ಬೆಂಗಳೂರು ವಿಸ್ತರಣೆ ಮಾಡಬೇಡಿ, ಮಧ್ಯ ಕರ್ನಾಟಕಕ್ಕೆ ಆದ್ಯತೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
ಬೆಂಗಳೂರು, ಜುಲೈ 12: ಸಮಸಮಾಜ ನಿರ್ಮಾಣದ ಸದುದ್ದೇಶ ಹೊಂದಿರುವುದಾಗಿ ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಂತಹ ಅಸಮಾನ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಾರದು.
ಹೀಗೊಂದು ಆಗ್ರವನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ. ಪ್ರಾದೇಶಿಕ ಅಸಮಾನತೆ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದ ಜನರ ತೆರಿಗೆ ಹಣವನ್ನು ಕೇವಲ ಬೆಂಗಳೂರನ್ನು ವಿಸ್ತರಿಸಲು ವಿನಿಯೋಗಿಸಿದರೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ಜನರು ಏನು ಮಾಡಬೇಕು? ಈಗಾಗಲೇ ಹೆಚ್ಚಿನ ಯುವಕರು ಉದ್ಯೋಗಕ್ಕಾಗಿ ದೂರದ ಬೆಂಗಳೂರನ್ನು ಆಯ್ಕೆ ಮಾಡುವ ಬದಲು ಹೈದರಾಬಾದ್, ಪುಣೆ, ಮುಂಬೈ, ಪಣಜಿಯಂತಹ ನೆರೆ ರಾಜ್ಯದ ನಗರಗಳನ್ನು ಆಯ್ಕೆ ಮಾಡುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಿಂದ ಯುವಕರೆಲ್ಲ ಬೇರೆ ರಾಜ್ಯಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಧ್ಯ ಕರ್ನಾಟಕಕ್ಕೆ ಪ್ರಾಶಸ್ತ್ಯ ನೀಡಿ: ಎಎಪಿ ಆಗ್ರಹ
ನೂತನ ವಿಮಾನ ನಿಲ್ದಾಣವನ್ನು ತುಮಕೂರು ಅಥವಾ ರಾಮನಗರದಲ್ಲಿ ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದೂ ಕೂಡ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯ ಭಾಗವಾಗಿದೆ. ಮಧ್ಯ ಕರ್ನಾಟಕಕ್ಕೆ ಪ್ರಾಶಸ್ತ್ಯ ನೀಡಬೇಕಿದೆ. ನೂತನ ವಿಮಾನ ನಿಲ್ದಾಣವು ಮಧ್ಯ ಕರ್ನಾಟಕ ಭಾಗದಲ್ಲಿ ನಿರ್ಮಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.
ಡಿಕೆಶಿ ಇಡಿ ರಾಜ್ಯಕ್ಕೆ ಡಿಸಿಎಂ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಡೀ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಕೇವಲ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿಗಳಿಗೆ ಸೀಮಿತಗೊಂಡ ಉಪಮುಖ್ಯಮಂತ್ರಿ ಆಗಿದ್ದಾರೆಯೋ ಎಂಬ ಅನುಮಾನ ಮೂಡುತ್ತಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಹೊರಟಿರುವ ನಿರ್ಧಾರ ಆಕ್ಷೇಪಾರ್ಹವಾಗಿದೆ. ಕೇವಲ ಹೆಸರು ಬದಲಿಸುವುದರಿಂದ ಅಭಿವೃದ್ಧಿಯಾಗುವುದಿದ್ದರೆ ಕರ್ನಾಟಕದ ಹೆಸರನ್ನೇ ಬೆಂಗಳೂರು ಎಂದು ಮಾಡುವುದು ಒಳಿತಲ್ಲವೇ? ಆಗ ಇಡೀ ಕರ್ನಾಟಕವೇ ಅಭಿವೃದ್ಧಿಯಾದಂತೆ ಆಗುತ್ತದೆಯಲ್ಲವೇ?
ರಾಮನಗರ ಹೆಸರು ಬದಲಾವಣಗೆ ಎಎಪಿ ಗರಂ
ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುವುದು ಕೇವಲ ಜಿಲ್ಲೆಯ ಹೆಸರು ಬದಲಾವಣೆಯಾಗಿಲ್ಲ, ಕರಾಳ ರಿಯಲ್ ಎಸ್ಟೇಟ್ ದಂಧೆಗೆ ಪರವಾನಗಿ ಪಡೆಯುವ ಪ್ರಸ್ತಾವನೆಯಾಗಿದೆ ಎಂದು ಅವರು ಕಿಡಿ ಕಾರಿದರು.
ರಾಮನಗರವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿ, ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ ಕೆಲವೇ ಕೆಲವು ಭೂಮಾಲೀಕರಿಗೆ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಿಲ್ಲ. ತಮ್ಮ ಆಧಾರ್ ಸೇರಿದಂತೆ ಮತ್ತಿತರ ದಾಖಲೆ ಪತ್ರಗಳಲ್ಲಿ ಜಿಲ್ಲೆ ಹೆಸರನ್ನು ತಿದ್ದಿಸುವ ಸಲುವಾಗಿ ಸರ್ಕಾರಿ ಕಚೇರಿಗಳನ್ನು ಅಲೆಯಬೇಕಾದ ಪರಿಸ್ಥಿತಿ ಬಂದೊದಗುತ್ತದೆ.
ಹೊಸ ಕೈಗಾರಿಕೆ ಸ್ಥಾಪಿಸಿ ಯುವಕರಿಗೆ ಉದ್ಯೋಗ ನೀಡಿ
ನಿಜಕ್ಕೂ ಅಭಿವೃದ್ಧಿಪಡಿಸುವುದಿದ್ದರೆ, ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಿದ್ದರೆ, ಜನಸಾಮಾನ್ಯರಿಗೆ ನೆರವಾಗುವುದಿದ್ದರೆ ಹುಬ್ಬಳ್ಳಿ-ಧಾರವಡ ಅವಳಿ ನಗರಗಳಂತೆ ರಾಮನಗರ-ಚನ್ನಪಟ್ಟಣವನ್ನು ಅಭಿವೃದ್ಧಿ ಪಡಿಸಬಹುದು.
ಆದರೆ ಆ ಭಾಗದ ಜನರನ್ನು ಉದ್ಧರಿಸುವ ಯಾವ ಯೋಚನೆಯೂ ಶಿವಕುಮಾರ್ ಅವರಿಗೆ ಇದ್ದಂತಿಲ್ಲ. ಅಲ್ಲಿನ ಭೂಮಾಲೀಕರಿಗೆ ಲಾಭವನ್ನು ಮಾಡಿಕೊಡುವ ಮೂಲಕ ತನ್ನ ರಾಜಕೀಯ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವ ತಂತ್ರವನ್ನು ಹೆಣೆದಿದ್ದಾರೆ. ಈ ಭಾಗವು ಹೆಚ್ಚಿನ ರಾಜಕಾರಣಿಗಳ ಲ್ಯಾಂಡ್ ಬ್ಯಾಂಕ್ ಆಗಿರುವುದರಿಂದ ಅವರಿಗೆ ಅನುಕೂಲ ಮಾಡಿಕೊಟ್ಟರೆ ತನ್ನ ಭವಿಷ್ಯದ ರಾಜಕೀಯ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳಬಹುದು ಎಂಬ ಕೇಡು ಆಲೋಚನೆ ಹೊಂದಿದ್ದಾರೆ.
ರಾಮನಗರ, ಚನ್ನಪಟ್ಟಣಗಳನ್ನು ಬೆಂಗಳೂರಿಗೆ ಸೇರಿಸುವ ಪ್ರಸ್ತಾವವನ್ನು ತಿರಸ್ಕರಿಸಬೇಕು. ಹುಬ್ಬಳ್ಳಿ-ಧಾರವಾಡ ಮಾದರಿಯಲ್ಲಿ ಉಭಯ ನಗರಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications