ಬೀದಿನಾಯಿಗಳ ಹಾವಳಿಗೆ ಗುಂಡೂರು ಮಹಿಳೆ ಬಲಿ
ಬೆಂಗಳೂರು, ಅಕ್ಟೋಬರ್, 30 : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿಗಳ ದಾಳಿಯಿಂದ ಮಹಿಳೆಯೊಬ್ಬಳು ತಮ್ಮ ಪ್ರಾಣ ಕಳೆದುಕೊಂಡ ದುರ್ಘಟನೆ ಬೆಂಗಳೂರು ಹೊರವಲಯದ ಗುಂಡೂರಿನಲ್ಲಿ ಗುರುವಾರ ನಡೆದಿದೆ.
ಗುಂಡೂರು ನಿವಾಸಿ ರತ್ನಮ್ಮ ಎಂಬಾಕೆ ನಾಯಿಯ ಉಪಟಳಕ್ಕೆ ಬಲಿಯಾದ ಮಹಿಳೆ. ಕಸ ವಿಲೇವಾರಿ ಘಟಕದ ಬಳಿ ಮೇಯಿಸಲು ಬಿಟ್ಟ ಎಮ್ಮೆ ಬಿಡಿಸಿಕೊಂಡು ಬರಲು ಹೋದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.[ಅಮ್ಮಾ' ಎಂದು ಬೊಗಳುವ ನಾಯಿಯನ್ನು ಬಲ್ಲಿರಾ?]

ರತ್ನಮ್ಮ ಎಮ್ಮೆ ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದಳು. ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯ ಬಳಿ ಜಾನುವಾರುಗಳನ್ನು ಮೇಯಿಸಲು ಬಿಟ್ಟಿದ್ದಾಳೆ. ಸಂಜೆ ವೇಳೆ ದನ, ಎಮ್ಮೆಗಳನ್ನು ಬಿಡಿಸಿಕೊಂಡು ಬರುವ ವೇಳೆ ನಾಯಿಗಳ ಗುಂಪೊಂದು ಹಿಂದಿನಿಂದ ಅಟ್ಟಿಸಿಕೊಂಡು ಬಂದಿದೆ.
ನಾಯಿಗಳು ಅಟ್ಟಿಸಿಕೊಂಡು ಬಂದ ಸಂದರ್ಭದಲ್ಲಿ ಎಮ್ಮೆಗೆ ಕಟ್ಟಿದ ಹಗ್ಗ ರತ್ನಮ್ಮನ ಕಾಲಿಗೆ ತಾಕಿದೆ. ಆಗ ಆಕೆ ಮುಗ್ಗರಿಸಿ ಬಿದ್ದಿದ್ದಾಳೆ. ಆಗ ನಾಯಿಗಳು ಆಕೆಯ ಮೇಲೆ ಏಕಾಏಕಿ ಮೇಲೆರಗಿ ಕಚ್ಚಿ ಬಿಟ್ಟಿವೆ. ಇದರ ನೋವನ್ನು ತಾಳಲಾರದೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಆಗಮಿಸಿದ ಆವಲಹಳ್ಳಿ ಪೊಲೀಸರು ಮೃತದೇಹವನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ನಗರದಲ್ಲಿ ದಿನಗಳೆದಂತೆ ಬೀದಿ ನಾಯಿಗಳ ಸಂಖ್ಯೆ ಅಧಿಕವಾಗುತ್ತಿದ್ದು, ಬಿಬಿಎಂಪಿ ನಾಯಿಗಳ ಹಾವಳಿ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡು, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗುಂಡೂರು ನಿವಾಸಿಗಳು ಒತ್ತಾಯಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications