ನೈಸ್ರೋಡ್ ಸುತ್ತ ಇರುವ ಅಕ್ರಮ ಬಡಾವಣೆಗಳ ಬಗ್ಗೆ ಎಚ್ಚರವಿರಲಿ
ಬೆಂಗಳೂರು, ಜನವರಿ 17: ಬೆಂಗಳೂರು ಸುತ್ತಮುತ್ತ ಇರುವ ಆಸುಪಾಸಿನಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತುತ್ತಿವೆ. ಈ ಬಡಾವಣೆಗಳಲ್ಲಿ ನಿವೇಶನಕೊಳ್ಳುವ ಮುನ್ನ ಸಾರ್ವಜನಿಕರು ಎಚ್ಚರವಹಿಸುವುದು ಒಳಿತು.
ನೈಸ್ರೋಡ್ ಸುತ್ತಮುತ್ತ ಅಧಿಕೃತ ಬಡಾವಣೆಯೆಂದು ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿಯ ಮೋಸ ಹಾಗೂ ಆಮಿಷಗಳಿಗೆ ಜನರು ಬಲಿಯಾಗಬಾರದೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು-ತುಮಕೂರು ರಸ್ತೆ-ಹೊಸೂರು ರಸ್ತೆಯ ನಾಲ್ಕು ರಸ್ತೆಗಳ ಸುಮಾರು 111 ಕಿ.ಮೀ ಆಸುಪಾಸಿನಲ್ಲಿ ಹಾಗೂ ಬೆಂಗಳೂರು-ತಮಕೂರು ನಡುವಿನ 125 ಹಳ್ಳಿಗಳು ಮತ್ತು ಕೆಲವಡೆ 171 ಚದರ ಕಿ.ಮೀ ವ್ಯಾಪ್ತಿಯಲ್ಲಿ ಬಿಎಂಐಸಿ ವ್ಯಾಪ್ತಿಗೆ ಈ ಜಾಗಗಳು ಬರುತ್ತವೆ.

ಅನುಮತಿ ಇಲ್ಲದೆ ಬಡಾವಣೆಗಳನ್ನು ನಿರ್ಮಿಸುವಂತಿಲ್ಲ ಆದರೆ, ಇವರ ಅನುಮತಿ ಇಲ್ಲದೆ ಸಾಕಷ್ಟು ಬಡಾವಣೆಗಳು ತಲೆ ಎತ್ತುತ್ತಿವೆ. ಇದರಿಂದ ಸಾರ್ವಜನಿಕರು ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ನ ಉಪ ನಿರ್ದೇಶಕ ಹರ್ಷಾ ಅವರು ಹೇಳುವ ಪ್ರಕಾರ ಬೆಂಗಳೂರು-ಮೈಸೂರು ಕಾರಿಡಾರ್ಗೆ ಹೊಂದಿಕೊಂಡಂತಿರುವ ಕೆಲವು ಕಡೆಗಳಲ್ಲಿ ಅಕ್ರಮ ಲೇಔಟ್ಗಳನ್ನು ಸ್ಥಾಪಿಸುತ್ತಿರುವ ಕುರಿತು ದೂರುಗಳು ಬಂದಿವೆ. ಆ ಸ್ಥಳ ಪರಿಶೀಲನೆಗೆಂದು ಹೋದಾಗ ಈ ಘಟನೆಗಳು ಬೆಳಕಿಗೆ ಬಂದಿವೆ.

ಕೆಲವು ಲೇಔಟ್ಗಳು ಈ ಕಾರಿಡಾರ್ ನಿರ್ಮಾಣ ಪ್ರದೇಶದಲ್ಲಿ ಬಂದಿದ್ದರೆ ಮನೆ, ಅಪಾರ್ಟ್ಮೆಂಟ್ ನಿರ್ಮಾಣ ಮಾಡಬೇಕಿದ್ದರೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ಮೈಸೂರು ರಸ್ತೆಯ ಕುಂಬಳಗೋಡಿನಲ್ಲಿಯೂ ಇಂತಹ ಕೆಲವು ಘಟನೆಗಳು ಬೆಳಕಿಗೆ ಬಂದಿವೆ ಶೀಘ್ರವೇ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications