ಯಾತ್ರೆಯೇ ತಂತ್ರವಲ್ಲ, ನಮ್ಮದು ರಣತಂತ್ರ ಬೇರೆ ಇದೆ: ಪರಮೇಶ್ವರ್
ಬೆಂಗಳೂರು, ಡಿಸೆಂಬರ್ 1 : ಬಿಜೆಪಿಯವರು ಯಾತ್ರೆ ಮಾಡಿದಾಕ್ಷಣ ನಾವೇಕೆ ಮಾಡಬೇಕು ಎಂದು 2018 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಯಾತ್ರೆ ಬಗ್ಗೆ ಇರುವ ಗೊಂದಲಕ್ಕೆ ತಾತ್ಕಾಲಿಕ ತೆರೆ ಎಳೆದಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಯಾವುದೇ ರೀತಿಯ ಗೊಂದಲವಿಲ್ಲ ಬಿಜೆಪಿಯವರು ಯಾತ್ರೆ ಮಾಡಿದರೆ ನಾವೇಕೆ ಮಾಡಬೇಕು ಎಂದಿದ್ದಾರೆ. ಯಾತ್ರೆ ಮಾಡಿದಾಕ್ಷಣ ಚುನಾವಣೆ ತಯಾರಿ ಅಂತ ಏನಿಲ್ಲ. ನಮಗೆ ನಮ್ಮದೇ ಆದ ರಣತಂತ್ರವಿದೆ.

ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. ನಾವು ಯಾರನ್ನೂ ಹಿಂಬಾಲಿಸುವುದಿಲ್ಲ. ಸಿದ್ದರಾಮಯ್ಯ ನಾವೆಲ್ಲರೂ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಮಾಜಿ ಸಂಸದೆ ರಮ್ಯಾ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಎಲ್ಲಿಯೂ ಹೇಳಿಲ್ಲ. ನಾವು ಕೂಡ ಎಲ್ಲೂ ಹೇಳಿಲ್ಲ. ರಮ್ಯಾ ಯಾರ ಸಂಪರ್ಕದಲ್ಲಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಆದರೆ ನಾನು ಅವರ ಹುಟ್ಟುಹಬ್ಬದ ದಿನ ಕರೆ ಮಾಡಿ ಶುಭಾಶಯ ತಿಳಿಸಿದ್ದೇನೆ ಎಂದು ಹೇಳಿದರು.












Click it and Unblock the Notifications