ಬೆಂಗಳೂರು ರೈಲು-ರಸ್ತೆ ಪ್ರಯಾಣಿಕರಿಗೆ ಡಬಲ್ ಬೂಸ್ಟ್: ಮೇಲ್ಸೇತುವೆ ಓಪನ್, ರೈಲು ನಿಲುಗಡೆಗೆ ಚಾಲನೆ
ಬೆಂಗಳೂರು: ಬಹುದಿನಗಳಿಂದ ನಿರ್ಮಾಣ ಹಂತದಲ್ಲಿದ್ದು, ದೈನಂದಿನ ಸಂಚಾರಕ್ಕೆ ತೊಂದೆಯಾಗಿದ್ದ ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆ ಮಧ್ಯದ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಾರ್ವಜನಿಕರಿಗೆ ಈ ಮೇಲ್ಸೇತುವೆಯನ್ನು ಮಂಗಳವಾರ ಮುಕ್ತಗೊಳಿಸುವ ಜೊತೆಗೆ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ನಾಲ್ಕು ಎಕ್ಸ್ಪ್ರೆಸ್ ರೈಲುಗಳ ಹೆಚ್ಚುವರಿ ನಿಲುಗಡೆಗೆ ಚಾಲನೆ ನೀಡಿದರು. ಇದರಿಂದ ರಸ್ತೆ ಮೂಲಸೌಕರ್ಯ, ಪ್ರಯಾಣಿಕರ ಸೌಲಭ್ಯ ವೃದ್ಧಿ ಜೊತೆಗೆ ಪ್ರಾದೇಶಿಕ ಸಂಪರ್ಕಕ್ಕೆ ಉತ್ತೇಜನ ಸಿಕ್ಕಂತಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮಿತಿ ಮೀರಿದೆ. ನಗರದಿಂದ ಬೇರೆ ಬೇರೆ ಊರುಗಳಿಗೆ ತೆರಳುವವರು ಈ ದಟ್ಟಣೆಯಲ್ಲಿ ತೆರಳಬೇಕಿದೆ. ನಿರ್ದಿಷ್ಟ ರೈಲುಗಳಿಗಾಗಿ ಕೆಂಗೇರಿ, ಮೆಜೆಸ್ಟಿಕ್ ನಿಲ್ದಾಣಗಳಿಗೆ ತೆರಳಬೇಕಿತ್ತು. ಇದೀಗ ಇಲ್ಲಿ ಪ್ರಮುಖ ರೈಲುಗಳ ನಿಲಗಡೆಯಿಂದ ನಾಯಂಡಹಳ್ಳಿ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಸಾಕಷ್ಟು ಅನುಕೂಲವಾಗಿದೆ.

ಈ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಇಂದಿನಿಂದ ಮೈಸೂರು - ಕೆಎಸ್ಆರ್ ಸಿಟಿ ಚಾಮುಂಡಿ ಎಕ್ಸ್ಪ್ರೆಸ್ ರೈಲು (16215/16216), ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್ ರೈಲು (16307/16308), ಟುಟಿಕೋರಿನ್-ಮೈಸೂರು ಎಕ್ಸ್ಪ್ರೆಸ್ ರೈಲು (16235/16236) ಹಾಗೂ ಮೈಸೂರು-ಪಂಡರಾಪುರ ಗೋಲ್ ಗುಂಬಜ್ ಎಕ್ಸ್ಪ್ರೆಸ್ ರೈಲು (16535/16536) ಹೆಚ್ಚುವರಿ ನಿಲುಗಡೆ ನೀಡಲಿವೆ ಎಂದು ಸಚಿವ ವಿ.ಸೋಮಣ್ಣ ಅವರು ಮಾಹಿತಿ ನೀಡಿದರು.
ನಾಯಂಡಹಳ್ಳಿ ರೈಲು ನಿಲ್ದಾಣ ಸಮೀಪವೇ ಮೆಟ್ರೋ ರೈಲು ನಿಲ್ದಾಣ ಇದೆ. ಹೊರ ವರ್ತುಲ ರಸ್ತೆ ಇದೇ ಭಾಗದಲ್ಲಿ ಹಾದು ಹೋಗುತ್ತದೆ. ಸಾಕಷ್ಟು ಕಚೇರಿ, ಮಾಲ್ಗಳು, ಪೊಲೀಸ್ ಕ್ವಾಟ್ರಸ್, ಪ್ರತಿಷ್ಠಿತ ಶಾಲಾ, ಕಾಲೇಜುಗಳು, ದೊಡ್ಡ ದೊಡ್ಡ ಅಪಾರ್ಟ್ಮೆಂಟ್ಗಳು ಇವೆ. ಪ್ರಯಾಣಿಕರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಸೇರಿದಂತೆ ಲಕ್ಷಾಂತರ ಜನರಿಗೆ ಈ ರೈಲುಗಳ ಹೆಚ್ಚುವರಿ ನಿಲುಗಡೆಯಿಂದ ಪ್ರಯೋಜನ ದೊರೆಯಲಿದೆ.
ರಸ್ತೆ ಮೇಲ್ಸೇತುವೆ ಓಪನ್
ಒಟ್ಟಾರೆ 14.27 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಮೇಲ್ಸೇತುವೆ ಸಂಖ್ಯೆ 431 ಅನ್ನು ನಿರ್ಮಿಸಲಾಗುತ್ತದೆ. ಸಂಚಾರ ದಟ್ಟಣೆ ನಿಯಂತ್ರಿಸುವುದರ ಜೊತೆಗೆ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸುತ್ತದೆ. ಮೂಲ ಸೌಕರ್ಯ ಅಭಿವೃದ್ಧಿ ಉತ್ತೇಜಿಸುತ್ತದೆ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಕೊಡುಗೆ ನೀಡುವ ಮೇಲ್ಸೇತುವೆ ಇದಾಗಿದೆ. ವರ್ಷಗಳಿಂದ ವಿಜಯನಗರದಿಂದ ಮೈಸೂರು ರಸ್ತೆಗೆ ಗೋರಿಪಾಳ್ಯ ಮೂಲಕ ಸಂಪರ್ಕ ಕಡಿತವಾಗಿತ್ತು. ಇಂದಿನ ಲೋಕಾರ್ಪಣೆಯೊಂದಿಗೆ ಇದೀಗ ಮತ್ತೆ ಸಂಪರ್ಕ ಸಾಧ್ಯವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications