ಬೆಂಗಳೂರಿನ ಈ ಭಾಗದಲ್ಲಿ ನಾಯಿಗಳ ಹಾವಳಿ ಹೆಚ್ಚಳ!
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿರುವ ಬೆಂಗಳೂರು ಉತ್ತರ ನಗರ ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಿದ್ದು, ಇದರಲ್ಲಿ ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹಾಗೂ ಇ ಖಾತಾ ಸಮಸ್ಯೆಗಳ ಬಗ್ಗೆ ಚರ್ಚೆ ಆಗಿದೆ.
ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ಮತ್ತು ರಸ್ತೆ ದುರಸ್ತಿಗೊಳಿಸಿ: ಫೋನ್-ಇನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಅಹವಾಲುಗಳು ರಸ್ತೆ ಗುಂಡಿಗಳ ಕುರಿತು ಬಂದ ಹಿನ್ನೆಲೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ತಕ್ಷಣ ತುಂಬುವಂತೆ ಹಾಗೂ ದುರಸ್ತಿಯ ಅಗತ್ಯವಿರುವ ಮಾರ್ಗಗಳಲ್ಲಿ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಆಯುಕ್ತರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ನಾಗರಿಕರ ಸುಗಮ ಸಂಚಾರಕ್ಕೆ ಅನುವಾಗುವಂತೆ ರಸ್ತೆಗಳ ನಿರ್ವಹಣೆಗೆ ಕ್ರಮ ವಹಿಸಲು ಸೂಚಿಸಿದ್ದಾರೆ.

ಆದ್ಯತೆ ಮೇರೆಗೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ: ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಲ್ಲಿ ಹಲವು ಕಡೆ ಬೀದಿ ನಾಯಿಗಳ ಹಾವಳಿ ಕುರಿತ ಸಮಸ್ಯೆಗಳು ಹೆಚ್ಚಾಗಿ ಕೇಳಿ ಬಂದಿರುವುದನ್ನು ಗಮನಿಸಿದ ಆಯುಕ್ತರು ನಗರ ಪಾಲಿಕೆಯಲ್ಲಿರುವ ಅಕ್ರಮಣಕಾರಿ ಬೀದಿ ನಾಯಿಗಳನ್ನು ತಕ್ಷಣ ಆದ್ಯತೆ ಮೇರೆಗೆ ಗುರುತಿಸಿ, ಸೂಕ್ತ ಚಿಕಿತ್ಸೆಗೆ ಒಳಪಡಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಸ್ಥಳದಲ್ಲಿದ್ದ ಪಶುಪಾಲನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲುಗಳ ಸಾರಾಂಶ:
ರಸ್ತೆ ನಿರ್ವಹಣೆ, ದುರಸ್ತಿ ಮತ್ತು ರಸ್ತೆ ಗುಂಡಿಗಳು - 20 ದೂರುಗಳು
ತ್ಯಾಜ್ಯ ನಿರ್ವಹಣೆ - 7 ದೂರುಗಳು
ಇ-ಖಾತಾ ಮತ್ತು ಸಂಬಂಧಿತ ಸೇವೆಗಳು - 6 ದೂರುಗಳು
ಆರೋಗ್ಯ ಮತ್ತು ಬೀದಿ ನಾಯಿಗಳ ಸಮಸ್ಯೆ - 6 ದೂರುಗಳು
ಅಪಾಯ ಹಂತದಲ್ಲಿರುವ ಮರಗಳ / ರೆಂಬೆ ಕೊಂಬೆಗಳ ತೆರವು - 3 ದೂರುಗಳು
ಬೀದಿ ದೀಪಗಳ ನಿರ್ವಹಣೆ - 2 ದೂರುಗಳು
ಕಟ್ಟಡ ನಕ್ಷೆ ಸಂಬಂಧಿತ ವಿಷಯಗಳು - 2 ದೂರುಗಳು
ಉದ್ಯಾನವನಗಳ ನಿರ್ವಹಣೆ - 1 ದೂರು
ಟ್ರಾಫಿಕ್ ಸಮಸ್ಯೆ - 1 ದೂರು
ಅಲ್ಲದೆ, ಉತ್ತರ ನಗರ ಪಾಲಿಕೆ ವ್ಯಾಪ್ತಿಗೆ ಒಳಪಡದ ಇತರೆ ನಗರ ಪಾಲಿಕೆಗಳಿಗೆ ಸಂಬಂಧಿಸಿದ 3 ಅಹವಾಲುಗಳು ಮತ್ತು ಟ್ರಾಫಿಕ್ ಮತ್ತು ಜಲ ಮಂಡಳಿಗೆ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ 3 ಅಹವಾಲುಗಳು ಬಂದಿದ್ದು, ಇವುಗಳನ್ನು ಸಂಬಂಧಪಟ್ಟ ನಗರ ಪಾಲಿಕೆಗಳಿಗೆ ಹಾಗೂ ಸಂಬಂಧಿಸಿದ ಇತರೆ ಇಲಾಖೆಗಳಿಗೆ ರವಾನಿಸಲಾಗುವುದು ಎಂದು ಹೇಳಲಾಗಿದೆ. ಈ ದಿನದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 39 ಕರೆಗಳನ್ನು ಸ್ವೀಕರಿಸಿದ್ದು ಒಟ್ಟಾರೆಯಾಗಿ 54 ಅಹವಾಲುಗಳನ್ನು ಸ್ವೀಕರಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications