ಬೆಂಗಳೂರಿನ ಬಗ್ಗೆ ಅಬ್ದುಲ್ ಕಲಾಂ ಹೇಳಿದ್ದೇನು?
ಬೆಂಗಳೂರು, ಜುಲೈ 28 : ಭಾರತರತ್ನ, ಕ್ಷಿಪಣಿ ಮಾನವ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಉದ್ಯಾನ ನಗರಿ ಬೆಂಗಳೂರಿನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ನಮ್ಮ ಮೆಟ್ರೋ, ಐಟಿ ಕಂಪನಿಗಳು ರಾಜ್ಯದ ಬೇರೆ ನಗರಗಳಲ್ಲೂ ಸ್ಥಾಪನೆಯಾಗಬೇಕು ಎಂಬುದು ಕಲಾಂ ಅವರ ಕನಸಾಗಿತ್ತು. [ಡಾ.ಕಲಾಂ ಸ್ಫೂರ್ತಿ ತುಂಬುವ ಹೇಳಿಕೆಗಳು]
ಬೆಂಗಳೂರಿನ ಸಂಚಾರಿ ಸಮಸ್ಯೆಯನ್ನು ಕಂಡಿದ್ದ ಕಲಾಂ ಅವರು ಉದ್ಯಾನ ನಗರಿಯಲ್ಲಿ ಹಸಿರು ವಾತಾವರಣ ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದ್ದರು. ಸಂಚಾರ ದಟ್ಟಣೆ ಸಮಸ್ಯೆ ಬಗೆರಿಯಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು. 2005ರಲ್ಲಿ ಬೆಂಗಳೂರಿಗೆ ಭೇಟಿ ನೀಡಿದ್ದಾಗ ಈ ಕುರಿತು ಮಾತನಾಡಿದ್ದರು. [ಸರಳ ವ್ಯಕ್ತಿತ್ವದ ಅಬ್ದುಲ್ ಕಲಾಂ ಸಂಕ್ಷಿಪ್ತ ಪರಿಚಯ]

ಯಲಹಂಕ ನ್ಯೂಟೌನ್ನಲ್ಲಿ ಡಾ.ಕಲಾಂ ಅಪಾರ್ಟ್ಮೆಂಟ್ ಹೊಂದಿದ್ದರು. ಎಚ್ಎಎಲ್, ಡಿಆರ್ಡಿಒ, ಇಸ್ರೋದಲ್ಲಿ ಕೆಲಸವಿರುವಾಗ ಅಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಬೆಂಗಳೂರಿನಲ್ಲಿ ಹಲವು ದಿನಗಳನ್ನು ಕಳೆದಿರುವ ಅವರ ಭಾರತದ ತ್ರಿವರ್ಣ ಧ್ವಜ ಚಂದ್ರನ ಮೇಲೆ ಹಾರಾಡಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಹೇಳುತ್ತಿದ್ದರು.[ಅಬ್ದುಲ್ ಕಲಾಂ ವಿಧಿವಶ]
ಸಂಚಾರ ಸಮಸ್ಯೆ ಬಗೆಹರಿಯಬೇಕು : ಬೆಂಗಳೂರಿನ ನಿವಾಸಿಗಳಿಗೆ ನಗರದ ಟ್ರಾಫಿಕ್ ಕಿರಿ-ಕಿರಿ ಪರಿಚಯವಿರುತ್ತದೆ. ಅಬ್ದುಲ್ ಕಲಾಂ ಸಹ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಯಬೇಕು ಎಂಬ ಆಶಯವ ವ್ಯಕ್ತಪಡಿಸಿದ್ದರು.
2005ರಲ್ಲಿ ಸುವರ್ಣ ಕರ್ನಾಟಕ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ನಮ್ಮ ಮೆಟ್ರೋ ಯೋಜನೆ ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದ್ದರು. ಮೆಟ್ರೋ ಯೋಜನೆಯಿಂದ ಪ್ರತ್ಯೇಕ ಮಾರ್ಗ ನಿರ್ಮಾಣವಾಗಲಿದ್ದು, ಸಂಚಾರ ದಟ್ಟಣೆ ಕಡಿಮೆಯಾಗಲು ಇದು ಸಹಕಾರಿಯಾಗಲಿದೆ ಎಂದು ಹೇಳಿದ್ದರು.
ಉದ್ಯಾನ ನಗರಿಯ ಪ್ರಕೃತಿ ಸೌಂದರ್ಯವನ್ನು ಹಾಗೆಯೇ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದ ಡಾ.ಕಲಾಂ ಅವರು, ನಗರದಲ್ಲಿ ಕೈಗೊಳ್ಳುವ ಅಭಿವೃದ್ಧಿ ಚಟುವಟಿಕೆಗಳಿಂದ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದು ತಿಳಿಸಿದ್ದರು.
ಐಟಿ ಬೇರೆ ನಗರಗಳಿಗೂ ವಿಸ್ತರಣೆಯಾಗಲಿ : ಬೆಂಗಳೂರಿಗೆ ಸೀಮಿತವಾಗಿರುವ ಐಟಿ ಕಂಪನಿಗಳು ಬೇರೆ ನಗರಗಳಿಗೂ ವಿಸ್ತರಣೆಯಾಗಬೇಕು ಎಂಬುದು ಕಲಾಂ ಆಶಯವಾಗಿತ್ತು. ಮೈಸೂರು, ಬೆಳಗಾವಿ, ಮಂಗಳೂರು, ಮಡಿಕೇರಿ, ಹುಬ್ಬಳ್ಳಿ-ಧಾರವಾಡದಲ್ಲಿಯೂ ಐಟಿ ಕಂಪನಿಗಳು ಸ್ಥಾಪನೆಗಯಾಗಬೇಕು ಎಂದು ಅವರು ಬಯಸಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications