ನಾನು ಜಾತಿವಾದಿಯಾಗಿದ್ದರೆ ನನ್ನ ವಂಶ ನಿರ್ನಾಮವಾಗಲಿ: ಜಮೀರ್ ಅಹಮದ್ ಡೈಲಾಗ್!
ಬೆಂಗಳೂರು, ಏ. 14: 'ನಾನು ಜಾತಿ ಮಾಡಿದ್ದರೆ, ನನ್ನ ವಂಶ ನಿರ್ನಾಮವಾಗಲಿ, ನಾನು ಸತ್ಯ ಹೇಳುತ್ತಿದ್ದೇನೆ. ರಾಜಕೀಯಕ್ಕೆ ಬಂದ ಮೇಲೆ ನನಗೆ ಜಾತಿ ಗೊತ್ತಾಗಿರೋದು. ಅದಕ್ಕಿಂತ ಮುಂಚೆ ನನಗೆ ಅದು ಗೊತ್ತಿಲ್ಲ..!
ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಚಾಮರಾಜಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಶಾಸಕ ಜಮೀರ್ ಅಹಮದ್ ಖಾನ್ ಹೊಡೆದ ಡೈಲಾಗ್ ಇದು.
ನಮಗೆ ಜಾತಿ ಬೇಡ, ನೆಮ್ಮದಿ ಬೇಕು. ನಾನು ಮುಸ್ಲಿಂ ಆಗಿರಬಹುದು. ಆದರೆ, ಅದಕ್ಕೂ ಮುಂಚೆ ನಾನು ಭಾರತೀಯ, ಹಿಂದೂಸ್ತಾನಿ, ನಾನು ಕನ್ನಡಿಗ ಎಂದು ಚಾಮರಾಜಪೇಟೆ ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಹೇಳಿದರು.

ನಿಮ್ಮ ತೊಂದರೆ, ನಿಮ್ಮ ಕಷ್ಟ ಎಲ್ಲವೂ ನನ್ನದು ಎಂದು ತಿಳಿದಿದ್ದೇನೆ. ಅದರಂತೆಯೇ ನಾನು ಬಾಳುತ್ತಿದ್ದೇನೆ. ಯಾರಲ್ಲೂ ಜಾತಿ ಬರುವುದು ಬೇಡ. ನಾನು ನೀವು ಆಯ್ಕೆ ಮಾಡಿದ ಸೇವಕ ನಿಮ್ಮ ಸೇವೆಯಲ್ಲಿ ಪ್ರತಿದಿನನೂ ಕಳೆಯುತ್ತಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.
ಚಾಮರಾಜಪೇಟೆ ಶಾಸಕ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಇಂದು ಚಾಮರಾಜಪೇಟೆ ಕ್ಷೇತ್ರದ ಕೆ.ಆರ್ ಮಾರ್ಕೆಟ್ ವಾರ್ಡ್ ನ ಟಿಸಿಎಂ ಗ್ರ್ಯಾಂಡ್ ರಸ್ತೆಯಲ್ಲಿರೋ ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

Recommended Video
ಸಂವಿಧಾನ ಶಿಲ್ಪಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಬಳಿಕ ವಾರ್ಡ್ ಸಂಖ್ಯೆ 136ರ ಜಗಜೀವನರಾಮ್ ನಗರದಲ್ಲಿ ಮುಖಂಡರಾದ ಪಿ.ಕೆ ಅಲ್ತಾಫ್ ಅವರು ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications