ಕೆರೆಗಳ ಉಳಿಸಲು ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು, ಫೆಬ್ರವರಿ 22: ನಗರದ ಮಲ್ಲಸಂದ್ರ ಗುಡ್ಡೆ ಕೆರೆ ಉಳಿವಿಗಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎನ್ಜಿಟಿಯಿಂದ ದಂಡ : ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಜಾ
ಯುನೈಟೆಡ್ ಬೆಂಗಳೂರು ಸಂಘಟನೆ ಹಾಗೂ ಸ್ಥಳೀಯರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆರೆಗಳ ಉಳಿವಿಗಾಗಿ ಒತ್ತಾಯಿಸಲಾಯಿತು. ಕೆರೆ ಉಳಿವು ಒತ್ತಿ ಹೇಳುವ ಪ್ಲೇಕಾರ್ಡ್ಗಳನ್ನು ಪ್ರದರ್ಶಿಸಲಾಯಿತು.
ಶೀಘ್ರ ವೃಷಭಾವತಿ ತುಂಬಿ ಹರಿಯಲಿದ್ದಾಳೆ, ಯಾವ್ಯಾವ ಭಾಗಕ್ಕೆ ಅನುಕೂಲ
ದೊರೆಸ್ವಾಮಿ ಅವರು ಕೆರೆಗಳ ಉಳಿವಿನ ಬಗ್ಗೆ ಮಾತನಾಡಿದರು, ಕೆರೆಗಳ ಉಳಿವಿಗೆ ಕೈಗೊಳ್ಳಲೇ ಬೇಕಾದ ತುರ್ತು ಕ್ರಮಗಳ ಬಗ್ಗೆ, ಹಾಗೂ ಕೆರೆಗಳ ಬಗೆಗೆ ಆಡಳಿತದ ನಿರ್ಲಕ್ಷ್ಯದ ಬಗ್ಗೆ ಮಾತನಾಡಿದರು.
ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ಉಸ್ತುವಾರಿ ಸಚಿವ ಪರಮೇಶ್ವರ್ ಅವರು ಶೀಘ್ರವೇ ಅಧಿಕಾರಿಗಳ ಸಭೆ ಕರೆಯಬೇಕೆಂದು ದೊರೆಸ್ವಾಮಿ ಅವರು ಹಾಗೂ ಯುನೈಟೆಡ್ ಬೆಂಗಳೂರು ಸಂಘಟನೆ ಸದಸ್ಯರು ಒತ್ತಾಯಿಸಿದರು.