ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭವಿಷ್ಯದ ರಾಜ್ಯ ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ನವೆಂಬರ್ 09:ಭವಿಷ್ಯದ ರಾಜ್ಯ ನಾಯಕತ್ವದ ಬಗ್ಗೆ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂದು ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನಾಯಕರು ಮತ್ತು ಕಾರ್ಯಕರ್ತರಿಗೆ ಒತ್ತಾಯಿಸಿದೆ.

ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರದಲ್ಲಿ ಯಾರು ಮುಖ್ಯಸ್ಥರಾಗುತ್ತಾರೆ ಎಂಬ ಬಗ್ಗೆ ಒಬ್ಬೊಬ್ಬ ನಾಯಕರು ಒಂದೊಂದು ಬಗೆಯ ಹೇಳಿಕೆ ನೀಡಿದ್ದ ನಂತರ ಇದೀಗ ಪಕ್ಷದ ಭವಿಷ್ಯದ ರಾಜ್ಯ ನಾಯಕತ್ವದ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಡಿ ಎಂದು ಹೇಳಲಾಗಿದೆ.

ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪಕ್ಷವನ್ನು ಸಂಘಟಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಮತ್ತು ನಮ್ಮ ರಾಜ್ಯದ ಹಿತದೃಷ್ಟಿಯಿಂದ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಕೆಲಸ ಮಾಡಿದರೆ ಉತ್ತಮ.

Don’t Comment On Future Leadership: Karnataka Congress

ಮಾಜಿ ಸಚಿವ ಮತ್ತು ಶಾಸಕ ಜಮೀರ್ ಅಹಮದ್ ಖಾನ್ ಇತ್ತೀಚೆಗೆ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದರೆ, ಅವರ ಪಕ್ಷದ ಕೆಲವು ಸಹೋದ್ಯೋಗಿಗಳಾದ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕಿ ಸೌಮ್ಯಾ ರೆಡ್ಡಿ, ಮತ್ತು ಹನುಮಂತರಯಪ್ಪ ಅವರು ಶಿವಕುಮಾರ್ ಉನ್ನತ ಹುದ್ದೆಯನ್ನು ಅಲಂಕರಿಸುತ್ತಾರೆ ಎಂದು ಹೇಳಿದ್ದರು.

ನಾಯಕತ್ವದ ಸಂಬಂಧಿತ ಪ್ರಶ್ನೆಯನ್ನು ಆ ಪ್ರಶ್ನೆ ಉದ್ಭವಿಸಿದಾಗ ಕೇಳುವುದು ಜಾಣತನ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅವರ ಬೆಂಬಲಿಗರು ಹೇಳಿಕೊಳ್ಳುತ್ತಿರುವ ಹಿನ್ನೆಲೆ ಈ ಸೂಚನೆ ಗಮನ ಸೆಳೆದಿದೆ.

Recommended Video

Muniratna vs Kusuma : RR Nagar ಕಣದಲ್ಲಿ ಗೆಲ್ಲೋದು ಯಾರು, ಎರಡೂ ಪಕ್ಷಗಳ ಜಿದ್ದಾಜಿದ್ದಿ | Oneindia Kannada

ನವೆಂಬರ್ 5 ರಂದು ನಡೆದ ಸಭೆಯಲ್ಲಿ, ಕೆಪಿಸಿಸಿ ಶಿಸ್ತು ಸಮಿತಿ ಶಾಸಕಾಂಗ ಪಕ್ಷದ ಭವಿಷ್ಯದ ನಾಯಕತ್ವದ ಪ್ರಶ್ನೆಯ ಬಗ್ಗೆ ಪಕ್ಷದ ಮುಖಂಡರು ವ್ಯಕ್ತಪಡಿಸುತ್ತಿರುವ ವಿಭಿನ್ನ ಅಭಿಪ್ರಾಯಗಳನ್ನು ಕಳವಳದಿಂದ ಆಲಿಸಿದೆ ಎಂದು ಸಮಿತಿ ಅಧ್ಯಕ್ಷ ಕೆ ರಹಮಾನ್ ಖಾನ್ ಹೇಳಿದರು.

English summary
The disciplinary committee of the State Congress has urged its leaders and workers to desist from making public statements about the party’s future state leadership after some of them aired divergent views on who would head the government if the party came to power
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X