ಎಲಿವೇಟೆಡ್ ಕಾರಿಡಾರ್ ಸುತ್ತ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇಲ್ಲ
ಬೆಂಗಳೂರು, ಫೆಬ್ರವರಿ 11: ಎಲಿವೇಟೆಡ್ ಕಾರಿಡಾರ್ ಮಾರ್ಗದಲ್ಲಿ ಸದ್ಯಕ್ಕೆ ಯಾವುದೇ ಹೊಸ ಕಟ್ಟಡ ನಿರ್ಮಾಣಕ್ಕೆ ಒಪ್ಪಿಗೆ ನೀಡಬೇಡಿ ಎಂದು ಪಿಡಬ್ಲ್ಯೂಡಿ ಇಲಾಖೆಯು ಬಿಬಿಎಂಪಿಗೆ ಸೂಚನೆ ನೀಡಿದೆ.
ಈ ಆದೇಶವು ಫೆ.2ರಿಂದ ಅನ್ವಯವಾಗಿದೆ. ವಿವಾದಾತ್ಮಕ ಕಾರಿಡಾರ್ ನಿರ್ಮಾಣದ ಅಲೈನ್ಮೆಂಟ್ ಅಂತಿಮವಾಗಬೇಕಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ಕೆಎಸ್ಡಿಸಿಎಲ್ ಮೊದಲ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ಬ್ಯಾಪ್ಟಿಸ್ಟ್ ಆಸ್ಪತ್ರೆ, ಹೆಬ್ಬಾಳ, ಮೂಲಕ ಸಿಲ್ಕ್ ಬೋರ್ಡ್ ಜಂಕ್ಷನ್ ಒಟ್ಟು 23 ಕಿ.ಮೀ ಕಾಮಗಾರಿ ಇದಾಗಿದೆ.
ಬೆಂಗಳೂರಲ್ಲಿ ಷಟ್ಪಥಗಳ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಸಿದ್ಧತೆ
ಈ ಕಾರಿಡಾರ್ ಮೇಖ್ರಿ ವೃತ್ತ, ಜಯಮಹಲ್, ಕಂಟೋನ್ಮೆಂಟ್ ರೈಲು ನಿಲ್ದಾಣ, ಬಾಳೆಕುಂದ್ರಿ ವೃತ್ತ, ಚಿನ್ನಸ್ವಾಮಿ ಸ್ಟೇಡಿಯಂ , ರೆಸಿಡೆನ್ಸಿ ರಸ್ತೆ, ರಿಚ್ಮಂಡ್ ವೃತ್ತ, ಶಾಂತಿನಗರ ಡಬಲ್ ರೋಡ್, ಮೂಲಕ ಹೊಸೂರು ರಸ್ತೆಗೆ ತಲುಪಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಯೋಜನೆ ಅನುಷ್ಠಾನ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ಪಿಡಬ್ಲ್ಯೂಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ತಿಳಿಸಿದ್ದಾರೆ.