ಬೆಂಗಳೂರಿಗೆ ರೈಲು ಮೂಲಕ ನಾಯಿ ಮಾಂಸ ಸರಬರಾಜು: ಮಾಂಸ ಪರೀಕ್ಷೆಗೆ ರವಾನೆ!
ಬೆಂಗಳೂರು ಜುಲೈ 27: ಬೆಂಗಳೂರು ನಗರಕ್ಕೆ ರೈಲುಗಳ ಮೂಲಕ ಪ್ರಾಣಿಗಳ ಮಾಂಸ ಸರಬರಾಜು ಆಗುತ್ತಿರುವ ಕುರಿತು ಬಿತ್ತರವಾಗುತ್ತಿರುವ ಸುದ್ದಿಗಳ ಕುರಿತ ಸ್ಪಷ್ಟನೆ ಇಲ್ಲಿದೆ.
ಈ ಕುರಿತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು & ಪೊಲೀಸರು ತಪಾಸಣೆ ನಡೆಸಿದ್ದು ರಾಜಸ್ಥಾನದಿಂದ ಬಂದಿರುವ ಪಾರ್ಸೆಲ್ ಗಳಲ್ಲಿ ಪ್ರಾಣಿಗಳ ಮಾಂಸವಿರುವುದು ಕಂಡುಬಂದಿದೆ. ಯಾವ ಪ್ರಾಣಿಯ ಮಾಂಸ ಎಂದು ಖಚಿತಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ಪಾರ್ಸೆಲ್ ಕಳುಹಿಸಿದವರ & ಸ್ವೀಕರಿಸಿದವರ ವಿವರ ಸಂಗ್ರಹಿಸಲಾಗಿದ್ದು ಪ್ರಯೋಗಾಲಯದ ಪರೀಕ್ಷಾ ಫಲಿತಾಂಶ ಬಂದ ನಂತರ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅನಗತ್ಯ ಗೊಂದಲಗಳಿಗೆ ಒಳಗಾಗಬಾರದು ಎಂದು ತಿಳಿಸಲಾಗಿದೆ.
ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಬಿತ್ತರವಾಗುತ್ತಿವೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಲ ಕ್ರಮಗಳನ್ನು ವಹಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೊಲೀಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ವ್ಯಾಪ್ತಿಯ ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂದರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಒಟ್ಟು 90 ಸಂಖ್ಯೆಯ ಪಾರ್ಸೆಲ್ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಯನ್ನು ಸಂಗ್ರಹಿಸಿ, ಆಹಾರ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ.
ವಿಶ್ಲೇಷಣಾ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ. ಪಾರ್ಸೆಗಳನ್ನು ಕಳುಹಿಸಿದವರ ಮತ್ತು ಸ್ವೀಕರಿಸಿದವರು ಎಫ್ಎಸ್ಎಸ್ಎಐ ಪರವಾನಗೆ ಸೇರಿಂದತೆ ವಿವರವಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಲೋಪಲೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮಜರುಗಿಸಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications