ಬೆಂಗಳೂರಿನಲ್ಲಿ ಮುರುಘಾಶ್ರೀಗಳ ಅರ್ಥಪೂರ್ಣ ನಾಗರಪಂಚಮಿ
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಿದ ಶಿವಮೂರ್ತಿ ಮುರುಘಾ ಶರಣರು.
ಬೆಂಗಳೂರು, ಜುಲೈ 27: ನಾಗರ ಪಂಚಮಿಯಂದು ಹುತ್ತಕ್ಕೆ ಹಾಲು ಎರೆಯುವ ಬದಲು ಅದೇ ಹಾಲನ್ನು ಮಕ್ಕಳಿಗೆ, ರೋಗಿಗಳಿಗೆ ನೀಡಿದರೆ ಅದೇ ಸಾರ್ಥಕವಾದ ಪೂಜೆ ಎಂದು ಮುರುಘಾ ಶರಣರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮಲ್ಲಿ ತಲತಲಾಂತರಗಳಿಂದಲೂ ನಾಗರ ಪಂಚಮಿಯಂದು ಹುತ್ತಕ್ಕೆ, ನಾಗರ ಕಟ್ಟೆಗಳಿಗೆ ಹಾಲೆರೆಯುವ ಪದ್ಧತಿಯಿದೆ. ಅಸಲಿಗೆ ಹುತ್ತದಲ್ಲಿರುವ ಹಾವು ಹಾಲು ಕುಡಿಯುವುದಿಲ್ಲ. ಇನ್ನು, ನಾಗರ ಕಟ್ಟೆಗೆ ಸುರಿವ ಹಾಲು ಚರಂಡಿ ಹೋಗುತ್ತದೆ. ಇದು ಮೌಢ್ಯ.

ಹಾಗೆ, ವ್ಯರ್ಥಗೊಳಿಸುವ ಹಾಲನ್ನು ಮಕ್ಕಳಿಗೆ, ರೋಗಿಗಳಿಗೆ ಅಥವಾ ಹಾಲಿನ ಅವಶ್ಯಕತೆಯಿರುವ ದುರ್ಬಲರಿಗೆ ಕೊಟ್ಟರೆ ಅವರಿಗೆ ಅದು ಅನುಕೂಲವಾಗುತ್ತದೆ. ನಾಗರ ಪಂಚಮಿ ಆಚರಣೆಯನ್ನು ಅರ್ಥಗರ್ಭಿತವಾಗಿಸಿದಂತಾಗುತ್ತದೆ.
ನಾನು ಕಳೆದ 15 ವರ್ಷಗಳಿಂದಲೂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನಾಗರ ಪಂಚಮಿಯಂದು ಹಾಲು, ಹಣ್ಣು ವಿತರಿಸುವ ಅಭ್ಯಾಸವನ್ನು ರೂಢಿಸಿಕೊಂಡಿದ್ದೇನೆ ಎಂದು ಶರಣರು ತಿಳಿಸಿದರು.

ಆಸ್ಪತ್ರೆಯಲ್ಲಿ ಹೀಗೆ ರೋಗಿಗಳಿಗೆ, ಮಕ್ಕಳಿಗೆ ಹಾಲು ವಿತರಿಸಿ ಶತಮಾನಗಳ ಮೌಢ್ಯತೆಯಿಂದ ಹೊರಬರಬೇಕು ಎಂದು ಶರಣರು ಇದೇ ವೇಳೆ ಕರೆ ನೀಡಿದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ










Click it and Unblock the Notifications