ಹೆರಿಗೆ ರಜೆ: ನೌಕರರಿಗೆ ಖುಷಿ ಸುದ್ದಿ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 19: ಮಕ್ಕಳನ್ನು ದತ್ತು ಪಡೆಯುವ ಸರ್ಕಾರಿ ನೌಕರರಿಗೂ ವೇತನ ಸಹಿತ ಹೆರಿಗೆ ರಜೆ ನೀಡುವ ಮಹತ್ವದ ಸೌಲಭ್ಯವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಮಾತೃತ್ವ ಮತ್ತು ಪಿತೃತ್ವ ರಜೆ ಸೌಲಭ್ಯ ನೀಡುವ ಹೊಸ ಆದೇಶವನ್ನು ಸರ್ಕಾರ ಪ್ರಕಟಿಸಿದ್ದು, ಇದರಿಂದ ದತ್ತು ಪಡೆದುಕೊಳ್ಳುವ ಪೋಷಕರಿಗೆ ಅನುಕೂಲವಾಗಲಿದೆ.
ಮಹಿಳಾ ಸರ್ಕಾರಿ ನೌಕರರು ಮಕ್ಕಳನ್ನು ದತ್ತು ಪಡೆದುಕೊಂಡಾಗ 180 ದಿನಗಳ ಕಾಲ ಹೆರಿಗೆ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಹಾಗೆಯೇ ಮಗುವನ್ನು ದತ್ತು ಪಡೆದುಕೊಳ್ಳುವ ಪುರುಷ ಉದ್ಯೋಗಿಗಳಿಗೂ 15 ದಿನಗಳ ರಜೆ ಸೌಲಭ್ಯ ಒದಗಿಸಲಾಗುತ್ತದೆ.
ರಾಜ್ಯ ಸರ್ಕಾರದ ಈ ಹೊಸ ಆದೇಶದಿಂದ ನೂರಾರು ಮಹಿಳಾ ಮತ್ತು ಪುರುಷ ನೌಕರರಿಗೆ ಪ್ರಯೋಜನವಾಗಲಿದೆ. ದತ್ತು ಪಡೆದುಕೊಂಡ ಮಕ್ಕಳೊಂದಿಗೆ ಹೊಂದಿಕೊಳ್ಳಲು ಮತ್ತು ಅವರ ಪಾಲನೆಗೆ ಅಗತ್ಯ ಸೌಕರ್ಯ ಕಲ್ಪಿಸಲು ಅವರಿಗೆ ಸಮಯಾವಕಾಶ ಸಿಕ್ಕಂತಾಗಲಿದೆ.

ಮೂರನೇ ದತ್ತು ಮಗುವಿಗೆ ರಜೆ ಇಲ್ಲ
ರಾಜ್ಯ ಸರ್ಕಾರ ಬುಧವಾರ ಈ ಹೊಸ ಆದೇಶ ಹೊರಡಿಸಿದ್ದು, ಎರಡು ಮಕ್ಕಳನ್ನು ದತ್ತು ಪಡೆದುಕೊಳ್ಳುವವರೆಗೆ ಈ ಹೆರಿಗೆ ರಜೆ ಸೌಲಭ್ಯ ಸಿಗಲಿದೆ. ಅಂದರೆ ಸರ್ಕಾರಿ ನೌಕರರು ಎರಡು ಮಕ್ಕಳನ್ನು ದತ್ತು ಪಡೆದುಕೊಂಡಾಗ ಹೆರಿಗೆ ರಜೆ ಸಿಗಲಿದೆ. ಮೂರನೇ ಮಗುವನ್ನು ದತ್ತು ಸ್ವೀಕರಿಸಿದಾಗ ಈ ರಜೆ ಸೌಲಭ್ಯ ಅನ್ವಯವಾಗುವುದಿಲ್ಲ.

ದತ್ತು ಪಡೆದ ದಿನದಿಂದ ಅನ್ವಯ
ಮಗುವನ್ನು ದತ್ತು ಪಡೆದ ದಿನದಿಂದ ರಜೆ ಸೌಲಭ್ಯ ಸಿಗಲಿದೆ. ಈ ಹೊಸ ಯೋಜನೆಯಿಂದ ಮಕ್ಕಳಿಲ್ಲದವರು, ಮಕ್ಕಳನ್ನು ದತ್ತು ಪಡೆದುಕೊಂಡಾಗ ಕೂಡ ರಜೆ ಸಿಗಲಿದೆ. ಇದರಿಂದ ಅವರು ಆರಂಭದಲ್ಲಿ ದತ್ತು ಮಕ್ಕಳೊಂದಿಗೆ ಸಮಯ ಕಳೆಯಲು ಹಾಗೂ ಅವರ ಪೋಷಣೆಗೆ ಅಗತ್ಯ ಸಿದ್ಧತೆ ನಡೆಸಲು ಹಾಗೂ ಮಾನಸಿಕವಾಗಿ ಹೊಂದಿಕೊಳ್ಳಲು ನೆರವಾಗಲಿದೆ.

ಪುರುಷರಿಗೂ ರಜೆ
ಈ ಹಿಂದೆ ಹೆರಿಗೆಗೆ ಹೋಗುವ ಮಹಿಳೆಯರಿಗಷ್ಟೇ 26 ವಾರಗಳ ಕಾಲ ರಜೆ ಸೌಲಭ್ಯ ಸಿಗುತ್ತಿತ್ತು. ಅಲ್ಲದೆ, ಇದು ಮಹಿಳೆಯರಿಗೆ ಮಾತ್ರ ಅನ್ವಯವಾಗಿತ್ತು. ದತ್ತು ಮಕ್ಕಳನ್ನು ಪಡೆದುಕೊಳ್ಳುವ ಸರ್ಕಾರಿ ನೌಕರರಿಗೆ ರಜೆ ಸೌಲಭ್ಯ ಸಿಗುತ್ತಿರಲಿಲ್ಲ. ಈಗ ಮಹಿಳೆಯರು ಮತ್ತು ಪುರುಷರಿಗೆ ಇಬ್ಬರಿಗೂ ರಜೆ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ದತ್ತು ಪಡೆದುಕೊಂಡ ಪುರುಷರಿಗೆ 15 ದಿನಗಳ ರಜೆ ಸಿಗಲಿದೆ.

ಹೆರಿಗೆ ಸೌಲಭ್ಯ ತಿದ್ದುಪಡಿ ಕಾಯ್ದೆ
ಕೇಂದ್ರ ಸರ್ಕಾರವು ಈ ಸೌಲಭ್ಯ ನೀಡಲು 2016ರಲ್ಲಿಯೇ ಸಂಸತ್ನಲ್ಲಿ ಹೆರಿಗೆ ಸೌಲಭ್ಯ ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡಿತ್ತು. ಆಗ ಹೆರಿಗೆ ರಜೆಯನ್ನು 12 ವಾರಗಳಿಂದ 26 ವರ್ಷಕ್ಕೆ ಏರಿಸಲಾಗಿತ್ತು. ಜತೆಗೆ ದತ್ತು ಪಡೆದ ಮಹಿಳೆಯರೂ ಕಾನೂನಾತ್ಮಕವಾಗಿ ತಾಯಿಯಾಗುವುದರಿಂದ ಅವರಿಗೆ ರಜೆ ನೀಡುವಂತೆ ವಿಧೇಯಕಕ್ಕೆ ಅನುಮತಿ ನೀಡಲಾಗಿತ್ತು. ಹತ್ತಕ್ಕಿಂತ ಹೆಚ್ಚು ನೌಕರರನ್ನು ಹೊಂದಿರುವ ಎಲ್ಲ ಸಂಸ್ಥೆಗಳಿಗೂ ಇದು ಅನ್ವಯವಾಗುತ್ತದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications