬಸ್ ನಿಲ್ದಾಣದಲ್ಲಿ ಕಾಯುತ್ತಿರುವುದನ್ನು ಗಮನಿಸಿದರು. ಇಬ್ಬರು ಪರಾರಿಯಾಗುವ ಮೊದಲು ಯುವಕರ ಗುಂಪು ಕಾರು ನಿಲ್ಲಿಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications