ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ: ಮುನಿರತ್ನ ನೀಡಿದ ಎಚ್ಚರಿಕೆ
ಬೆಂಗಳೂರು, ನ 12: ಭಾರೀ ಮತಗಳ ಅಂತರದಿಂದ ರಾಜರಾಜೇಶ್ವರಿ ನಗರ ಅಸೆಂಬ್ಲಿ ಉಪಚುನಾವಣೆ ಗೆದ್ದಿರುವ ಬಿಜೆಪಿಯ ಮುನಿರತ್ನ, ತಮ್ಮ ಎದುರಾಳಿ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
"ಜೆಡಿಎಸ್ ಪಕ್ಷಕ್ಕೆ ಠೇವಣಿ ಸಿಗದೇ ಇರುವುದಕ್ಕೆ ಯಾರೂ ಆ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು. ಆ ಪಕ್ಷಕ್ಕೆ ತನ್ನದೇ ಆದ ವರ್ಚಸ್ಸು ಇದೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಮತವನ್ನು ಪಡೆದಿತ್ತು"ಎಂದು ಮುನಿರತ್ನ ಹೇಳಿದ್ದಾರೆ.
"ಮತದಾನ ಕಮ್ಮಿಯಾಗಿರುವುದರಿಂದ ಜೆಡಿಎಸ್ಸಿಗೆ ಹಿನ್ನಡೆಯಾಗಿರಬಹುದು. ಜೆಡಿಎಸ್ ಪಕ್ಷದಲ್ಲೂ ಉತ್ತಮ ನಾಯಕರಿದ್ದಾರೆ, ಅಸಂಖ್ಯಾತ ಕಾರ್ಯಕರ್ತರಿದ್ದಾರೆ ಎನ್ನುವುದನ್ನು ಮರೆಯಬಾರದು"ಎಂದು ಮುನಿರತ್ನ ಅಭಿಪ್ರಾಯ ಪಟ್ಟಿದ್ದಾರೆ.

"ನಿಖಿಲ್ ಕುಮಾರಸ್ವಾಮಿ ಪ್ರಚಾರದ ವೇಳೆ ನನ್ನ ವಿರುದ್ದವಾಗಿಯೂ ಮಾತನಾಡಿದ್ದಾರೆ. ರಾಜಕೀಯ ಬೇರೆ ಸಿನಿಮಾ ರಂಗ ಬೇರೆ. ಈಗಲೂ ನನ್ನ ಕಥೆಗೆ ನಿಖಿಲ್ ಸೂಕ್ತ ನಾಯಕ ಎಂದೆನಿಸಿದರೆ, ಅವರನ್ನೇ ನಾಯಕನಾಗಿ ಸಿನಿಮಾ ಮಾಡುತ್ತೇನೆ"ಎಂದು ಮುನಿರತ್ನ ಹೇಳಿದ್ದಾರೆ.
"ನಿಖಿಲ್, ಅವರ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ, ಇದರಲ್ಲಿ ತಪ್ಪೇನಿದೆ. ಅವರು ಸರಿಯಾಗಿಯೇ ಮಾಡಿದ್ದಾರೆ. ಚುನಾವಣೆ ಎಂದ ಮೇಲೆ ಆರೋಪ, ಪ್ರತ್ಯಾರೋಪ ಸಹಜ. ಎಲ್ಲಾ ಮರೆತು ಅಭಿವೃದ್ದಿಯ ಕಡೆ ಗಮನ ಕೊಡಬೇಕು"ಎಂದು ಮುನಿರತ್ನ ಹೇಳಿದ್ದಾರೆ.
"ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಒಡೆಯುವ ಕೆಲಸ ನಮ್ಮಿಂದ ನಡೆದಿಲ್ಲ. ಕಾಂಗ್ರೆಸ್ ಅಭ್ಯರ್ಥಿಯ ತಂದೆ ಹನುಮಂತರಾಯಪ್ಪ ಈ ಕೆಲಸವನ್ನು ಮಾಡಿರಬಹುದು"ಎಂದು ಮುನಿರತ್ನ ಹೇಳಿದ್ದಾರೆ. (ಸಂಗ್ರಹ ಚಿತ್ರ)
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications