Mahadayi dispute: ಮಹದಾಯಿ ವಿಚಾರದಲ್ಲಿ ಡಬಲ್ ಗೇಮ್ ಬಿಡಿ; ಬಿಜೆಪಿಗೆ ಸಿದ್ದರಾಮಯ್ಯ ತರಾಟೆ
ಬೆಂಗಳೂರು, ಜ. 12: ಕಳಸಾ ಬಂಡೂರಿ ಯೋಜನೆಯ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಮತ್ತೆ ಮಹದಾಯಿ ನದಿ ನೀರು ವಿವಾದ ಹೆಚ್ಚಾಗಲು ಕಾರಣವಾಗಿದೆ. ಗುರುವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನೀರಾವರಿ ಸಚಿವ ಗಜೇಂದ್ರ ಸಿಂಗ್ ಭೇಟಿ ಮಾಡಿ ಅನುಮತಿ ಹಿಂಪಡೆಯುವಂತೆ ಮನವಿ ಮಾಡಿವೆ. ಇದಕ್ಕೆ ಆಶಾದಾಯಕ ಭರವಸೆ ಸಿಕ್ಕಿದೆ ಎನ್ನಲಾಗಿದೆ.
ಹೀಗಾಗಿ ಕೇಂದ್ರ ಸರ್ಕಾರ ಡಬಲ್ ಗೇಮ್ ಆಡುವುದನ್ನು ಬಿಟ್ಟು ಮಹದಾಯಿ ನದಿ ನೀರಿನ ಯೋಜನೆ ಬಗ್ಗೆ ಸ್ಪಷ್ಟ ನಿಲುವನ್ನು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಅವರು, "ಪ್ರಧಾನಿ ನರೇಂದ್ರ ಮೋದಿಯವರೇ, ಮಹದಾಯಿ ನದಿನೀರಿನ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಸ್ಪಷ್ಟ ನಿಲುವನ್ನು ಘೋಷಿಸಿಬಿಡಿ. ಎರಡು ವರ್ಷ ಹತ್ತು ತಿಂಗಳ ವರೆಗೆ ಮುಚ್ಚಿಟ್ಟು ಈಗ ಅನುಮತಿ ನೀಡಿರುವುದು ನ್ಯಾಯದ ತೀರ್ಮಾನವೇ..? ಅನ್ಯಾಯದ ಆಟವೇ..?" ಎಂದು ಪ್ರಶ್ನಿಸಿದ್ದಾರೆ.

"ಗೋವಾ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನೀರಾವರಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ ಡಿಪಿಆರ್ಗೆ ನೀಡಿರುವ ಅನುಮತಿಯನ್ನು ಹಿಂದೆಗೆದುಕೊಳ್ಳಲು ಮನವಿ ಮಾಡಿದೆ. ಗೃಹಸಚಿವ ಅಮಿತ್ ಶಾ ಅವರು ಆಶಾದಾಯಕ ಭರವಸೆ ನೀಡಿದ್ದಾರಂತೆ. ಏನಿದು ಡಬಲ್ ಗೇಮ್..?" ಎಂದಿದ್ದಾರೆ.
ಗೋವಾ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ @AmitShah ಮತ್ತು ನೀರಾವರಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ ಡಿಪಿಆರ್ ಗೆ ನೀಡಿರುವ ಅನುಮತಿಯನ್ನು ಹಿಂದೆಗೆದುಕೊಳ್ಳಲು ಮನವಿ ಮಾಡಿದೆ. ಗೃಹಸಚಿವ ಅಮಿತ್ ಶಾ ಅವರು ಆಶಾದಾಯಕ ಭರವಸೆ ನೀಡಿದ್ದಾರಂತೆ. ಏನಿದು ಡಬಲ್ ಗೇಮ್? 2/4#Mahadayi pic.twitter.com/rr8Zlfgf07
— Siddaramaiah (@siddaramaiah) January 12, 2023
"ಮಹದಾಯಿ ನದಿ ನೀರಿನ ವಿವಾದ ಇತ್ಯರ್ಥಕ್ಕಾಗಿ ಗೋವಾ ಮುಖ್ಯಮಂತ್ರಿಗಳು ಪ್ರಾಧಿಕಾರ ರಚಿಸಲು ಕೇಳಿಕೊಂಡಿದ್ದಾರಂತೆ. ಇದು ವಿಳಂಬ ನೀತಿಯ ಕಾರ್ಯತಂತ್ರ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಡಿಪಿಆರ್ ಗೆ ನೀಡಿರುವ ಅನುಮತಿಯನ್ನು ವಾಪಸು ಪಡೆಯಬಾರದು" ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
"ರಾಜ್ಯದ ಮುಖ್ಯಮಂತ್ರಿಗಳು ಈ ಬೆಳವಣಿಗೆಯನ್ನು ಗಮನಿಸಿದ್ದಾರೆಂದು ನಂಬಿದ್ದೇನೆ. ಈ ರಾಜಕೀಯ ಜಿದ್ದಾಜಿದ್ದಿಯಲ್ಲಿ ಬಲಶಾಲಿಯಾಗಿದ್ದವರೇ ಗೆಲ್ಲುವುದು ರಾಜನೀತಿ. ಮುಖ್ಯಮಂತ್ರಿಗಳು ಮತ್ತು ರಾಜ್ಯದ ಇಪ್ಪತ್ತೈದು ಬಿಜೆಪಿ ಸಂಸದರು ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು." ಎಂದು ಒತ್ತಾಯಿಸಿದ್ದಾರೆ.
गोवा के यशस्वी मुख्यमंत्री श्री प्रमोद सावंत जी अपने प्रतिनिधिमंडल के साथ आज दिल्ली आवास पर मुलाकात के लिए आए।
— Gajendra Singh Shekhawat (@gssjodhpur) January 12, 2023
हमारे मध्य महादयी नदी के जल वितरण के संदर्भ में विचार विनिमय हुआ। निश्चित ही इस मुद्दे का समाधान शीघ्र निकल आएगा। pic.twitter.com/CLs5qOjY0a
ಇನ್ನು, ಗುರುವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಗುರುವಾರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಬಗ್ಗೆ ಅವರೇ ಟ್ವೀಟ್ ಮಾಡಿದ್ದಾರೆ.
"ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜಿ ಅವರು ತಮ್ಮ ನಿಯೋಗದೊಂದಿಗೆ ಇಂದು ದೆಹಲಿ ನಿವಾಸದಲ್ಲಿ ನನ್ನೊಂದಿಗೆ ಸಭೆ ನಡೆಸಿದರು. ನಮ್ಮ ನಡುವೆ ಮಹದಾಯಿ ನದಿ ನೀರು ಹಂಚಿಕೆ ಕುರಿತು ವಿಚಾರ ವಿನಿಮಯ ನಡೆಯಿತು. ಈ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗುವುದು ಖಚಿತ" ಎಂದಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು?












Click it and Unblock the Notifications