ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎನ್ ಆರ್ ಕಾಲೋನಿಯಲ್ಲಿ ದೋಸೆ ಧ್ವನಿ ಸಾಂದ್ರಿಕೆ ಬಿಡುಗಡೆ: ವಿ. ಮನೋಹರ್ ಭಾಗಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 07: ಶ್ರೀ ಹರಿ ಸಂಕೀರ್ತನ ಟ್ರಸ್ಟ್ ವತಿಯಿಂದ ಕಾರ್ತಿಕ ಸಂಗೀತೋತ್ಸವ ಹಾಗೂ "ದೋಸೆ" ಧ್ವನಿ ಸಾಂದ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಡಿ.09 ರಂದು ಭಾನುವಾರ ನಗರದ ಬಸವನಗುಡಿ ಬಳಿ ಇರುವ ಎನ್ ಆರ್ ಕಾಲೋನಿಯ ಪತ್ತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ಹಾಗೂ ಸಂಗೀತ ನಿರ್ದೇಶಕ ವಿ. ಮನೋಹರ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಂತಾರಾಷ್ಟ್ರೀಯ ಖ್ಯಾತ ತಬಲಾ ವಾದಕರಾದ ಶತತಬಲಾ ಪಂಡಿತ್ ಸತೀಶ್ ಹಂಪಿಹೊಳಿ ರವರು ವಹಿಸಲಿದ್ದು, ಉದ್ಘಾಟನೆಯನ್ನು ಖ್ಯಾತ ಹಿಂದೂಸ್ತಾನಿ ಗಾಯಕರಾದ ಡಾ| ಮುದ್ದುಮೋಹನ್ ರವರು ನೆರವೇರಿಸುವರು.

ಶಿಕ್ಷಣ ಇಲಾಖೆಗಾಗಿ ಮ್ಯೂಸಿಕ್ ಆಲ್ಬಂ-ಪುನೀತ್, ಕುಂಬ್ಳೆರಿಂದ ಬಿಡುಗಡೆಶಿಕ್ಷಣ ಇಲಾಖೆಗಾಗಿ ಮ್ಯೂಸಿಕ್ ಆಲ್ಬಂ-ಪುನೀತ್, ಕುಂಬ್ಳೆರಿಂದ ಬಿಡುಗಡೆ

ಮುಖ್ಯ ಅತಿಥಿಗಳಾಗಿ ಖ್ಯಾತ ಹಿಂದೂಸ್ತಾನಿ ಗಾಯಕರಾದ ಪಂಡಿತ್ ವಿ.ಎಮ್ ನಾಗರಾಜ್ ಹಾಗೂ ಅಹೋರಾತ್ರಾ ಭಾಗವಹಿಸುವರು.

Dose dhvani sandirke programme is organized on December 09

 ಸಾಧನಕೇರಿ ಸಂಸ್ಥೆಯಿಂದ ಹುತಾತ್ಮ ಯೋಧರಿಗಾಗಿ ಗಾಯನ ನಮನ ಸಾಧನಕೇರಿ ಸಂಸ್ಥೆಯಿಂದ ಹುತಾತ್ಮ ಯೋಧರಿಗಾಗಿ ಗಾಯನ ನಮನ

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯತ್ರಿ ಶ್ರೀಧರ್ (ವಾಯ್ಸ್ ನೇಮ್-ಸಂಕಲ್ಪ) ರವರ ಗಾಯನ ಕಾರ್ಯಕ್ರಮ, ಶ್ರೀ ಸದ್ಗುರು ಮ್ಯುಜಿಕ್ ಅಕಾಡೆಮಿ ವಿದ್ಯಾರ್ಥಿಗಳಿಂದ ತಬಲಾ ವಾದನ, ಶ್ರೀ ಗುರು ಸಮರ್ಥ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ತಬಲಾ ವಾದನ ಹಾಗೂ ಸಂಗೀತ ಸ್ವರ ಸಂಸ್ಕಾರ ಸೇವಾ ಟ್ರಸ್ಟ್ ಶಿಷ್ಯ ವೃಂದದವರಿಂದ ಸಮೂಹ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

English summary
'Dose' dhvani sandirke programme is organized on December 09 at NR Colony in Bangalore. Music Director V. Manohar will participate in this programme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X