ವರದಕ್ಷಿಣೆ ಕಿರುಕುಳ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಅನುಮಾನಸ್ಪದ ಸಾವು
ಬೆಂಗಳೂರು, ಜ. 23: ಎರಡು ತಿಂಗಳ ಹಿಂದೆ ಸೌದಿಯಿಂದ ಬಂದಿದ್ದ ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಕೊಲೆ ಮಾಡಿ ವಿಮಾನದಲ್ಲಿ ಪರಾರಿಯಾಗಿದ್ದ ಕೊಲೆ ಆರೋಪಿಗಳನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ರಾಜಾಜಿನಗರದ ನಿವಾಸಿ ಸುಮ್ರಾ ಸಿಮೀನ್ ಮೃತಪಟ್ಟವರು. ಈಕೆಯ ಪತಿ ಶಹಬಾಜ್ ಖಾನ್ನನ್ನು ರಾಜಾಜಿನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರಕುಳದಿಂದ ಸುಮ್ರಾ ಸಿಮೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಆರು ವರ್ಷದ ಹಿಂದೆ ಶಹಬಾಜ್ ಖಾನ್ನನ್ನು ಮದುವೆಯಗಿದ್ದ ನುಮ್ರಾಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಕುಟುಂಬ ದುಬೈನಲ್ಲಿ ನೆಲೆಸಿತ್ತು. ಎರಡು ತಿಂಗಳ ಹಿಂದಷ್ಟೇ ವಾಪಸು ಬೆಂಗಳೂರಿಗೆ ಬಂದಿತ್ತು. ಶಹಬಾಜ್ ಸಹೋದರಿಯ ಮನೆಯಲ್ಲಿದ್ದರು. ವರದಕ್ಷಿಣೆ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದು, ಪತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹಂತಕರ ಸೆರೆ: ಜಗಳ ಬಿಡಿಸಲು ಹೋದ ವ್ಯಕ್ತಿಯನ್ನು ಕೊಲೆ ಮಾಡಿ ವಿಮಾನದಲ್ಲಿ ಎಸ್ಕೇಪ್ ಆಗಿದ್ದ ಇಬ್ಬರು ಕೊಲೆ ಹಂತಕರನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಆಂಥೋನಿ ಸಿಂಗ್, ಕಿಶನ್ ಸಿಂಗ್, ಬಂಧಿತ ಆರೋಪಿಗಳು. ಜ. 1 ರಂದು ಕೊತ್ತನೂರಿನ ಹನುಮಂತನಗರದಲ್ಲಿ ಮುರುಗನ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಸ್ನೇಹಿತರ ಜಗಳ ಬಿಡಿಸಲು ಹೋಗಿದ್ದ ಮುರುಗನ್ ಮೇಲೆ ಆರು ಮಂದಿ ಹಲ್ಲೆ ಮಾಡಿದ್ದರು. ರಕ್ತ ಸಾವ್ರ ಉಂಟಾಗಿ ಐದು ದಿನಗಳ ನಂತರ ಮೃತಪಟ್ಟಿದ್ದ. ಮುರುಗನ್ ಸಾವಿನ ವಿಚಾರ ತಿಳಿದು ಹಂತಕರು ಪರಾರಿಯಾಗಿದ್ದರು. ಇದೀಗ ಇಬ್ಬರು ಸಿಕ್ಕಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications