ದೊಮ್ಮಲೂರು ಬಿಡಿಎ ಕಾಂಪ್ಲೆಕ್ಸ್ ಶೌಚಾಲಯಕ್ಕೆ ಬಾಗಿಲುಗಳೇ ಇಲ್ಲ!
ಬೆಂಗಳೂರು, ಸೆಪ್ಟೆಂಬರ್ 01: ವರ್ಷಗಳಿಂದ ನೀರನ್ನೇ ಕಾಣದ ಶೌಚಾಲಯ, ಆ ಗಬ್ಬು ಶೌಚಾಲಯಕ್ಕೆ ಬಾಗಿಲುಗಳೂ ಇಲ್ಲ, ಶೌಚಾಲಯಕ್ಕೆ ಹೋಗುವ ದಾರಿಯಲ್ಲಿ ಬೆಳೆದ ಕಳೆ ಗಿಡಗಳು ಇದು ಯಾವುದೋ ಹಳೆ ಕಟ್ಟಡದ ವರ್ಷಣೆಯಲ್ಲ. ದೊಮ್ಮಲೂರು ಬಿಡಿಎ ಕಾಂಪ್ಲೆಕ್ಸ್ನ ಸ್ಥಿತಿ.
ದೊಮ್ಮಲೂರಿನ ಬಿಡಿಎ ಕಾಂಪ್ಲೆಕ್ಸ್ನ ಶೌಚಾಲಯ ಅತಿಧಾರುಣ ಸ್ಥಿತಿಯಲ್ಲಿದೆ. ಮೂಗು ಮುಚ್ಚಿಕೊಂಡೂ ಒಳ ಹೋಗಲು ಅಸಾಧ್ಯವಾದ ಪರಿಸ್ಥಿತಿ. ಹಾಳು ಸುರಿದಿರುವ ಈ ಕಟ್ಟಡಕ್ಕೆ ಕಾವಲುಗಾರರೂ ಯಾರೂ ಇಲ್ಲ.
ಈ ಬಾಗಿಲಿಲ್ಲದ ಶೌಚಾಲಯವನ್ನೇ ಮಹಿಳೆಯರು ಬಳಸಬಹುದಾದ ಪರಿಸ್ಥಿತಿ ಇಲ್ಲಿದೆ. ಬೆಂಗಳೂರನ್ನು ಅಭಿವೃದ್ಧಿ ಮಾಡಲೆಂದು ಸ್ಥಾಪಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಟ್ಟಡದಲ್ಲಿಯೇ ಈ ಗತಿಯಾದರೆ ಇವರು ಬೆಂಗಳೂರನ್ನು ಉದ್ಧಾರ ಮಾಡುವುದಾದರೂ ಹೇಗೆ?

'ಒನ್ಇಂಡಿಯಾ ಕನ್ನಡ' ಓದುಗರೊಬ್ಬರು ಈ ವಿಷಯವನ್ನು ನಮ್ಮ ಸುದ್ದಿಮನೆಗೆ ತಲುಪಿಸಿದ್ದಾರೆ. 'ಅಧಿಕಾರ ಕುರ್ಚಿ ಉಳಿಸುವುದೆ ಅವರ ದೊಡ್ಡ ಸಾಧನೆ ಯಾವ ರಾಜಕೀಯ ಪಕ್ಷಗಳು ಅವರ ಸ್ವಾರ್ಥ ಬಿಟ್ಟು ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕೊಡುವ ಪದ್ಧತಿ ಇಲ್ಲ' ಎಂದು ಆಕ್ರೋಶವನ್ನೂ ಹೊರಹಾಕಿದ್ದಾರೆ.
ತನ್ನನ್ನು ತಾನು ಬೆಂಗಳೂರಿನ ಉದ್ದಾರಕ ಎಂದು ಕರೆದುಕೊಳ್ಳುವ ಬಿಡಿಎ ತನ್ನದೇ ಕಾಂಪ್ಲೆಕ್ಸ್ ಬಗ್ಗೆ ಗಮನಿಸಿಲ್ಲ. ಇನ್ನಾದರೂ ಬಿಡಿಎ ಕಣ್ಣು ತೆರೆದುಕೊಳ್ಳಲಿ. ಸಾರ್ವಜನಿಕರ ಆಕ್ರೋಶ ಕಟ್ಟೆ ಒಡೆಯುವ ಮುನ್ನಾ ಎಚ್ಚೆತ್ತುಕೊಳ್ಳಲಿ ಎಂಬುದೇ ನಮ್ಮ ಆಶಯ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications