75ನೇ ವರ್ಷದ ಹವ್ಯಕ ಸರ್ವಸದಸ್ಯರ ಸಭೆ - ಡಾ. ಕಜೆ ಪುನರಾಯ್ಕೆ
ಬೆಂಗಳೂರು, ಮಾರ್ಚ್ 11: ಡಿಸೆಂಬರ್ ನಲ್ಲಿ ನಡೆದ ಅಮೃತ ಮಹೋತ್ಸವ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನವು ಕೇವಲ ಜಾತಿಯ ಸಮಾವೇಶವಾಗಿರಲಿಲ್ಲ. ಸರ್ವ ಸಮಾಜದವರಿಗೂ ಅಲ್ಲಿ ಅವಕಾಶ ಕಲ್ಪಿಸಲಾಗಿತ್ತು, ಹವ್ಯಕ ಸಂಸ್ಕೃತಿಯನ್ನು ನಾಡಿನಾದ್ಯಂತ ಪಸರಿಸುವ ಕಾರ್ಯಕ್ರಮ ಅದಾಗಿತ್ತು ಎಂದು ಡಾ. ಗಿರಿಧರ ಕಜೆ ಹೇಳಿದರು.
ಮಲ್ಲೇಶ್ವರದಲ್ಲಿರುವ ಮಹಾಸಭೆಯ ಸಭಾಂಗಣದಲ್ಲಿ 10.03.19 ಭಾನುವಾರ ನಡೆದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಸರ್ವಸದಸ್ಯರ 75ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆ, ವಿಶ್ವ ಹವ್ಯಕ ಸಮ್ಮೇಳನ ನಾವು ಆಲೋಚಿಸಿದಕ್ಕಿಂತ ಬಹಳ ಉತ್ತಮವಾಗಿ ನಡೆಯಿತು, ಅಷ್ಟು ದೊಡ್ಡಮಟ್ಟದಲ್ಲಿ ಜನ ಸೇರಿದರೂ ಪೊಲೀಸ್ ಸುರಕ್ಷತೆಯ ಅವಶ್ಯಕತೆಯೇ ಬರಲಿಲ್ಲ.
ಸರ್ವಸದಸ್ಯರ ಸಭೆಯ ನಂತರ ನಡೆದ ನಿರ್ದೇಶಕರ ಸಭೆಯಲ್ಲಿ ಡಾ. ಗಿರಿಧರ ಕಜೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾದರು. ಆ ಮೂಲಕ ಡಾ. ಕಜೆ ನಾಲ್ಕನೇ ಬಾರಿಗೆ ಮಹಾಸಭೆಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಆರ್ ಎಂ ಹೆಗಡೆ ಬಾಳೆಸರ ಹಾಗೂ ಕೆಕ್ಕಾರು ಶ್ರೀಧರ್ ಭಟ್ ಉಪಾಧ್ಯಕ್ಷರಾಗಿ, ಸಿಎ ವೇಣು ವಿಘ್ನೇಶ್ ಸಂಪ ಪ್ರಧಾನ ಕಾರ್ಯದರ್ಶಿಯಾಗಿ, ಪ್ರಶಾಂತ ಭಟ್ ಯಲ್ಲಾಪುರ, ಶ್ರೀಧರ್ ಭಟ್ ಸಾಲೇಕೊಪ್ಪ ಕಾರ್ಯದರ್ಶಿಗಳಾಗಿ ಹಾಗೂ ಕೃಷ್ಣಮೂರ್ತಿ ಭಟ್ ಯಲಹಂಕ ಕೋಶಾಧಿಕಾರಿಯಾಗಿ ಸರ್ವಾನುಮತದಿಂದ ಆಯ್ಕೆಯಾದರು. ನೂತನ ಆಡಳಿತ ಮಂಡಳಿಗೆ ನಿರ್ದೇಶಕರು, ಸಂಚಾಲಕರು ಶುಭಕೋರಿದರು.

ಹವ್ಯಕ ಸಮ್ಮೇಳನದಲ್ಲಿ ಸಭೆ - ಪಾರ್ಕಿಂಗ್ - ಊಟೋಪಚಾರ - ನಿರ್ವಹಣೆ ಎಲ್ಲವೂ ಸುವ್ಯವಸ್ಥಿತವಾಗಿತ್ತು, ಯಾವುದೇ ಗೊಂದಲ - ನ್ಯೂನತೆ ಇಲ್ಲದೇ ಕಾರ್ಯಕ್ರಮ ಸಂಪನ್ನವಾಯಿತು. ಇಷ್ಟು ಸುವ್ಯವಸ್ಥಿತವಾಗಿ ನಡೆದ ಕಾರ್ಯಕ್ರಮವನ್ನು ನೋಡಿರಲಿಲ್ಲ ಎಂದು ಅರಮನೆ ಮೈದಾನದ ಆಡಳಿತ ಹಾಗೂ ನೌಕರ ವರ್ಗದವರೇ ಹೇಳಿ ಸಂತೋಷ ವ್ಯಕ್ತಪಡಿಸಿದರು ಎಂದು ಡಾ. ಕಜೆ ಹೇಳಿದರು.
ಯೋಧರ ಜಾತಿ ಲೆಕ್ಕಕ್ಕೆ ಉತ್ತರವಾದ ಹವ್ಯಕ ದೇಶರತ್ನ ಸಮ್ಮಾನ : ಪುಲ್ವಾಮ ದಾಳಿಯ ನಂತರ ದೇಶಾದ್ಯಂತ ಯೋಧರ ಜಾತಿ ಲೆಕ್ಕಾಚಾರ ಚರ್ಚಿತವಾಯಿತು. ಕೀಳುಮಟ್ಟದ ಅಂತಹ ಚರ್ಚೆಗಳಿಗೆ ವಿಶ್ವ ಹವ್ಯಕ ಸಮ್ಮೇಳನದ "ಹವ್ಯಕ ದೇಶ ರತ್ನ" ಪುರಸ್ಕಾರ ಸ್ಪಷ್ಟ ಪ್ರತ್ಯುತ್ತರವಾಗಿತ್ತು. ಅನೇಕರು ಅನೇಕ ಕಡೆಗಳಲ್ಲಿ ಹವ್ಯಕ ದೇಶರತ್ನ ಪುರಸ್ಕಾರದ ವಿಷಯವನ್ನು ಇಟ್ಟುಕೊಂಡು ಕೀಳು ಪ್ರಶ್ನೆ ಹುಟ್ಟುಹಾಕಿದ್ದವರ ಬಾಯಿ ಮುಚ್ಚಿಸಿದರು. ಯೋಧರನ್ನು ವಿಶೇಷವಾಗಿ ಗೌರವಿಸಿದ ಕೀರ್ತಿ ನಮ್ಮ ಸಮಾಜದ್ದಾಗಿದ್ದು, ಇದೀಗ ಇದು ಬೇರೆಯವರಿಗೂ ಆದರ್ಶವಾಗಿದೆ ಎಂದು ಡಾ. ಕಜೆ ಹೇಳಿದರು.

ಮಾಧ್ಯಮದವರ ಸಹಕಾರ ಅನನ್ಯ : ವಿಶ್ವ ಸಮ್ಮೇಳನಕ್ಕೆ ಮಾಧ್ಯಮದವರು ನೀಡಿದ ಸಹಕಾರ ಅನನ್ಯವಾಗಿತ್ತು. ಸಮ್ಮೇಳನದ ವಿಚಾರವನ್ನು ನಾಡಿನ ಮನೆ - ಮನಗಳಿಗೆ ಮುಟ್ಟಿಸಿದ ಕೀರ್ತಿ ಮಾಧ್ಯಮದವರಿಗೆ ಸಲ್ಲಬೇಕು. ಮಾಧ್ಯಮದವರಿಂದಾಗಿ ಸಂಘಟಿತ ಸಮಾಜದ ಧ್ವನಿ ನಾಡಿನಾದ್ಯಂತ ಪ್ರತಿಧ್ವನಿಸಿತು. ಹವ್ಯಕ ಸಮಾಜದ ಕೀರ್ತಿ ಎಲ್ಲೆಡೆ ಪಸರಿಸಿತು ಎಂದು ಡಾ. ಕಜೆ ಮಾಧ್ಯಮಗಳಿಗೆ ಕೃತಜ್ಞತೆ ಸಲ್ಲಿಸಿದರು.
ಬಹಿಷ್ಕಾರದ ಕರೆಗೆ ಜನ ಸೊಪ್ಪು ಹಾಕಲಿಲ್ಲ : ಸಮ್ಮೇಳನವನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿದರು. ಆದರೆ ಅದಕ್ಕೆ ಸಮಾಜ ಸೊಪ್ಪು ಹಾಕಲಿಲ್ಲ. ನಮ್ಮ ಅಂದಾಜಿಗಿಂತಲೂ ಚೆನ್ನಾಗಿ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮಕ್ಕೆ ಬರಬೇಕಾದವರೆಲ್ಲ ಬಂದು ಭಾಗವಹಿಸಿದರು, ಒಟ್ಟು ಮೂರು ದಿನಗಳಲ್ಲಿ 75 ಸಾವಿರಕ್ಕಿಂತಲೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದರು. ಇದು ಹವ್ಯಕ ಸಮಾಜ ಎಲ್ಲಿದೆ, ಹವ್ಯಕ ಸಮಾಜದ ನಿಲುವೇನು ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಕಜೆ ಅಭಿಪ್ರಾಯಪಟ್ಟರು.
ಗುರುಪೀಠದ ಆಶೀರ್ವಾದದಿಂದ ಕಾರ್ಯಕ್ರಮ ನಿರ್ವಿಘ್ನವಾಗಿ ನಡೆಯಿತು ಎಂದ ಡಾ. ಕಜೆ, ಸಹಸ್ರಾರು ಕಾರ್ಯಕರ್ತರು ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಸಮ್ಮೇಳನವನ್ನು ಇತರರಿಗೆ ಮಾದರಿಯಾಗುವಂತೆ ಯಶಸ್ವಿಯಾಗಿಸಿದ ಕೀರ್ತಿ ಪ್ರತಿಯೊಬ್ಬ ಕಾರ್ಯಕರ್ತರಿಗೆ ಸಲ್ಲಬೇಕು. ಸ್ಪಂದಿಸಿದ - ಸಹಕರಿಸಿದ ಸಮಾಜದ ಎಲ್ಲಾ ಬಂಧುಗಳಿಗೂ ಧನ್ಯವಾದಗಳನ್ನು ಅವರು ಸಮರ್ಪಿಸಿದರು.
ಮಾಜಿ ಅಧ್ಯಕ್ಷರಾದ ಶ್ರೀಧರ ಭಟ್ ಕಲಸಿ, ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಎಂ. ಎನ್ ಹೆಗಡೆ ಹಾರೂಗಾರ್ ಮಾತನಾಡಿ ಹವ್ಯಕ ಮಹಾಸಭೆಯನ್ನು ಯಶಸ್ವಿಯಾಗಿ ಮುನ್ನೆಡೆಸುತ್ತಿರುವ ಡಾ. ಕಜೆ ನೇತೃತ್ವದ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ಸಮಾಜದ ಅಭ್ಯುದಯಕ್ಕೆ ಇನ್ನಷ್ಟು ತೊಡಗಿಸಿಕೊಳ್ಳುವ ಕುರಿತು ಚರ್ಚೆಗಳಾದವು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications