ಸನ್ನಿ ಲಿಯೋನ್ ಹೊರತುಪಡಿಸಿ ಮಾನ್ಯತಾದಲ್ಲಿ ಎಲ್ಲಾ ಕಾರ್ಯಕ್ರಮಗಳು ರದ್ದು
ಬೆಂಗಳೂರು, ನವೆಂಬರ್ 3: ಬೆಂಗಳೂರಿನ ಮಾನ್ಯತಾ ಟೆಕ್ಪಾರ್ಕ್ ಬಳಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ವಾಹನ ದಟ್ಟಣೆ ಎದುರಾಗಿದೆ.
ಒಂದೊಮ್ಮೆ ಕಾರ್ಯಕ್ರಮಗಳನ್ನು ಮಾಡಿದ್ದೇ ಆದರೆ ಟ್ರಾಫಿಕ್ ನಿಭಾಯಿಸುವುದು ಕಷ್ಟವಾಗುತ್ತದೆ. ಹಾಗಾಗಿ ಮಾನ್ಯತಾ ಟೆಕ್ ಪಾರ್ಕ್ ಬಳಿ ಸದ್ಯಕ್ಕೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಹೆಬ್ಬಾಳದಿಂದ ಹೆಣ್ಣೂರುವರೆಗೆ ಸುಮಾರು 2.7 ಕಿ.ಮೀ ದೂರದವರೆಗೆ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಈ ಪ್ರದೇಶದಲ್ಲಿ ಯಾವ ಮೆಗಾ ಇವೆಂಟ್ ಗಳನ್ನು ಆಯೋಜನೆ ಮಾಡುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಪೀಕ್ ಅವಧಿಯಲ್ಲಿ ಹೆಬ್ಬಾಳ ಫ್ಲೈಓವರ್ ದಾಟಲು ಸುಮಾರು 50 ನಿಮಿಷ ಸಮಯ ಬೇಕಾಗುತ್ತದೆ.
ಅಲ್ಲಿರುವ ಮಾನ್ಫೋ ಕನ್ವೆಂಷನ್ ಸೆಂಟರ್ನಲ್ಲಿ ಕೂಡ ಕಾರ್ಯಕ್ರಮಗಳು ನಡೆಯುವುದರಿಂದ ಕಾರು, ಬೈಕ್ ಇನ್ನಿತರೆ ವಾಹನಗಳ ಸಂಖ್ಯೆ ಆ ರಸ್ತೆಯಲ್ಲಿ ಶೇ.100ರಷ್ಟು ಹೆಚ್ಚಾಗಿದೆ ಎಂದು ಮಾನ್ಯತಾ ರಡಸಿಡೆನ್ಸಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಯರಾಮ್ ತಿಳಿಸಿದ್ದಾರೆ.

15 ನಿಮಿಷದ ಹಾದಿ 45 ನಿಮಿಷವಾದರೂ ತಲುಪಲು ಸಾಧ್ಯವಿಲ್ಲ
ಈ ಮೊದಲು 15 ನಿಮಿಷಗಳಲ್ಲಿ ತಲುಪುತ್ತಿದ್ದ ಪ್ರದೇಶವನ್ನು ಕ್ರಮಿಸಲು ಇದೀಗ 45ರಿಂದ 1 ಗಂಟೆ ಸಮಯ ಬೇಕಾಗಿದೆ. ಬಿಬಿಎಂಪಿಯು ಆಗಸ್ಟ್ 27ರಿಂದಲೇ 2.7 ಕಿ.ಮೀ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿತ್ತು. ನವೆಂಬರ್ 11ರೊಳಗೆ ಕಾಮಗಾರಿ ಮುಗಿಯುತ್ತದೆ ಎಂದು ಹೇಳಲಾಗಿತ್ತು. ಆದರೆ ಏಕಾಏಕಿ ಯೋಜನೆ ಬದಲಾಗಿದೆ.

ವೈಟ್ಟಾಪಿಂಗ್ ಮುಗಿಯುವವರೆಗೆ ಕಾರ್ಯಕ್ರಮಗಳು ರದ್ದು
ಹೆಬ್ಬಾಳದಿಂದ ಹೆಣ್ಣೂರು ವರೆಗೆ 2.7ಕಿ.ಮೀ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾರ್ಯ ನಡೆಯುತ್ತಿದೆ. ಈ ಕಾಮಗಾರಿಗಳು ಮುಗಿಯುವವರೆಗೂ ಮಾನ್ಫೋ ಕನ್ವೆಂಷನ್ ಸೆಂಟರ್ ಹಾಗೂ ಇನ್ನಿತರೆ ಕನ್ವೆಂಷನ್ ಸೆಂಟರ್ಗಳಲ್ಲಿ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸೂಚಿಸಲಾಗಿದೆ.

2 ಗಂಟೆ ಟ್ರಾಫಿಕ್ ಜಾಮ್
ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಎರಡು ಕನ್ವೆಂಷನ್ ಸೆಂಟರ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಕಾರಣ ಸುಮಾರು 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

ಸನ್ನಿ ಲಿಯೋನಿ ಕಾರ್ಯಕ್ರಮ ಇರುತ್ತಾ?
ಸನ್ನಿ ಲಿಯೋನ್ ಕಾರ್ಯಕ್ರಮದ ದಿನವೂ ಕೂಡ ಇದಕ್ಕಿಂತ ಹೆಚ್ಚು ಟ್ರಾಫಿಕ್ ಇರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ತಿಂಗಳುಗಳ ಮೊದಲೇ ನಿಯೋಜಿಸಲಾಗಿದೆ ಅದನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications